ETV Bharat / state

ಸರ್ಕಾರದಿಂದಲೇ ಎಲ್ಲಾ ಅಭಿವೃದ್ಧಿ ಕಷ್ಟ: ಸಚಿವ ಮಾಧುಸ್ವಾಮಿ

author img

By

Published : Oct 26, 2019, 11:16 AM IST

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇದರಿಂದ ಸರ್ಕಾರಕ್ಕೂ ಹೆಚ್ಚು ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ

ಹಾಸನ: ಎಲ್ಲಾ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದಲೇ ಮಾಡಲು ಸಾಧ್ಯವಿಲ್ಲ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯಂತವರ ಸಹಕಾರವೂ ಅವಶ್ಯಕವಾಗಿ ಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಆಯೋಜಿಸಲಾಗಿದ್ದ 500 ಹಾಸಿಗೆಯುಳ್ಳ ಆಸ್ಪತ್ರೆಗೆ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಗ್ಗಡೆ ಅವರು ಶೈಕ್ಷಣಿಕ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಶ್ಲಾಘನೀಯ. ಕೆರೆ ಅಭಿವೃದ್ಧಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಅವರ ಕಾರ್ಯ ಪ್ರಶಂಸಾರ್ಹವಾಗಿದೆ. ಆಯುರ್ವೇದ ಚಿಕಿತ್ಸಾ ವಿಧಾನವನ್ನು ಉನ್ನತ ಸ್ಥಿತಿಗೆ ಕೊಂಡೊಯ್ಯಲು ಅವರ ಪಾತ್ರ ತುಂಬಾ ಮುಖ್ಯವಾಗಿದೆ. ಹಲವು ದಶಕದ ಇತಿಹಾಸ ಹೊಂದಿರುವ ಆಯುರ್ವೇದವನ್ನು ಇಂದು ಹೆಚ್ಚು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಹಾಗೂ ಆಯುರ್ವೇದ ಆಸ್ಪತ್ರೆಗಳನ್ನು ಸ್ಥಾಪಿಸುವಲ್ಲಿ ಹೆಗ್ಗಡೆ ಅವರ ಪಾತ್ರ ಹೆಚ್ಚಿದೆ ಎಂದರು.

ಶಾಸಕ ಪ್ರೀತಂ ಗೌಡ ಮಾತನಾಡಿ, ಪರಿಸರದ ವಿರುದ್ಧ ನಾವು ಎಂದು ಹೋಗಬಾರದು. ಆಯುರ್ವೇದದ ಬಗ್ಗೆ ಜನರಿಗೆ ಹೆಚ್ಚು ಮಾಹಿತಿ ನೀಡಿ, ಅರ್ಥ ಮಾಡಿಸಬೇಕು. ಆಯುರ್ವೇದದ ಒಳ್ಳೆಯ ಆವಿಷ್ಕಾರವನ್ನು ಬೆಳೆಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಹಾಸನ: ಎಲ್ಲಾ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದಲೇ ಮಾಡಲು ಸಾಧ್ಯವಿಲ್ಲ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯಂತವರ ಸಹಕಾರವೂ ಅವಶ್ಯಕವಾಗಿ ಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಆಯೋಜಿಸಲಾಗಿದ್ದ 500 ಹಾಸಿಗೆಯುಳ್ಳ ಆಸ್ಪತ್ರೆಗೆ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಗ್ಗಡೆ ಅವರು ಶೈಕ್ಷಣಿಕ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಶ್ಲಾಘನೀಯ. ಕೆರೆ ಅಭಿವೃದ್ಧಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಅವರ ಕಾರ್ಯ ಪ್ರಶಂಸಾರ್ಹವಾಗಿದೆ. ಆಯುರ್ವೇದ ಚಿಕಿತ್ಸಾ ವಿಧಾನವನ್ನು ಉನ್ನತ ಸ್ಥಿತಿಗೆ ಕೊಂಡೊಯ್ಯಲು ಅವರ ಪಾತ್ರ ತುಂಬಾ ಮುಖ್ಯವಾಗಿದೆ. ಹಲವು ದಶಕದ ಇತಿಹಾಸ ಹೊಂದಿರುವ ಆಯುರ್ವೇದವನ್ನು ಇಂದು ಹೆಚ್ಚು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಹಾಗೂ ಆಯುರ್ವೇದ ಆಸ್ಪತ್ರೆಗಳನ್ನು ಸ್ಥಾಪಿಸುವಲ್ಲಿ ಹೆಗ್ಗಡೆ ಅವರ ಪಾತ್ರ ಹೆಚ್ಚಿದೆ ಎಂದರು.

ಶಾಸಕ ಪ್ರೀತಂ ಗೌಡ ಮಾತನಾಡಿ, ಪರಿಸರದ ವಿರುದ್ಧ ನಾವು ಎಂದು ಹೋಗಬಾರದು. ಆಯುರ್ವೇದದ ಬಗ್ಗೆ ಜನರಿಗೆ ಹೆಚ್ಚು ಮಾಹಿತಿ ನೀಡಿ, ಅರ್ಥ ಮಾಡಿಸಬೇಕು. ಆಯುರ್ವೇದದ ಒಳ್ಳೆಯ ಆವಿಷ್ಕಾರವನ್ನು ಬೆಳೆಸುವ ಕಾರ್ಯ ಆಗಬೇಕು ಎಂದು ಹೇಳಿದರು.

Intro:ಹಾಸನ; ಎಲ್ಲಾ ಅಭಿವೃದ್ಧಿ ಕೆಲಸವನ್ನು ಸರಕಾರವೊಂದರಿಂದ ಮಾಡಲು ಸಾಧ್ಯವಿಲ್ಲ. ಶ್ರೀ ಧರ್ಮಸ್ಥಳದ ಡಾ|| ವೀರೇಂದ್ರ ಹೆಗಡೆಯವರ ಸಹಕಾರವು ಅವಶ್ಯಕವಾಗಿ ಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
         ನಗರದ ತಣ್ಣೀರುಹಳ್ಳ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆವರಣದಲ್ಲಿ ರಾಷ್ರೀಯ ಆಯುರ್ವೇದ ದಿನದ ಅಂಗವಾಗಿ ಆಯೋಜಿಸಲಾಗಿದ್ದ ೫೦೦ ಹಾಸಿಗೆಗಳಿಗೆ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲಾ ಕೆಲಸವನ್ನು ಸರಕಾರವೊಂದರಿಂದ ಮಾಡಲು ಸಾಧ್ಯವಿಲ್ಲ, ಹೆಗ್ಗಡೆಯವರಂತಹ ಮಹಾನ್ ವ್ಯಕ್ತಿಯ ಸಹಕಾರವು ಅವಶ್ಯಕ. ಡಾ.ವಿರೇಂದ್ರ ಹೆಗ್ಗಡೆ ಅವರು ಎಲ್ಲಾ ಆಯಾಮದಲ್ಲಿ ಉತ್ತಮ ಸೇವೆ ನೀಡಿದ್ದಾರೆ ಶೈಕ್ಷಣಿಕ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಾಮಾಜಿಕ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕೆರೆ ಅಭಿವೃದ್ಧಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಅವರ ಕಾರ್ಯ ಪ್ರಶಂಸಾರ್ಹ ವಾದದ್ದು, ಆಯುರ್ವೇದ ಚಿಕಿತ್ಸಾ ವಿಧಾನವನ್ನು ಇಷ್ಟು ಉನ್ನತ ಸ್ಥಿತಿಗೆ ಕೊಂಡ್ಯೊದಿದ್ದಾರೆ .ಹಲವು ದಶಕದ ಇತಿಹಾಸ ಹೊಂದಿರುವ ಆಯುರ್ವೇದವನ್ನು ಇಂದು ಹೆಚ್ಚು ಹೆಚ್ಚು ಜನರಿಗೆ ಪರಿಚಯಿಸುವಲ್ಲಿ ಹಾಗೂ ಆಯುರ್ವೇದ ಆಸ್ಪತ್ರೆಗಳನ್ನು ಸ್ಥಾಪಿಸುವಲ್ಲಿ ಹೆಗ್ಗಡೆ ಅವರ ಪಾತ್ರ ಹೆಚ್ಚಿದೆ ಇದು ಇನ್ನು ಉನ್ನತಿಯಾಗಿ ಬೆಳೆಯಲಿ ಎಂದರು. ಸಾಧನೆ ಮಾಡಲು ಉತ್ತಮ ಮನಸ್ಸು ಅಗತ್ಯ. ಗುರಿಯನ್ನಿಟ್ಟುಕೊಂಡು ಮುಂದೆ ಸಾಗಿದರೇ ಯಶಸ್ಸು ಕಾಣಬಹುದು ಎಂದರು.
 
     ಶಾಸಕ ಪ್ರೀತಂ ಗೌಡ ಮಾತನಾಡಿ, ಪರಿಸರದ ವಿರುದ್ಧವಾಗಿ ನಾವು ಎಂದು ಹೋಗಬಾರದು. ಆಯುರ್ವೇದದ ಬಗ್ಗೆ ಜನರಿಗೆ ಹೆಚ್ಚು ಹೆಚ್ಚು ಮಾಹಿತಿ ನೀಡಿ ಅರ್ಥ ಮಾಡಿಸಬೇಕಾಗಿದೆ. ಆಯುರ್ವೇದ ಒಳ್ಳೆಯ ಆವಿಷ್ಕಾರವನ್ನು ಬೆಳೆಸುವ ಕಾರ್ಯ ಆಗಬೇಕು ಅದನ್ನು ಉನ್ನತಿಗೆ ತರುವ ಹಾಗೂ ಸನಾತನ ಹಿಂದೂ ಧರ್ಮ ಪದ್ದತಿಯಲ್ಲಿನ ಆಯುರ್ವೇದವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಿದೆ. ಹಿಂದೆ ಇದ್ದ ಅಂತಹ ಆಯುರ್ವೇದವನ್ನು ಮತ್ತೆ ಮರುಕಳಿಸಬೇಕು ಎಂದು ಹೇಳಿದರು.
     
    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ರಾಮ್‌ನಿವಾಸ್ ಸೆಪಟ್, ಸಿ.ಸಿ.ಐ.ಮ್. ಕಾರ್ಯಕಾರಿ ಸದಸ್ಯರಾದ ಡಾ. ಆನಂದ್ ಎಸ್. ಕಿರಿಶ್ಯಾಲ್, ನಗರ ಸಭೆ ಸದಸ್ಯರಾದ ಹೆಚ್.ವಿ. ಚಂದ್ರೇಗೌಡ, ಮುರುಳೀಧರ್ ಪೂಜಾರಿ ಇತರರು ಪಾಲ್ಗೊಂಡಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.


Body:೦


Conclusion:೦

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.