ETV Bharat / state

ಹಾಸನ ಜಿಲ್ಲೆಯಲ್ಲಿ ಕಿಲ್ಲರ್​ ಕೊರೊನಾಗೆ ಇಂದು ನಾಲ್ವರು ಬಲಿ: ಸಾವಿನ ಸಂಖ್ಯೆ 54ಕ್ಕೆ ಏರಿಕೆ

ಹಾಸನ ಜಿಲ್ಲೆಯಲ್ಲಿಂದು 91 ಜನರಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1933ಕ್ಕೆ ಏರಿಕೆಯಾಗಿದೆ ಹಾಗೂ ನಾಲ್ವರು ಮೃತಪಟ್ಟಿದ್ದಾರೆ. ಸದ್ಯ 994 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

author img

By

Published : Jul 29, 2020, 4:43 PM IST

Dr. Satish
Dr. Satish

ಹಾಸನ: 91 ಜನರಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1933ಕ್ಕೆ ಏರಿಕೆಯಾಗಿದೆ. ಇಂದು ನಾಲ್ವರು ಮೃತಪಟ್ಟಿದ್ದು, ಈವರೆಗೆ 54 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಡಾ. ಸತೀಶ್, ಇಂದು 5 ಜನರು ಗುಣಮುಖರಾಗಿದ್ದು, ಒಟ್ಟು 885 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 994 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಹಾಸನ-23, ಅರಸೀಕೆರೆ-42, ಬೇಲೂರು-04, ಹೊಳೆನರಸೀಪುರ-10, ಆಲೂರು-1, ಚನ್ನರಾಯಪಟ್ಟಣ-4, ಸಕಲೇಶಪುರ-05, ಅರಕಲಗೂಡಿನಲ್ಲಿ 1 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಐಸಿಯುನಲ್ಲಿ 27 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನಲೆ, ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಶೀತ, ಕೆಮ್ಮು ಏನಾದರೂ ಸಮಸ್ಯೆ ಕಂಡುಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕೆಂದು ಡಾ. ಸತೀಶ್ ಮನವಿ​ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 85
2. ಅರಕಲಗೂಡು- 137
3. ಅರಸೀಕೆರೆ- 359
4. ಬೇಲೂರು- 101
5. ಚನ್ನರಾಯಪಟ್ಟಣ- 367
6. ಹಾಸನ-610
7. ಹೊಳೆನರಸೀಪುರ- 186
8. ಸಕಲೇಶಪುರ- 76
9. ಇತರೆ 12 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 1933 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಸತೀಶ್ ವಿವರಿಸಿದರು.

ಹಾಸನ: 91 ಜನರಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1933ಕ್ಕೆ ಏರಿಕೆಯಾಗಿದೆ. ಇಂದು ನಾಲ್ವರು ಮೃತಪಟ್ಟಿದ್ದು, ಈವರೆಗೆ 54 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಡಾ. ಸತೀಶ್, ಇಂದು 5 ಜನರು ಗುಣಮುಖರಾಗಿದ್ದು, ಒಟ್ಟು 885 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 994 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಹಾಸನ-23, ಅರಸೀಕೆರೆ-42, ಬೇಲೂರು-04, ಹೊಳೆನರಸೀಪುರ-10, ಆಲೂರು-1, ಚನ್ನರಾಯಪಟ್ಟಣ-4, ಸಕಲೇಶಪುರ-05, ಅರಕಲಗೂಡಿನಲ್ಲಿ 1 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಐಸಿಯುನಲ್ಲಿ 27 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನಲೆ, ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಶೀತ, ಕೆಮ್ಮು ಏನಾದರೂ ಸಮಸ್ಯೆ ಕಂಡುಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕೆಂದು ಡಾ. ಸತೀಶ್ ಮನವಿ​ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 85
2. ಅರಕಲಗೂಡು- 137
3. ಅರಸೀಕೆರೆ- 359
4. ಬೇಲೂರು- 101
5. ಚನ್ನರಾಯಪಟ್ಟಣ- 367
6. ಹಾಸನ-610
7. ಹೊಳೆನರಸೀಪುರ- 186
8. ಸಕಲೇಶಪುರ- 76
9. ಇತರೆ 12 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 1933 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಸತೀಶ್ ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.