ETV Bharat / state

ಹಾಸನದಲ್ಲಿಂದು 138 ಕೊರೊನಾ ಪ್ರಕರಣ ದೃಢ, 4 ಸಾವು

author img

By

Published : Oct 21, 2020, 5:24 PM IST

Updated : Oct 21, 2020, 5:52 PM IST

ಹಾಸನದಲ್ಲಿ ಇಂದು 138 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್
ಆರೋಗ್ಯಾಧಿಕಾರಿ ಸತೀಶ್

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 138 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,704ಕ್ಕೆ ಏರಿಕೆಯಾಗಿದೆ. 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 404 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 389 ಜನರು ಸೇರಿ ಈವರೆಗೆ 20,982 ಮಂದಿ ಗುಣಮುಖರಾಗಿದ್ದಾರೆ. 2318 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್ ಮಾಹಿತಿ

ತಾಲೂಕುವಾರು ಪ್ರಕರಣ: ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-3, ಅರಸೀಕೆರೆ-2, ಬೇಲೂರು-5, ಚನ್ನರಾಯಪಟ್ಟಣ-14, ಹಾಸನ-91, ಹೊಳೆನರಸೀಪುರ-16, ಸಕಲೇಶಪುರ-5, ಇತರೆ- 0 ಒಟ್ಟು 138 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಆರೋಗ್ಯಧಿಕಾರಿ ಮನವಿ ಮಾಡಿದರು.

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 138 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,704ಕ್ಕೆ ಏರಿಕೆಯಾಗಿದೆ. 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 404 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 389 ಜನರು ಸೇರಿ ಈವರೆಗೆ 20,982 ಮಂದಿ ಗುಣಮುಖರಾಗಿದ್ದಾರೆ. 2318 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್ ಮಾಹಿತಿ

ತಾಲೂಕುವಾರು ಪ್ರಕರಣ: ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-3, ಅರಸೀಕೆರೆ-2, ಬೇಲೂರು-5, ಚನ್ನರಾಯಪಟ್ಟಣ-14, ಹಾಸನ-91, ಹೊಳೆನರಸೀಪುರ-16, ಸಕಲೇಶಪುರ-5, ಇತರೆ- 0 ಒಟ್ಟು 138 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಆರೋಗ್ಯಧಿಕಾರಿ ಮನವಿ ಮಾಡಿದರು.

Last Updated : Oct 21, 2020, 5:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.