ETV Bharat / state

ಸುಗಮ ಸಂಚಾರಕ್ಕೆ ಅನುವಾಗಲು ಮಲೆನಾಡಿಗೆ 10 ಮಿನಿ ಬಸ್​: ಸಚಿವ ರೇವಣ್ಣ - undefined

ಮಲೆನಾಡಿನಲ್ಲಿ ಕೆಎಸ್​​ಆರ್​ಟಿಸಿ ಬಸ್​ಗಳು ಸಂಚರಿಸಲು ಕಷ್ಟವಾದ್ದರಿಂದ ಈ ಭಾಗಕ್ಕೆ 10 ಮಿನಿ ಬಸ್​ಗಳನ್ನು ಬಿಡುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ.

ಸಚಿವ ರೇವಣ್ಣ ಹೊಳೆನರಸೀಪುರದಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಕಾರ್ಯಕ್ರಮದಲ್ಲಿ ಮಾತನಾಡಿದರು.
author img

By

Published : Jun 28, 2019, 9:39 AM IST

Updated : Jun 28, 2019, 1:22 PM IST

ಹೊಳೆನರಸೀಪುರ: ಮಲೆನಾಡ ಪ್ರದೇಶದಲ್ಲಿ ಬಸ್ ಸಂಚರಿಸಲು ಸಾಧ್ಯವಾಗದ ಪ್ರದೇಶಗಳಲ್ಲಿ ಹತ್ತು ಮಿನಿ ಬಸ್​ಗಳನ್ನು ನೀಡುವಂತೆ ಸಾರಿಗೆ ಸಚಿವರಿಗೆ ಮನವಿ ನೀಡಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಹೇಳಿದರು.

ಸಚಿವ ರೇವಣ್ಣ ಹೊಳೆನರಸೀಪುರದಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು

ಹೊಳೆನರಸೀಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ, ಕಾಂಕ್ರಿಟೀಕರಣ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನರೆವೇರಿಸಿದ ಬಳಿಕ ಅವರು ಮಾತನಾಡಿದರು.

ಸಕಲೇಶಪುರ, ಆಲೂರು, ಬೇಲೂರು ಮತ್ತು ಅರಕಲಗೂಡು ತಾಲೂಕಿನ ಕೆಲವೆಡೆ ಸಾರಿಗೆ ಸಂಸ್ಥೆಯ ಬಸ್​ಗಳು ಸಂಚರಿಸುವುದು ಕಷ್ಟವಾಗಿದ್ದು, ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ನಾಗರಿಕರಿಗೆ ಹೆಚ್ಚು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್​​ಗಳನ್ನು ಒದಗಿಸುವಂತೆ ಸಾರಿಗೆ ಸಚಿವರ ಗಮನಕ್ಕೆ ತಂದಿರುವುದಾಗಿ ಹೇಳಿದರು.

ತಾಲೂಕು ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿಗೆ 5 ಕೋಟಿ ಮೀಸಲಿರಿಸಿದ್ದು, ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಕೆ.ಎಸ್.ಆರ್.ಟಿ.ಸಿ ನೌಕರರ ವಸತಿ ಗೃಹ ನಿರ್ಮಿಸಿಕೊಡಲಾಗುವುದು. ಪ್ರಸ್ತುತ ಇರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಯಂತ್ರೋಪಕರಣ ಖರೀದಿಗೆ ಹಾಗೂ ಇತರ ಕಾರ್ಯಗಳಿಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಎಂಜಿನಿಯರಿಂಗ್ ಕಾಲೇಜು, ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಇದ ಉಪಯೋಗವನ್ನು ಗ್ರಾಮೀಣ ಭಾಗದ ರೈತರ ಮಕ್ಕಳು ಪಡೆಯಬೇಕು. ಇನ್ನು ಹೊಳೆನರಸೀಪುರ ಪಟ್ಟಣದಲ್ಲಿ 7 ಕೋಟಿ ವೆಚ್ಚದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಚಿವರು ಇದೇ ವೇಳೆ ಮಾಹಿತಿ ನೀಡಿದರು.

ಇನ್ನು ಜಿಲ್ಲೆಯ ಗಾಂಧಿವಾದಿ ರಾಮಪ್ರಸಾದ್ ಅವರ ಸ್ಮರಣಾರ್ಥ ಹಿಂದಿ ಪ್ರಚಾರ ಭವನವವೊಂದನ್ನು 1.2 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ಹೊಳೆನರಸೀಪುರ: ಮಲೆನಾಡ ಪ್ರದೇಶದಲ್ಲಿ ಬಸ್ ಸಂಚರಿಸಲು ಸಾಧ್ಯವಾಗದ ಪ್ರದೇಶಗಳಲ್ಲಿ ಹತ್ತು ಮಿನಿ ಬಸ್​ಗಳನ್ನು ನೀಡುವಂತೆ ಸಾರಿಗೆ ಸಚಿವರಿಗೆ ಮನವಿ ನೀಡಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಹೇಳಿದರು.

ಸಚಿವ ರೇವಣ್ಣ ಹೊಳೆನರಸೀಪುರದಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು

ಹೊಳೆನರಸೀಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ, ಕಾಂಕ್ರಿಟೀಕರಣ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನರೆವೇರಿಸಿದ ಬಳಿಕ ಅವರು ಮಾತನಾಡಿದರು.

ಸಕಲೇಶಪುರ, ಆಲೂರು, ಬೇಲೂರು ಮತ್ತು ಅರಕಲಗೂಡು ತಾಲೂಕಿನ ಕೆಲವೆಡೆ ಸಾರಿಗೆ ಸಂಸ್ಥೆಯ ಬಸ್​ಗಳು ಸಂಚರಿಸುವುದು ಕಷ್ಟವಾಗಿದ್ದು, ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ನಾಗರಿಕರಿಗೆ ಹೆಚ್ಚು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್​​ಗಳನ್ನು ಒದಗಿಸುವಂತೆ ಸಾರಿಗೆ ಸಚಿವರ ಗಮನಕ್ಕೆ ತಂದಿರುವುದಾಗಿ ಹೇಳಿದರು.

ತಾಲೂಕು ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿಗೆ 5 ಕೋಟಿ ಮೀಸಲಿರಿಸಿದ್ದು, ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಕೆ.ಎಸ್.ಆರ್.ಟಿ.ಸಿ ನೌಕರರ ವಸತಿ ಗೃಹ ನಿರ್ಮಿಸಿಕೊಡಲಾಗುವುದು. ಪ್ರಸ್ತುತ ಇರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಯಂತ್ರೋಪಕರಣ ಖರೀದಿಗೆ ಹಾಗೂ ಇತರ ಕಾರ್ಯಗಳಿಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಎಂಜಿನಿಯರಿಂಗ್ ಕಾಲೇಜು, ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಇದ ಉಪಯೋಗವನ್ನು ಗ್ರಾಮೀಣ ಭಾಗದ ರೈತರ ಮಕ್ಕಳು ಪಡೆಯಬೇಕು. ಇನ್ನು ಹೊಳೆನರಸೀಪುರ ಪಟ್ಟಣದಲ್ಲಿ 7 ಕೋಟಿ ವೆಚ್ಚದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಚಿವರು ಇದೇ ವೇಳೆ ಮಾಹಿತಿ ನೀಡಿದರು.

ಇನ್ನು ಜಿಲ್ಲೆಯ ಗಾಂಧಿವಾದಿ ರಾಮಪ್ರಸಾದ್ ಅವರ ಸ್ಮರಣಾರ್ಥ ಹಿಂದಿ ಪ್ರಚಾರ ಭವನವವೊಂದನ್ನು 1.2 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

Intro:ಹೊಳೆನರಸೀಪುರ: ಮಲೆನಾಡ ಪ್ರದೇಶದಲ್ಲಿ ಬಸ್ ಸಂಚರಿಸಲು ಸಾಧ್ಯವಾಗದ ಪ್ರದೇಶಗಳಲ್ಲಿ ಹತ್ತು ಮಿನಿ ಬಸ್ ಗಳನ್ನು ನೀಡುವಂತೆ ಸಾರಿಗೆ ಸಚಿವರಿಗೆ ಮನವಿ ನೀಡಿದ್ದೆನೆಂದು ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಹೇಳಿದ್ರು.

ಹಾಸನದ ಹೊಳೆನರಸೀಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಅಭಿವೃದ್ದಿ ಕಾಮಗಾರಿ ಮತ್ತು ಕಾಂಕ್ರಿಟೀಕರನ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನರೆವೇರಿಸಿದ ಬಳಿಕ ಅವರು ಮಾತನಾಡಿದ್ರು. ಸಕಲೇಶಪುರ, ಆಲೂರು, ಬೇಲೂರು ಮತ್ತು ಅರಕಲಗೂಡು ತಾಲ್ಲೂಕಿನ ಕೆಲವೆಡೆ ಕರ್ನಾಟಕ ಸಾರಿಗ ಬಸ್ ಗಳು ಸಂಚರಿಸುವುದು ದುಸ್ತರವಾಗಿದ್ದು, ಇದ್ರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ನಾಗರೀಕರಿಗೆ ಹೆಚ್ಚು ಅನುಕೂಲವಾಗುವಂತೆ ಅಂತಹ ಪ್ರದೇಶಗಳಿಗೆ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಮಿನಿ ಬಸ್ ಗಳನ್ನ ನೀಡುವಂತೆ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದೇನೆ ಎಂದ್ರು.

ತಾಲೂಕು ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿಗೆ 5 ಕೋಟಿ ರೂ.ಗಳನ್ನ ಮೀಸಲಿರಿಸಿದ್ದು, ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಕೆಎಸ್ಆರ್ಟಿಸಿ ವಿಭಾಗದ ನೌಕರರ ವಸತಿ ಗೃಹ ನಿರ್ಮಿಸಿ ಅವರಿಗೆ ನೀಡಲಾಗುವುದು. ಇರುವ ಪ್ರಾದೇಶಿಕ ಕಾರ್ಯಗಾರದಲ್ಲಿ 12 ಕೋಟಿ ರೂಗಳ ವೆಚ್ಚದಲ್ಲಿ ಆಧುನಿಕ ಯಂತ್ರೋಪಕರಣ ಖರೀದಿಗೆ ಹಾಗೂ ಇತರ ಕಾರ್ಯಗಳಿಗೆ ಶೀಘ್ರದಲ್ಲಿ ಚಾಲನೆ ನೀಡುವುದಾಗಿ ತಿಳಿಸಿದ್ರು.

ಜಿಲ್ಲೆಯಲ್ಲಿ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಇಂಜಿನಿಯರಿಂಗ್ ಕಾಲೇಜು, ಪ್ರಥಮದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಪ್ರಾರಂಭಿಸಲಾಗಿದೆ. ಇದನ್ನ ಗ್ರಾಮೀಣಾ ಭಾಗದ ರೈತರ ಮಕ್ಕಳು ಉಪಯೋಗಪಡಿಸಿಕೊಳ್ಳಬೇಕು. ಇನ್ನು ಹೊಳೆನರಸೀಪುರ ಪಟ್ಟಣದಲ್ಲಿ 7 ಕೋಟಿ ರೂ.ಗಳ ವೆಚ್ಚದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಅನುಮೋದನೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದ್ರು.
ಇನ್ನು ಜಿಲ್ಲೆಯ ಗಾಂಧಿವಾದಿ ಮತ್ತು ದೇವೇಗೌಡ್ರ ಸಮಕಾಲೀನರಾದ್ರ ರಾಮಪ್ರಸಾದ್ ರವರ ಸ್ಮರಣಾರ್ಥ ಹಿಂದಿ ಪ್ರಚಾರ ಭವನವವೊಂದನ್ನ 1.2ಕೋಟಿ ವ್ಯಚ್ಚದಲ್ಲಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ ಎಂದ್ರು.

ಬೈಟ್: ರೇವಣ್ಣ, ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ.Body:0Conclusion:0
Last Updated : Jun 28, 2019, 1:22 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.