ETV Bharat / state

ಹಾಸನದಲ್ಲಿ ಇಂದು 111 ಕೋವಿಡ್‌ ಪ್ರಕರಣಗಳು ಪತ್ತೆ: ನಾಲ್ವರು ಕೊರೊನಾಕ್ಕೆ ಬಲಿ

author img

By

Published : Oct 29, 2020, 7:06 PM IST

ಜಿಲ್ಲೆಯಲ್ಲಿಂದು 111 ಕೋವಿಡ್‌ ಪ್ರಕರಣಗಳು ಪತ್ತೆಯಾಗುವುದರ ಜೊತೆಗೆ 4 ಮೃತ ಪ್ರಕರಣಗಳು ವರದಿಯಾಗಿದೆ.

4 died from corona in hassan
ಹಾಸನ: 111 ಕೋವಿಡ್‌ ಪ್ರಕರಣಗಳು ಪತ್ತೆ....4 ಬಲಿ

ಹಾಸನ: ಜಿಲ್ಲೆಯಲ್ಲಿಂದು ಹೊಸದಾಗಿ 111 ಕೋವಿಡ್‌ ಪ್ರಕರಣಗಳು ಪತ್ತೆಯಾಗುವುದರ ಜೊತೆಗೆ 4 ಮೃತ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 24,597ಕ್ಕೆ ಮತ್ತು ಮೃತರ ಸಂಖ್ಯೆ 422ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 102 ಜನರು ಸೇರಿ ಈವರೆಗೆ 22,967 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ 1,208 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ತೀವ್ರ ನಿಗಾ ಘಟಕದಲ್ಲಿ 40 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್

ತಾಲೂಕುವಾರು ಪ್ರಕರಣ:

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು - 5, ಅರಕಲಗೂಡು - 2, ಅರಸೀಕೆರೆ - 13, ಬೇಲೂರು -5, ಚನ್ನರಾಯಪಟ್ಟಣ - 29, ಹಾಸನ - 50, ಹೊಳೆನರಸೀಪುರ - 6, ಇತರ- 1 ಪ್ರಕರಣ ಸೇರಿದಂತೆ ಒಟ್ಟು 111 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಾಧಿಕಾರಿ ಮನವಿ:

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ಕೆಮ್ಮು ಏನಾದರೂ ಸಮಸ್ಯೆ ಕಂಡುಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಹಾಸನ: ಜಿಲ್ಲೆಯಲ್ಲಿಂದು ಹೊಸದಾಗಿ 111 ಕೋವಿಡ್‌ ಪ್ರಕರಣಗಳು ಪತ್ತೆಯಾಗುವುದರ ಜೊತೆಗೆ 4 ಮೃತ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 24,597ಕ್ಕೆ ಮತ್ತು ಮೃತರ ಸಂಖ್ಯೆ 422ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 102 ಜನರು ಸೇರಿ ಈವರೆಗೆ 22,967 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ 1,208 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ತೀವ್ರ ನಿಗಾ ಘಟಕದಲ್ಲಿ 40 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯಾಧಿಕಾರಿ ಸತೀಶ್

ತಾಲೂಕುವಾರು ಪ್ರಕರಣ:

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು - 5, ಅರಕಲಗೂಡು - 2, ಅರಸೀಕೆರೆ - 13, ಬೇಲೂರು -5, ಚನ್ನರಾಯಪಟ್ಟಣ - 29, ಹಾಸನ - 50, ಹೊಳೆನರಸೀಪುರ - 6, ಇತರ- 1 ಪ್ರಕರಣ ಸೇರಿದಂತೆ ಒಟ್ಟು 111 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಾಧಿಕಾರಿ ಮನವಿ:

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ಕೆಮ್ಮು ಏನಾದರೂ ಸಮಸ್ಯೆ ಕಂಡುಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.