ಗದಗ: ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ವರ್ಗಾವಣೆ ಗೊಂಡಿರುವ ನಿಕಟಪೂರ್ವ ಎಸ್ಪಿ ಶ್ರೀನಾಥ ಜೋಶಿ ನೂತನ ಎಸ್ಪಿಯವರಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದರು. 2016 ರ ಕರ್ನಾಟಕ ಕೇಡರ್ನ ಯತೀಶ್ ಅವರು ಮೊದಲು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಹುದ್ದೆಯಲ್ಲಿದ್ದರು.
ಸದ್ಯ ಗದಗ ಜಿಲ್ಲೆಯ ನೂತನ ಎಸ್ಪಿ ಆಗಿರುವ ಅವರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.