ETV Bharat / state

ಹಾಸನದಲ್ಲಿ ಇಂದು 101 ಮಂದಿಗೆ ತಗುಲಿದ ಕೊರೊನಾ: ಓರ್ವ ಬಲಿ

ದೇಶವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಜಿಲ್ಲೆಯಲ್ಲೂ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು 101 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

author img

By

Published : Jul 31, 2020, 5:24 PM IST

Dr. Satish
Dr. Satish

ಹಾಸನ: ಜಿಲ್ಲೆಯಲ್ಲಿ‌ ಇಂದು 101 ಕೊರೊನಾ ಪಾಸಿಟಿವ್ ಕೇಸ್​​ ಪತ್ತೆಯಾಗಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಾ. ಸತೀಶ್, ಆಲೂರುನಲ್ಲಿ 1, ಬೇಲೂರಿನಲ್ಲಿ 30, ಹಾಸನದಲ್ಲಿ 49, ಅರಸೀಕೆರೆಯಲ್ಲಿ 13, ಚನ್ನರಾಯಪಟ್ಟಣದಲ್ಲಿ 5, ಅರಕಲಗೂಡಿನಲ್ಲಿ 1, ಹೊಳೆನರಸೀಪುರದದಲ್ಲಿ 1, ಸಕಲೇಶಪುರದಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 101 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2131ಕ್ಕೆ ಏರಿಕೆಯಾಗಿದೆ.

ಇಂದು 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 921 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. 61 ಮಂದಿ ಸೋಂಕಿಗೆ ಬಲಿಯಾಗಿದ್ದು, ಸದ್ಯ 1149 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ಕೆಮ್ಮು ಸಮಸ್ಯೆ ಕಂಡು ಬಂದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 87.
2. ಅರಕಲಗೂಡು- 145.
3. ಅರಸೀಕೆರೆ- 386.
4. ಬೇಲೂರು-142.
5. ಚನ್ನರಾಯಪಟ್ಟಣ-389.
6. ಹಾಸನ-691.
7. ಹೊಳೆನರಸೀಪುರ-201.
8. ಸಕಲೇಶಪುರ-77.
ಇತರೆ 13 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 2131 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಸತೀಶ್ ತಿಳಿಸಿದ್ದಾರೆ.

ಹಾಸನ: ಜಿಲ್ಲೆಯಲ್ಲಿ‌ ಇಂದು 101 ಕೊರೊನಾ ಪಾಸಿಟಿವ್ ಕೇಸ್​​ ಪತ್ತೆಯಾಗಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಾ. ಸತೀಶ್, ಆಲೂರುನಲ್ಲಿ 1, ಬೇಲೂರಿನಲ್ಲಿ 30, ಹಾಸನದಲ್ಲಿ 49, ಅರಸೀಕೆರೆಯಲ್ಲಿ 13, ಚನ್ನರಾಯಪಟ್ಟಣದಲ್ಲಿ 5, ಅರಕಲಗೂಡಿನಲ್ಲಿ 1, ಹೊಳೆನರಸೀಪುರದದಲ್ಲಿ 1, ಸಕಲೇಶಪುರದಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 101 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2131ಕ್ಕೆ ಏರಿಕೆಯಾಗಿದೆ.

ಇಂದು 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 921 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. 61 ಮಂದಿ ಸೋಂಕಿಗೆ ಬಲಿಯಾಗಿದ್ದು, ಸದ್ಯ 1149 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ಕೆಮ್ಮು ಸಮಸ್ಯೆ ಕಂಡು ಬಂದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 87.
2. ಅರಕಲಗೂಡು- 145.
3. ಅರಸೀಕೆರೆ- 386.
4. ಬೇಲೂರು-142.
5. ಚನ್ನರಾಯಪಟ್ಟಣ-389.
6. ಹಾಸನ-691.
7. ಹೊಳೆನರಸೀಪುರ-201.
8. ಸಕಲೇಶಪುರ-77.
ಇತರೆ 13 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 2131 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.