ETV Bharat / state

ಹಾಸನದಲ್ಲಿ ಮುಂದುವರೆದ ಕೊರೊನಾ ಕೇಕೆ : ಇಂದು 13 ಜನರಿಗೆ ಸೋಂಕು ಧೃಡ

author img

By

Published : May 26, 2020, 7:18 PM IST

ವರದಿಯಾದ ಎಲ್ಲಾ ಪಾಸಿಟೀವ್ ಪ್ರಕರಣಗಳಿಗೆ ಮಹಾರಾಷ್ಟ್ರದಿಂದ ಆಗಮಿಸಿದವರ ಹಿನ್ನಲೆ ಇದೆ. ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ. ಸೋಂಕು ಪತ್ತೆಯಾದ ಎಲ್ಲರನ್ನೂ ಕೊರೊನಾ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ತಿಳಿಸಿದರು.

hassan
ಹಾಸನದಲ್ಲಿ ಮುಂದುವರೆದ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ವರದಿಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರದಿಂದ ಬಂದ ಹಿನ್ನಲೆ ಇದೆ. ಎಲ್ಲರೂ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದಾರೆ. ಸೋಂಕು ಪತ್ತೆಯಾದ ಎಲ್ಲರನ್ನೂ ನಗರದ ಕೊರೊನಾ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು.

ಹಾಸನದ ಜಿಲ್ಲಾಧಿಕಾರಿ ಆರ್​ ಗಿರೀಶ್

ನಗರದ ಉತ್ತರಬಡಾವಣೆ ಹಾಗೂ ಬಿ. ಕಾಟೀಹಳ್ಳಿ ಪ್ರದೇಶಗಳನ್ನು ನಿರ್ಬಂಧಿತ ವಲಯಗಳನ್ನಾಗಿ ಗುರುತಿಸಲಾಗಿದ್ದು, ಉತ್ತರ ಬಡಾವಣೆಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದ 5 ಜನರನ್ನು ಪ್ರಥಮ ಸಂಪರ್ಕಿತರನ್ನಾಗಿ ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರೆಲ್ಲರಿಗೂ ವರದಿ ನೆಗೆಟಿವ್ ಎಂದು ಬಂದಿದೆ. ಬಿ. ಕಾಟೀಹಳ್ಳಿಯಲ್ಲಿ 21 ಜನರನ್ನು ಪ್ರಥಮ ಸಂಪರ್ಕಿತರನ್ನಾಗಿ ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ 17 ಮಂದಿಯ ವರದಿ ನೆಗೆಟಿವ್ ಇದ್ದು, 4 ಜನರ ವರದಿ ನಿರೀಕ್ಷಣೆಯಲ್ಲಿದೆ ಎಂದರು.

ಸರ್ಕಾರದ ಆದೇಶದಂತೆ ನಿರ್ಬಂಧಿತ ಪ್ರದೇಶಗಳಲ್ಲಿ 28 ದಿನಗಳವರೆಗೆ ನಿರ್ಬಂಧ ಮುಂದುವರೆಯುತ್ತದೆ. ಈ ನಿಟ್ಟಿನಲ್ಲಿ ಆ ಪ್ರದೇಶದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂಟೈನ್ಮೆಂಟ್​ ವಲಯ ಪ್ರದೇಶದ ಪ್ರತಿಯೊಂದು ಮನೆಗಳನ್ನು ಗುರುತಿಸಿ ಭೇಟಿ ನೀಡಿ ಪ್ರತಿನಿತ್ಯ ಅವರ ಆರೋಗ್ಯ ಲಕ್ಷಣಗಳ ವರದಿ ಪಡೆಯಲಾಗುತ್ತದೆ ಎಂದು ಹೇಳಿದರು.

ಮೇ 28ರಂದು ಪಶ್ವಿಮ ಬಂಗಾಳಕ್ಕೆ ಹೋಗುವವರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಹಾಸನದಿಂದ ಸುಮಾರು 948 ಜನ ಹಾಗೂ ಮಡಿಕೇರಿಯಿಂದ ಸುಮಾರು 550 ಜನ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಆರ್. ಶ್ರೀನಿವಾಸ್ ಗೌಡ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅನಗತ್ಯ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ವರದಿಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರದಿಂದ ಬಂದ ಹಿನ್ನಲೆ ಇದೆ. ಎಲ್ಲರೂ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದಾರೆ. ಸೋಂಕು ಪತ್ತೆಯಾದ ಎಲ್ಲರನ್ನೂ ನಗರದ ಕೊರೊನಾ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು.

ಹಾಸನದ ಜಿಲ್ಲಾಧಿಕಾರಿ ಆರ್​ ಗಿರೀಶ್

ನಗರದ ಉತ್ತರಬಡಾವಣೆ ಹಾಗೂ ಬಿ. ಕಾಟೀಹಳ್ಳಿ ಪ್ರದೇಶಗಳನ್ನು ನಿರ್ಬಂಧಿತ ವಲಯಗಳನ್ನಾಗಿ ಗುರುತಿಸಲಾಗಿದ್ದು, ಉತ್ತರ ಬಡಾವಣೆಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದ 5 ಜನರನ್ನು ಪ್ರಥಮ ಸಂಪರ್ಕಿತರನ್ನಾಗಿ ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರೆಲ್ಲರಿಗೂ ವರದಿ ನೆಗೆಟಿವ್ ಎಂದು ಬಂದಿದೆ. ಬಿ. ಕಾಟೀಹಳ್ಳಿಯಲ್ಲಿ 21 ಜನರನ್ನು ಪ್ರಥಮ ಸಂಪರ್ಕಿತರನ್ನಾಗಿ ಗುರುತಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ 17 ಮಂದಿಯ ವರದಿ ನೆಗೆಟಿವ್ ಇದ್ದು, 4 ಜನರ ವರದಿ ನಿರೀಕ್ಷಣೆಯಲ್ಲಿದೆ ಎಂದರು.

ಸರ್ಕಾರದ ಆದೇಶದಂತೆ ನಿರ್ಬಂಧಿತ ಪ್ರದೇಶಗಳಲ್ಲಿ 28 ದಿನಗಳವರೆಗೆ ನಿರ್ಬಂಧ ಮುಂದುವರೆಯುತ್ತದೆ. ಈ ನಿಟ್ಟಿನಲ್ಲಿ ಆ ಪ್ರದೇಶದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂಟೈನ್ಮೆಂಟ್​ ವಲಯ ಪ್ರದೇಶದ ಪ್ರತಿಯೊಂದು ಮನೆಗಳನ್ನು ಗುರುತಿಸಿ ಭೇಟಿ ನೀಡಿ ಪ್ರತಿನಿತ್ಯ ಅವರ ಆರೋಗ್ಯ ಲಕ್ಷಣಗಳ ವರದಿ ಪಡೆಯಲಾಗುತ್ತದೆ ಎಂದು ಹೇಳಿದರು.

ಮೇ 28ರಂದು ಪಶ್ವಿಮ ಬಂಗಾಳಕ್ಕೆ ಹೋಗುವವರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಹಾಸನದಿಂದ ಸುಮಾರು 948 ಜನ ಹಾಗೂ ಮಡಿಕೇರಿಯಿಂದ ಸುಮಾರು 550 ಜನ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಆರ್. ಶ್ರೀನಿವಾಸ್ ಗೌಡ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅನಗತ್ಯ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.