ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 269 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7,808 ಕ್ಕೆ ಏರಿಕೆಯಾಗಿದೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 190 ಜನರು ಸೇರಿ ಈವರೆಗೆ 5,194 ಮಂದಿ ಗುಣಮುಖರಾಗಿದ್ದಾರೆ. 2,427 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-12, ಅರಕಲಗೂಡು-40, ಅರಸೀಕೆರೆ-60, ಬೇಲೂರು-25, ಚನ್ನರಾಯಪಟ್ಟಣ-42, ಹಾಸನ-67 ಹೊಳೆನರಸೀಪುರ-13, ಸಕಲೇಶಪುರ-9, ಇತರೆ- 1 ಒಟ್ಟು 269 ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದರು.
ಮೃತರ ಮಾಹಿತಿ :
ಜಿಲ್ಲೆಯಲ್ಲಿಂದು ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 187 ತಲುಪಿದೆ ಎಂದರು.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 240
2. ಅರಕಲಗೂಡು 758
3. ಅರಸೀಕೆರೆ 1090
4. ಬೆಲೂರು 622
5. ಚನ್ನರಾಯಪಟ್ಟಣ 1027
7. ಹಾಸನ 3123
8. ಹೊಳೆನರಸೀಪುರದಲ್ಲಿ 673
9. ಸಕಲೇಶಪುರ 223
10. ಇತರ 52 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 7,808 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಕಾಣಿಸಿಕೊಂಡರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.