ETV Bharat / state

ಹಾಸನದಲ್ಲಿ 250 ಕೋವಿಡ್​ ಕೇಸ್​​; ಒಂಭತ್ತು ಸಾವಿರಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ!

author img

By

Published : Sep 3, 2020, 4:27 PM IST

Updated : Sep 3, 2020, 8:49 PM IST

ಆಲೂರು-9, ಅರಕಲಗೂಡು-29, ಅರಸೀಕೆರೆ-8, ಬೇಲೂರು-11, ಚನ್ನರಾಯಪಟ್ಟಣ-28, ಹಾಸನ-137, ಹೊಳೆನರಸೀಪುರ-13, ಸಕಲೇಶಪುರ-14 ಸೇರಿದಂತೆ ಇಂದು ಹಾಸನ ಜಿಲ್ಲೆಯಲ್ಲಿ ಹೊಸದಾಗಿ 250 ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

covid
ಕೋವಿಡ್

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 250 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 9,026 ಕ್ಕೆ ಏರಿಕೆಯಾಗಿದೆ. ಐವರ ಸಾವಿನೊಂದಿಗೆ ಮೃತರ ಸಂಖ್ಯೆ 209 ತಲುಪಿದೆ ಎಂದು ಪ್ರಭಾರ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ 190 ಜನರು ಸೇರಿ, ಈವರೆಗೆ 5,916 ಮಂದಿ ಗುಣಮುಖರಾಗಿದ್ದಾರೆ. 2,901 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-9, ಅರಕಲಗೂಡು-29, ಅರಸೀಕೆರೆ-8, ಬೇಲೂರು-11, ಚನ್ನರಾಯಪಟ್ಟಣ-28, ಹಾಸನ-137, ಹೊಳೆನರಸೀಪುರ-13, ಸಕಲೇಶಪುರ-14 ಹಾಗೂ ಇತರೆ- 1 ಸೇರಿ ಒಟ್ಟು 250 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಭಾರ ಆರೋಗ್ಯಾಧಿಕಾರಿ ಡಾ. ಕಾಂತರಾಜ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟ ಸಮಸ್ಯೆ, ಜ್ವರ, ಶೀತ, ನೆಗಡಿ ಅಥವಾ ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ಗುಣಮಟ್ಟದ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ-ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 250 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 9,026 ಕ್ಕೆ ಏರಿಕೆಯಾಗಿದೆ. ಐವರ ಸಾವಿನೊಂದಿಗೆ ಮೃತರ ಸಂಖ್ಯೆ 209 ತಲುಪಿದೆ ಎಂದು ಪ್ರಭಾರ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ 190 ಜನರು ಸೇರಿ, ಈವರೆಗೆ 5,916 ಮಂದಿ ಗುಣಮುಖರಾಗಿದ್ದಾರೆ. 2,901 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-9, ಅರಕಲಗೂಡು-29, ಅರಸೀಕೆರೆ-8, ಬೇಲೂರು-11, ಚನ್ನರಾಯಪಟ್ಟಣ-28, ಹಾಸನ-137, ಹೊಳೆನರಸೀಪುರ-13, ಸಕಲೇಶಪುರ-14 ಹಾಗೂ ಇತರೆ- 1 ಸೇರಿ ಒಟ್ಟು 250 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಭಾರ ಆರೋಗ್ಯಾಧಿಕಾರಿ ಡಾ. ಕಾಂತರಾಜ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟ ಸಮಸ್ಯೆ, ಜ್ವರ, ಶೀತ, ನೆಗಡಿ ಅಥವಾ ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ಗುಣಮಟ್ಟದ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ-ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

Last Updated : Sep 3, 2020, 8:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.