ETV Bharat / state

ಹಾಸನದಲ್ಲಿಂದು ಹೊಸದಾಗಿ 109 ಕೋವಿಡ್‌ ಪ್ರಕರಣ ವರದಿ

author img

By

Published : Oct 23, 2020, 3:22 PM IST

ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 109 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇಂದು ಬಿಡುಗಡೆಯಾದ 316 ಜನರು ಸೇರಿ ಈವರೆಗೆ 21,566 ಮಂದಿ ಗುಣಮುಖರಾಗಿದ್ದಾರೆ. 1,930 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಸನದಲ್ಲಿ ಇಂದು ಹೊಸದಾಗಿ 109 ಕೋವಿಡ್‌ ಪ್ರಕರಣಗಳು ವರದಿ

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 109 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,909 ಕ್ಕೆ ಏರಿಕೆಯಾಗಿದೆ. 4 ಜನ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 413 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಕೋವಿಡ್‌ ಪ್ರಕರಣಗಳು ವರದಿ
ಕೋವಿಡ್‌ ಪ್ರಕರಣಗಳ ಕುರಿತ ಪತ್ರಿಕಾ ಪ್ರಕಟಣೆ

ಇಂದು ಬಿಡುಗಡೆಯಾದ 316 ಜನರು ಸೇರಿ ಈವರೆಗೆ 21,566 ಮಂದಿ ಗುಣಮುಖರಾಗಿದ್ದಾರೆ. 1,930 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-7, ಅರಕಲಗೂಡು-15, ಅರಸೀಕೆರೆ-6, ಬೇಲೂರು-6, ಚನ್ನರಾಯಪಟ್ಟಣ-18, ಹಾಸನ-44, ಹೊಳೆನರಸೀಪುರ-4, ಸಕಲೇಶಪುರ-8, ಇತರೆ- 1 ಒಟ್ಟು 109 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಾಧಿಕಾರಿಯಿಂದ ಮಾಹಿತಿ

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 109 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,909 ಕ್ಕೆ ಏರಿಕೆಯಾಗಿದೆ. 4 ಜನ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 413 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಕೋವಿಡ್‌ ಪ್ರಕರಣಗಳು ವರದಿ
ಕೋವಿಡ್‌ ಪ್ರಕರಣಗಳ ಕುರಿತ ಪತ್ರಿಕಾ ಪ್ರಕಟಣೆ

ಇಂದು ಬಿಡುಗಡೆಯಾದ 316 ಜನರು ಸೇರಿ ಈವರೆಗೆ 21,566 ಮಂದಿ ಗುಣಮುಖರಾಗಿದ್ದಾರೆ. 1,930 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-7, ಅರಕಲಗೂಡು-15, ಅರಸೀಕೆರೆ-6, ಬೇಲೂರು-6, ಚನ್ನರಾಯಪಟ್ಟಣ-18, ಹಾಸನ-44, ಹೊಳೆನರಸೀಪುರ-4, ಸಕಲೇಶಪುರ-8, ಇತರೆ- 1 ಒಟ್ಟು 109 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಾಧಿಕಾರಿಯಿಂದ ಮಾಹಿತಿ

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.