ETV Bharat / state

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು... ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ - undefined

ಹಾಸನ ಜಿಲ್ಲೆಯ ಬೇಲೂ ಬಳಿ ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
author img

By

Published : Apr 10, 2019, 1:24 PM IST

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಬಸ್ಸುಬಿ (55) ಸಾವಿಗೀಡಾದ ಮಹಿಳೆಯಾಗಿದ್ದು, ಅವರ ಕುಟುಂಬ ಇಬ್ಬರು ಗಾಯಗೊಂಡಿದ್ದಾರೆ. ಹರಿ ಹಳ್ಳಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಜರೀನಾ ಹಾಗೂ ಅವರ ಮಗ ಇಂತಿಯಾಜ್ ಪವಾಡ ಸದೃಶ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಬಸ್ಸುಬಿ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.

ಗಂಭೀರವಾಗಿ ಗಾಯಗೊಂಡಿರುವ ಜರೀನಾ ಮತ್ತು ಮಗ ಇಂತಿಯಾಜ್​ಅನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 2013 ಮೇ 23ರಂದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್​ಟಿಸಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 9 ಜನ ಸಾವನ್ನಪ್ಪಿದ್ದರು. ಇಂದು ಮತ್ತೊಂದು ಅವಘಡ ನಡೆದಿದ್ದು, ಈ ಕುರಿತು ಬೇಲೂರು ನಗರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಬಸ್ಸುಬಿ (55) ಸಾವಿಗೀಡಾದ ಮಹಿಳೆಯಾಗಿದ್ದು, ಅವರ ಕುಟುಂಬ ಇಬ್ಬರು ಗಾಯಗೊಂಡಿದ್ದಾರೆ. ಹರಿ ಹಳ್ಳಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಜರೀನಾ ಹಾಗೂ ಅವರ ಮಗ ಇಂತಿಯಾಜ್ ಪವಾಡ ಸದೃಶ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಬಸ್ಸುಬಿ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.

ಗಂಭೀರವಾಗಿ ಗಾಯಗೊಂಡಿರುವ ಜರೀನಾ ಮತ್ತು ಮಗ ಇಂತಿಯಾಜ್​ಅನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 2013 ಮೇ 23ರಂದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್​ಟಿಸಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 9 ಜನ ಸಾವನ್ನಪ್ಪಿದ್ದರು. ಇಂದು ಮತ್ತೊಂದು ಅವಘಡ ನಡೆದಿದ್ದು, ಈ ಕುರಿತು ಬೇಲೂರು ನಗರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಕೆರೆಗೆ ಬಿದ್ದ ಪರಿಣಾಮ ಓರ್ವ ವಯೋವೃದ್ಧ ಮಹಿಳೆ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಬಸ್ಸುಬಿ (55) ಸಾವಿಗೀಡಾದ ಮೃತ ಮಹಿಳೆಯಾಗಿದ್ದು ಹರಿ ಹಳ್ಳಿಯಿಂದ ಹುಬ್ಬಳ್ಳಿ ಗೆ ತೆರಳುತ್ತಿದ್ದ ವೇಳೆ ಇಂತಹದೊಂದು ಘಟನೆ ಸಂಭವಿಸಿದೆ.

ಒಂದೇ ಕುಟುಂಬದ ಮೂವರು ಕೂಡ ಕಾರಿನಲ್ಲಿ ಇದ್ದು ತಾಯಿ ಜರೀನಾ ಹಾಗೂ ಮಗ ಇಂತಿಯಾಜ್ ಆಶ್ಚರ್ಯಕರ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಮೃತ ಮಹಿಳೆಯ ಕಳೆಬರಹವನ್ನ ಹೊರ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ತಾಯಿ ಮತ್ತು ಮಗನ ಬೇಲೂರು ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು ಬೇಲೂರು ನಗರದಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ

2013 ಮೇ 23ರಂದು ಇದೇ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಉರುಳಿಬಿದ್ದು 9 ಜನರನ್ನು ಬಲಿ ತೆಗೆದುಕೊಂಡಿತ್ತುBody:0Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.