ETV Bharat / state

ಎನ್​​ಎಸ್​​ಯುಐಯಿಂದ ಮೂಡಿಗೆರೆ ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ವಿತರಣೆ

ಎನ್​​ಎಸ್​​ಯುಐ ತಂಡದಿಂದ ಸಂಗ್ರಹಿಸಲಾದ ಸುಮಾರು 3 ಲಕ್ಷ ರೂ ಮೌಲ್ಯದ ದಿನಬಳಕೆ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡುವುದಕ್ಕೆ ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.

author img

By

Published : Aug 25, 2019, 2:44 AM IST

Updated : Aug 25, 2019, 10:45 PM IST

ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ವಿತರಣೆ

ಹಾಸನ: ಎನ್​​ಎಸ್​​ಯುಐ ತಂಡದಿಂದ ಸಂಗ್ರಹಿಸಲಾದ ಸುಮಾರು 3 ಲಕ್ಷ ರೂ. ಮೌಲ್ಯದ ದಿನಬಳಕೆ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಎನ್​​ಎಸ್​​ಯುಐ ಅಧ್ಯಕ್ಷ ರಂಜಿತ್, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸುಮಾರು 3 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ಸಂಗ್ರಹ ಮಾಡಲಾಗಿದೆ. ಇವುಗಳನ್ನು ಮೂಡಿಗೆರೆ ತಾಲೂಕು ಸಂತ್ರಸ್ತರಿಗೆ ನೀಡಲಾಗುವುದು. 50 ಚೀಲಾ ಹೊಸ ಬಟ್ಟೆ, 6 ಕ್ವಿಂಟಾಲ್ ಅಕ್ಕಿ, 100 ಚಾಪೆ, 5 ಚೀಲ ಚಪ್ಪಲಿಗಳು, ಶಾಲಾ ಮಕ್ಕಳ ಶ್ಯೂ​, ಪುಸ್ತಕಗಳು, ಬಿಸ್ಕತ್, ರಗ್ ಹಾಗೂ ದಿನಸಿ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಕಷ್ಟದಲ್ಲಿರುವವರಿಗೆ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳನ್ನು ಕಳಿಸುತ್ತಿರುವುದಾಗಿ ತಿಳಿಸಿದರು. ಪದಾರ್ಥಗಳನ್ನು ಸಂಗ್ರಹಿಸಲು ಸಹಕಾರ ನೀಡಿದ ವಿದ್ಯಾರ್ಥಿಗಳಿಗೆ ಹಾಗೂ ವಸ್ತುಗಳನ್ನು ನೀಡಿ ಸಹಾಯ ಮಾಡಿದ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದರು.

ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ವಿತರಣೆ

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಆನಂದ್, ಸದಸ್ಯ ಹೆಚ್. ಕೆ. ಮಹೇಶ್, ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ವೆಂಕಟೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಹಾಸನ: ಎನ್​​ಎಸ್​​ಯುಐ ತಂಡದಿಂದ ಸಂಗ್ರಹಿಸಲಾದ ಸುಮಾರು 3 ಲಕ್ಷ ರೂ. ಮೌಲ್ಯದ ದಿನಬಳಕೆ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಎನ್​​ಎಸ್​​ಯುಐ ಅಧ್ಯಕ್ಷ ರಂಜಿತ್, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸುಮಾರು 3 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ಸಂಗ್ರಹ ಮಾಡಲಾಗಿದೆ. ಇವುಗಳನ್ನು ಮೂಡಿಗೆರೆ ತಾಲೂಕು ಸಂತ್ರಸ್ತರಿಗೆ ನೀಡಲಾಗುವುದು. 50 ಚೀಲಾ ಹೊಸ ಬಟ್ಟೆ, 6 ಕ್ವಿಂಟಾಲ್ ಅಕ್ಕಿ, 100 ಚಾಪೆ, 5 ಚೀಲ ಚಪ್ಪಲಿಗಳು, ಶಾಲಾ ಮಕ್ಕಳ ಶ್ಯೂ​, ಪುಸ್ತಕಗಳು, ಬಿಸ್ಕತ್, ರಗ್ ಹಾಗೂ ದಿನಸಿ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಕಷ್ಟದಲ್ಲಿರುವವರಿಗೆ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳನ್ನು ಕಳಿಸುತ್ತಿರುವುದಾಗಿ ತಿಳಿಸಿದರು. ಪದಾರ್ಥಗಳನ್ನು ಸಂಗ್ರಹಿಸಲು ಸಹಕಾರ ನೀಡಿದ ವಿದ್ಯಾರ್ಥಿಗಳಿಗೆ ಹಾಗೂ ವಸ್ತುಗಳನ್ನು ನೀಡಿ ಸಹಾಯ ಮಾಡಿದ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದರು.

ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ವಿತರಣೆ

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಆನಂದ್, ಸದಸ್ಯ ಹೆಚ್. ಕೆ. ಮಹೇಶ್, ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ವೆಂಕಟೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Intro:ಹಾಸನ : ಅತಿ ಹೆಚ್ಚು ಮಳೆಯಿಂದ ಪ್ರವಾಹಕ್ಕೆ ಸಿಲುಕಿ ನಷ್ಟವಾಗಿರುವ ಜನರಿಗೆ ದಿನನಿತ್ಯ ಬಳಸುವ ವಸ್ತುಗಳನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ತಂಡದಿಂದ ಸುಮಾರು 3 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಸಂಗ್ರಹಿಸಿ ಮೂಡಿಗೆರೆಯ ನಿರಾಶಿತ ಜನರಿಗೆ ತಲುಪಿಸುವ ವಾಹನಕ್ಕೆ ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.




Body:ನಗರದ ಬಿಎಂ ರಸ್ತೆ ಬಳಿಯಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿರುವ ವಾಹನದ ಬಳಿ ಮಾತನಾಡಿದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಂಜಿತ್ ಮಳೆಯಿಂದ ಹಾನಿಯಾಗಿರುವವರಿಗೆ ನೆರವು ನೀಡುವ ನಿಟ್ಟಿನಲ್ಲಿ ಸುಮಾರು ಮೂರು ಲಕ್ಷ ಮೌಲ್ಯದ ಆಹಾರ ಸಾಮಗ್ರಿಗಳನ್ನು ಸಂಗ್ರಹ ಮಾಡಲಾಗಿದ್ದು, ಮೂಡಿಗೆರೆ ತಾಲೂಕು ಸಂತ್ರಸ್ತರಿಗೆ ನೆರವು ನೀಡಲಾಗುವುದು ಎಂದರು.

ಎನ್ ಎಸ್ ಯುಐ ತಂಡವು ಅಗತ್ಯ ವಸ್ತುಗಳನ್ನು ಲಾರಿಗೆ ತುಂಬುವಷ್ಟು ಸಂಗ್ರಹಿಸಿದೆ. 50 ಚಿಲ್ಲಾ ಹೊಸಬಟ್ಟೆ, 6 ಕ್ವಿಂಟಲ್ ಅಕ್ಕಿ, 100 ಚಾಪೆ, ಐದು ಚೀಲ ಚಪ್ಪಲಿಗಳು, ಶಾಲಾ ಮಕ್ಕಳ ಶೂಸ್, ಪುಸ್ತಕಗಳು, ಬಿಸ್ಕತ್, ರಗ್ ಹಾಗೂ ದಿನನಿತ್ಯ ಬಳಸುವ ದಿನಸಿ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಕಷ್ಟದಲ್ಲಿರುವವರಿಗೆ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳನ್ನು ಸಂಗ್ರಹಿಸಿ ಕಳಿಸುತ್ತಿರುವುದು ಆಗಿ ತಿಳಿಸಿದರು. ಪದಾರ್ಥಗಳನ್ನು ಸಂಗ್ರಹಿಸಲು ಸಹಕಾರ ನೀಡಿದಂತಹ ವಿದ್ಯಾರ್ಥಿಗಳಿಗೆ ಅನುದಾನ ಮಾಡಿದಂತಹ ಸಾರ್ವಜನಿಕ ಧನ್ಯವಾದಗಳನ್ನು ತಿಳಿಸಿದರು.




Conclusion:ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ಆನಂದ್, ಸದಸ್ಯ ಎಚ್. ಕೆ. ಮಹೇಶ್, ಐ ಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ವೆಂಕಟೇಶ್ ಮತ್ತಿತರರು ಹಾಜರಿದ್ದರು.

- ಅರಕೆರೆ ಮೋಹನಕುಮಾರ ಈಟಿವಿ ಭಾರತ, ಹಾಸನ.
Last Updated : Aug 25, 2019, 10:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.