ETV Bharat / state

ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 300 ಪ್ರತಿಭಾನ್ವಿತ ಮಕ್ಕಳಿಗೆ ಗೌರವ

author img

By

Published : Jan 19, 2021, 9:50 AM IST

ಶಿವದೇವ ಕಲ್ಯಾಣ ಮಂಟಪದಲ್ಲಿ ಎ. ಮಂಜು ಅಭಿಮಾನಿ ಬಳಗದಿಂದ ಭಾನುವಾರ ರಾತ್ರಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ 300 ಪ್ರತಿಭಾನ್ವಿತ ಮಕ್ಕಳಿಗೆ ಪೋಷಕರ ಸಮ್ಮುಖದಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

300 talented children honored at Talent Awards program
ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 300 ಪ್ರತಿಭಾನ್ವಿತ ಮಕ್ಕಳಿಗೆ ಗೌರವ

ಅರಕಲಗೂಡು: ಆಧುನಿಕತೆಗೆ ಒಗ್ಗಿಕೊಳ್ಳುವ ಮೂಲಕ ಮಕ್ಕಳು ದೇಶೀಯ ಕಲೆಗಳತ್ತಲೂ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಮಾಜಿ ಸಚಿವ ಎ. ಮಂಜು ಸಲಹೆ ನೀಡಿದರು.

300 ಪ್ರತಿಭಾನ್ವಿತ ಮಕ್ಕಳಿಗೆ ಗೌರವ

ಪಟ್ಟಣದ ಶಿವದೇವ ಕಲ್ಯಾಣ ಮಂಟಪದಲ್ಲಿ ಎ. ಮಂಜು ಅಭಿಮಾನಿ ಬಳಗದಿಂದ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಲಾಕ್​ಡೌನ್ ಸಮಯದಲ್ಲಿ ಶಾಲೆಗಳು ಮುಚ್ಚಿದ್ದರಿಂದ ಮನೆಯಲ್ಲಿಯೇ ಉಳಿದಿದ್ದ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದ ಮುಖೇನ ಒದಗಿಸಿದ್ದ ವಿಭಿನ್ನ ಪ್ರತಿಭಾ ವೇದಿಕೆಗೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಬೆಂಬಲ‌ ಸಿಕ್ಕಿದ್ದು ಶ್ಲಾಘನೀಯ ಸಂಗತಿ. ಪೋಷಕರು ಮಕ್ಕಳ ಪ್ರತಿಭೆ ಗುರುತಿಸುವ ಕಾರ್ಯವನ್ನು ಹೊಣೆಗಾರಿಕೆಯಾಗಿ ವಹಿಸಿಕೊಳ್ಳಬೇಕು. ಮುಖ್ಯವಾಗಿ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳ ಪಾಲಕರು ಹಾಜರಿರುವುದು ಒಳಿತು ಎಂದರು.

ಸಂಗೀತ ಪ್ರತಿಭೆ ಮೂಲಕ ಭಾವೈಕ್ಯತೆ ಮೆರೆದು ರಾಜ್ಯಕ್ಕೆ ಕೀರ್ತಿ ತಂದ ರಿಫಾ ತಾಜ್: ವಿಡಿಯೋ

ನಟಿ ದೀಪಿಕಾ ದಾಸ್ ಮಾತನಾಡಿ, ಯಾರಲ್ಲಿ ಯಾವ ಪ್ರತಿಭೆ ಅಡಗಿರುತ್ತದೆಯೋ ಗೊತ್ತಿರುವುದಿಲ್ಲ. ಹಾಗಾಗಿ ವಿದ್ಯೆಗೆ ನೀಡುವಷ್ಟೇ ಆದ್ಯತೆಯನ್ನು ಕಲೆ ಮತ್ತು ಕ್ರೀಡೆಗಳಿಗೆ ನೀಡಿದರೆ ಭವಿಷ್ಯ ಕಟ್ಟಿಕೊಳ್ಳಲು ಸಹಾಯವಾಗಲಿದೆ ಎಂದು ಹೇಳಿದರು.

ಈ ವೇಳೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರತಿಭೆ ಹೊರಹಾಕಿದ್ದ 300 ಪ್ರತಿಭಾನ್ವಿತ ಮಕ್ಕಳಿಗೆ ಪೋಷಕರ ಸಮ್ಮುಖದಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಅರಕಲಗೂಡು: ಆಧುನಿಕತೆಗೆ ಒಗ್ಗಿಕೊಳ್ಳುವ ಮೂಲಕ ಮಕ್ಕಳು ದೇಶೀಯ ಕಲೆಗಳತ್ತಲೂ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಮಾಜಿ ಸಚಿವ ಎ. ಮಂಜು ಸಲಹೆ ನೀಡಿದರು.

300 ಪ್ರತಿಭಾನ್ವಿತ ಮಕ್ಕಳಿಗೆ ಗೌರವ

ಪಟ್ಟಣದ ಶಿವದೇವ ಕಲ್ಯಾಣ ಮಂಟಪದಲ್ಲಿ ಎ. ಮಂಜು ಅಭಿಮಾನಿ ಬಳಗದಿಂದ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಲಾಕ್​ಡೌನ್ ಸಮಯದಲ್ಲಿ ಶಾಲೆಗಳು ಮುಚ್ಚಿದ್ದರಿಂದ ಮನೆಯಲ್ಲಿಯೇ ಉಳಿದಿದ್ದ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದ ಮುಖೇನ ಒದಗಿಸಿದ್ದ ವಿಭಿನ್ನ ಪ್ರತಿಭಾ ವೇದಿಕೆಗೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಬೆಂಬಲ‌ ಸಿಕ್ಕಿದ್ದು ಶ್ಲಾಘನೀಯ ಸಂಗತಿ. ಪೋಷಕರು ಮಕ್ಕಳ ಪ್ರತಿಭೆ ಗುರುತಿಸುವ ಕಾರ್ಯವನ್ನು ಹೊಣೆಗಾರಿಕೆಯಾಗಿ ವಹಿಸಿಕೊಳ್ಳಬೇಕು. ಮುಖ್ಯವಾಗಿ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳ ಪಾಲಕರು ಹಾಜರಿರುವುದು ಒಳಿತು ಎಂದರು.

ಸಂಗೀತ ಪ್ರತಿಭೆ ಮೂಲಕ ಭಾವೈಕ್ಯತೆ ಮೆರೆದು ರಾಜ್ಯಕ್ಕೆ ಕೀರ್ತಿ ತಂದ ರಿಫಾ ತಾಜ್: ವಿಡಿಯೋ

ನಟಿ ದೀಪಿಕಾ ದಾಸ್ ಮಾತನಾಡಿ, ಯಾರಲ್ಲಿ ಯಾವ ಪ್ರತಿಭೆ ಅಡಗಿರುತ್ತದೆಯೋ ಗೊತ್ತಿರುವುದಿಲ್ಲ. ಹಾಗಾಗಿ ವಿದ್ಯೆಗೆ ನೀಡುವಷ್ಟೇ ಆದ್ಯತೆಯನ್ನು ಕಲೆ ಮತ್ತು ಕ್ರೀಡೆಗಳಿಗೆ ನೀಡಿದರೆ ಭವಿಷ್ಯ ಕಟ್ಟಿಕೊಳ್ಳಲು ಸಹಾಯವಾಗಲಿದೆ ಎಂದು ಹೇಳಿದರು.

ಈ ವೇಳೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರತಿಭೆ ಹೊರಹಾಕಿದ್ದ 300 ಪ್ರತಿಭಾನ್ವಿತ ಮಕ್ಕಳಿಗೆ ಪೋಷಕರ ಸಮ್ಮುಖದಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.