ETV Bharat / state

ಬಾಣವಾರದ ಕೃಷಿ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಿಸದೆ ನಿರ್ಲಕ್ಷ್ಯ! ಕ್ರಮಕ್ಕೆ ಆಗ್ರಹ

author img

By

Published : Jan 26, 2020, 7:53 PM IST

ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಆದ್ರೆ, ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮ ಪಂಚಾಯತ್​ ವ್ಯಾಪ್ತಿಯ ಕೃಷಿ ಇಲಾಖೆಯಲ್ಲಿ ಮಾತ್ರ ಗಣರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಲಾಗಿದೆ ಎಂಬ ಮಾಹಿತಿ ದೊರೆತಿದೆ.

A grand republic ceremony in Hassan district feild!
ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಹಾಸನ: ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಗೌರವ ವಂದನೆ ಸ್ವೀಕರಿಸಿದ ಜಿಲ್ಲಾಧಿಕಾರಿ ಆರ್. ಗಿರೀಶ್, ಸಮಗ್ರ ಭಾರತದ ಒಕ್ಕೂಟ ವ್ಯವಸ್ಥೆಯಡಿ ಗಣರಾಜ್ಯದ ಉದಾತ್ತ ಪರಿಕಲ್ಪನೆಗಳು ಮತ್ತು ದೇಶದ ಪ್ರತಿಯೊಬ್ಬ ಪ್ರಜೆಯ ಹಿತದೃಷ್ಟಿಗೆ ನಮ್ಮ ಭಾರತ ಸಂವಿಧಾನ ನೀಡಿರುವ ಕೊಡುಗೆಗಳು ಅಪಾರ. ಇವುಗಳ ರಕ್ಷಣೆಯೊಂದಿಗೆ ದೇಶದ ಏಕತೆ ಮತ್ತು ಸಮಗ್ರತೆಗಳನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ 2019-20ನೇ ಸಾಲಿನಲ್ಲಿ ಅತ್ಯುತ್ತಮ ಸೇವೆಗೈದ ರಾಜ್ಯ ಸರ್ಕಾರಿ ನೌಕರರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೆರೆಯುವ ಹಾಡುಗಳಿಗೆ ಸಾವಿರಾರು ಮಕ್ಕಳು ನೃತ್ಯ ಪ್ರದರ್ಶನ ನೀಡಿ ಗಣ್ಯರ ಮತ್ತು ನೋಡುಗರ ಕಣ್ಮನ ಸೆಳೆದರು. ಜಿಲ್ಲೆಯ ವಿವಿಧ ಶಾಲೆಗಳ 1,500 ವಿದ್ಯಾರ್ಥಿಗಳ ಧ್ವಜ ಕವಾಯತು ಪ್ರದರ್ಶನ ನೋಡುಗರ ಮೆಚ್ಚುಗೆ ಗಳಿಸಿತು. ಅಲ್ಲದೇ, ಅಗ್ನಿ ಶಾಮಕ ಇಲಾಖೆ ವತಿಯಿಂದ ಅಗ್ನಿ ಸುರಕ್ಷತೆಯ ಕುರಿತಂತೆ ವಿವಿಧ ಬಗೆಯ ಅಗ್ನಿ ನಂದಕಗಳನ್ನು ಪ್ರಾಯೋಗಿಕವಾಗಿ ಬಳಸುವುದರ ಬಗ್ಗೆ ಪ್ರಾತ್ಯಕ್ಷತೆಯನ್ನು ನೀಡಲಾಯಿತು.

ದೇಶವೇ ಸಂಭ್ರಮಾಚರಣೆಯಲ್ಲಿರುವಾಗ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮ ಪಂಚಾಯತ್​ ವ್ಯಾಪ್ತಿಯ ಕೃಷಿ ಇಲಾಖೆಯಲ್ಲಿ ಮಾತ್ರ ಗಣರಾಜ್ಯೋತ್ಸವ ಆಚರಿಸದೇ ಧ್ವಜವನ್ನು ಬಾನಂಗಳಕ್ಕೆ ಹಾರಿಸದೆ ಅಗೌರವ ತೋರಲಾಗಿದೆ. ಹಾಗಾಗಿ, ಕೃಷಿ ಅಧಿಕಾರಿ ನಾಗರಾಜ್ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹಾಸನ: ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಗೌರವ ವಂದನೆ ಸ್ವೀಕರಿಸಿದ ಜಿಲ್ಲಾಧಿಕಾರಿ ಆರ್. ಗಿರೀಶ್, ಸಮಗ್ರ ಭಾರತದ ಒಕ್ಕೂಟ ವ್ಯವಸ್ಥೆಯಡಿ ಗಣರಾಜ್ಯದ ಉದಾತ್ತ ಪರಿಕಲ್ಪನೆಗಳು ಮತ್ತು ದೇಶದ ಪ್ರತಿಯೊಬ್ಬ ಪ್ರಜೆಯ ಹಿತದೃಷ್ಟಿಗೆ ನಮ್ಮ ಭಾರತ ಸಂವಿಧಾನ ನೀಡಿರುವ ಕೊಡುಗೆಗಳು ಅಪಾರ. ಇವುಗಳ ರಕ್ಷಣೆಯೊಂದಿಗೆ ದೇಶದ ಏಕತೆ ಮತ್ತು ಸಮಗ್ರತೆಗಳನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ 2019-20ನೇ ಸಾಲಿನಲ್ಲಿ ಅತ್ಯುತ್ತಮ ಸೇವೆಗೈದ ರಾಜ್ಯ ಸರ್ಕಾರಿ ನೌಕರರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೆರೆಯುವ ಹಾಡುಗಳಿಗೆ ಸಾವಿರಾರು ಮಕ್ಕಳು ನೃತ್ಯ ಪ್ರದರ್ಶನ ನೀಡಿ ಗಣ್ಯರ ಮತ್ತು ನೋಡುಗರ ಕಣ್ಮನ ಸೆಳೆದರು. ಜಿಲ್ಲೆಯ ವಿವಿಧ ಶಾಲೆಗಳ 1,500 ವಿದ್ಯಾರ್ಥಿಗಳ ಧ್ವಜ ಕವಾಯತು ಪ್ರದರ್ಶನ ನೋಡುಗರ ಮೆಚ್ಚುಗೆ ಗಳಿಸಿತು. ಅಲ್ಲದೇ, ಅಗ್ನಿ ಶಾಮಕ ಇಲಾಖೆ ವತಿಯಿಂದ ಅಗ್ನಿ ಸುರಕ್ಷತೆಯ ಕುರಿತಂತೆ ವಿವಿಧ ಬಗೆಯ ಅಗ್ನಿ ನಂದಕಗಳನ್ನು ಪ್ರಾಯೋಗಿಕವಾಗಿ ಬಳಸುವುದರ ಬಗ್ಗೆ ಪ್ರಾತ್ಯಕ್ಷತೆಯನ್ನು ನೀಡಲಾಯಿತು.

ದೇಶವೇ ಸಂಭ್ರಮಾಚರಣೆಯಲ್ಲಿರುವಾಗ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮ ಪಂಚಾಯತ್​ ವ್ಯಾಪ್ತಿಯ ಕೃಷಿ ಇಲಾಖೆಯಲ್ಲಿ ಮಾತ್ರ ಗಣರಾಜ್ಯೋತ್ಸವ ಆಚರಿಸದೇ ಧ್ವಜವನ್ನು ಬಾನಂಗಳಕ್ಕೆ ಹಾರಿಸದೆ ಅಗೌರವ ತೋರಲಾಗಿದೆ. ಹಾಗಾಗಿ, ಕೃಷಿ ಅಧಿಕಾರಿ ನಾಗರಾಜ್ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Intro:ಹಾಸನ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
         ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಧ್ವಜಾರೋಹಣ ಮಾಡಿದರು ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರೆಲ್ಲ ಸೇರಿ ಪುಷ್ಪಾರ್ಚನೆ ನೆರವೇರಿಸಿದರು.
ಗೌರವ ವಂದನೆ ಸ್ವೀಕರಿಸಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಕಾರ್ಯಕ್ರಮದಲ್ಲಿ ನೆರೆದಿದ್ದ ಸಮಸ್ತರಿಗೆ ಮತ್ತು ಜಿಲ್ಲೆಯ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿ ಮಾತನಾಡಿ, ಸಮಗ್ರ ಭಾರತದ ಒಕ್ಕೂಟ ವ್ಯವಸ್ಥೆಯಡಿ ಗಣರಾಜ್ಯದ ಉದಾತ್ತ ಪರಿಕಲ್ಪನೆಗಳು ಮತ್ತು ದೇಶದ ಪ್ರತಿಯೊಬ್ಬ ಪ್ರಜೆಯ ಹಿತದೃಷ್ಟಿಗೆ ನಮ್ಮ ಭಾರತ ಸಂವಿಧಾನ ನೀಡಿರುವ ಕೊಡುಗೆಗಳು ಅಪಾರವಾದುದು. ಇವುಗಳ ರಕ್ಷಣೆಯೊಂದಿಗೆ ದೇಶದ ಏಕತೆ ಮತ್ತು ಸಮಗ್ರತೆಗಳನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
ನಾಡಿನ ಸಮಗ್ರತೆ, ಐಕ್ಯತೆಗಾಗಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರಲ್ಲದೆ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಶಾಸಕರಾದ ಪ್ರೀತಂ ಜೆ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
         ರಾಜ್ಯ ಸರ್ಕಾರವು 2019-20ನೇ ಸಾಲಿನಲ್ಲಿ ಅತ್ಯುತ್ತಮ ಸೇವೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕ್ರೀಡಾ ವಿಭಾಗ: ರಾಷ್ಟ್ರ ಮಟ್ಟದ ಕ್ರೀಡಾ ಪಟುಗಳ ವಿಭಾಗದಲ್ಲಿ ವಿಭಾ ಶ್ರೀನಿವಾಸ್ ಮತ್ತು ಶಿಕ್ಷಕರಾದ ಹನುಮಂತೇಗೌಡ ಕೆ, ಸಮಾಜ ಸೇವೆ ವಿಭಾಗದಲ್ಲಿ ಮಕ್ಕಳ ತಜ್ಞರಾದ ಡಾ|| ಪಾಲಾಕ್ಷ, ಜಿಲ್ಲಾ ರೋಟರಿ ಸನ್‍ರೈಸ್‍ನ ಮಾಜಿ ಅಧ್ಯಕ್ಷರಾದ ಎಂ.ಸಿ ರಾಜು, ಎನ್.ಸಿ.ಸಿ., ವಿಭಾಗದಲ್ಲಿ ಸರ್ಕಾರಿ ವಿಜಾÐನ ಕಾಲೇಜಿನ ಹೇಮಂತ್, ಸ್ಕೌಟ್ ಮತ್ತು ಗೈಡ್ ವಿಭಾಗದಲ್ಲಿ ಅರಸೀಕೆರೆ ತಾಲ್ಲೂಕಿನ ಗೊಲ್ಲರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜೆ.ಎಲ್. ಲೀಲಾ ಮಹೇಶ್ವರ್.

ಶಿಕ್ಷಣ ವಿಭಾಗದ: ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ|| ಹೆಬ್ಬಾಲೆ ಕೆ. ನಾಗೇಶ್, ಪೌರ ಕಾರ್ಮಿಕ ವಿಭಾಗದಲಲ್ಲಿ ಎ. ರಾಮು ಬಿನ್ ಎರ್ರಸ್ವಾಮಿ, ಹೋಂ ಗಾರ್ಡ್ ವಿಭಾಗದಲ್ಲಿ ಹೊಳೆನರಸಿಪುರ ತಾಲ್ಲೂಕಿನ ಗೃಹ ರಕ್ಷಕಕ ದಳದ ಸೀನಿಯರ್ ಪ್ಲಟೂನ್ ಕಮಾಂಡರ್ ಹೆಚ್.ಆರ್.ಪ್ರದೀಪ್ ಕುಮಾರ್.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ತಾಲ್ಲೂಕು ಪಂಚಾಯತ್ ಅಧ್ಯಕ್ಷ ನಿಂಗೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸೆಪಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ತಹಶೀಲ್ದಾರ್ ಶಿವಶಂಕರಪ್ಪ, ಮಾಜಿ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣ, ಮತ್ತಿತರ ಗಣ್ಯರು ಹಾಗೂ ಇತರೆ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೆರೆಯುವ ಹಾಡುಗಳಿಗೆ ಸಾವಿರಾರು ಮಕ್ಕಳು ನೃತ್ಯ ಪ್ರದರ್ಶನ ನೀಡಿ ಗಣ್ಯರ ಮತ್ತು ನೋಡುಗರ ಕಣ್ಮನ ಸೇಳೆದರು. ಹಲವು ಶಾಲೆಗಳ 1500 ವಿದ್ಯಾರ್ಥಿಗಳ ಧ್ವಜ ಕವಾಯತು ಪ್ರದರ್ಶನ ನೋಡುಗರ ಮೆಚ್ಚುಗೆ ಗಳಿಸಿತು.
ಅಗ್ನಿ ಶಾಮಕ ಇಲಾಖೆ ವತಿಯಿಂದ ಅಗ್ನಿ ಸುರಕ್ಷತೆಯ ಕುರಿತಂತೆ ವಿವಿಧ ಬಗೆಯ ಅಗ್ನಿ ನಂದಕಗಳನ್ನು ಪ್ರಾಯೋಗಿಕವಾಗಿ ಬಳಸುವುದರ ಬಗ್ಗೆ ಪ್ರಾತ್ಯಕ್ಷತೆಯನ್ನು ನೀಡಲಾಯಿತು.


ಬೈಟ್ : ಆರ್. ಗಿರೀಶ್, ಜಿಲ್ಲಾಧಿಕಾರಿ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.



Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.