ETV Bharat / state

ಸಕಲೇಶಪುರ; ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

author img

By

Published : Jul 24, 2020, 10:10 PM IST

ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 12000 ರೂ. ಮಾಸಿಕ ಗೌರವ ಧನ ನೀಡಬೇಕು. ಕೋವಿಡ್ 19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಪರಿಹಾರ ಹಾಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

Asha protests
Asha protests

ಸಕಲೇಶಪುರ: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಗೌರಮ್ಮ ವೆಂಕಟೇಶ್ ಹೇಳಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆಶಾ ಕಾರ್ಯಕರ್ತೆಯರು, ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಜನರ ಆರೋಗ್ಯದ ಮಾಹಿತಿ ಕಲೆ ಹಾಕಿ ಆರೋಗ್ಯ ಇಲಾಖೆಗೆ ನೀಡುತ್ತಿದ್ದಾರೆ. ಆದರೆ ಇದೀಗ ಆಶಾ ಕಾರ್ಯಕರ್ತೆಯರು ಅವರಿಗೆ ಬೇಡವಾಗಿದೆ. ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 12000 ರೂ. ಮಾಸಿಕ ಗೌರವ ಧನ ನೀಡಬೇಕು. ಕೋವಿಡ್ 19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಪರಿಹಾರ ಹಾಗೂ ಉಚಿತ ಚಿಕಿತ್ಸೆ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ತಾಲೂಕು ಕಾರ್ಯದರ್ಶಿ ಕೊಲ್ಲಹಳ್ಳಿ ಸಲೀಂ ಮಾತನಾಡಿ, ಆಶಾ ಕಾರ್ಯಕರ್ತೆಯರು ಕೇವಲ 12000 ರೂ. ಮಾಸಿಕ ಗೌರವಧನ ಕೇಳುತ್ತಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿ ಬಜೆಟ್‌ನಲ್ಲಿ ಈಗಾಗಲೇ ಈ ಕಾರ್ಯಕ್ರಮ ರೂಪಿಸಲಾಗಿದೆ. ಕಳೆದ 13 ದಿನಗಳಿಂದ ಆಶಾ ಕಾರ್ಯಕರ್ತೆಯರು ಹೋರಾಟ ಮಾಡುತ್ತಿದ್ದರೂ ಸಹ ಕರ್ನಾಟಕ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ರಾಜ್ಯ ಸರ್ಕಾರ ಕೊರೊನಾ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಯಾವುದೇ ರೀತಿಯ ನೆರವು ನೀಡುತ್ತಿಲ್ಲ ಎಂದರು.

ಪ್ರತಿಭಟನೆ ಅಂಗವಾಗಿ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಮುಖಾಂತರ ಬಂದು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಕೆಲ ಕಾಲ ಧರಣಿ ಮಾಡಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್‌ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಕಲೇಶಪುರ: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಗೌರಮ್ಮ ವೆಂಕಟೇಶ್ ಹೇಳಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆಶಾ ಕಾರ್ಯಕರ್ತೆಯರು, ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಜನರ ಆರೋಗ್ಯದ ಮಾಹಿತಿ ಕಲೆ ಹಾಕಿ ಆರೋಗ್ಯ ಇಲಾಖೆಗೆ ನೀಡುತ್ತಿದ್ದಾರೆ. ಆದರೆ ಇದೀಗ ಆಶಾ ಕಾರ್ಯಕರ್ತೆಯರು ಅವರಿಗೆ ಬೇಡವಾಗಿದೆ. ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 12000 ರೂ. ಮಾಸಿಕ ಗೌರವ ಧನ ನೀಡಬೇಕು. ಕೋವಿಡ್ 19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಪರಿಹಾರ ಹಾಗೂ ಉಚಿತ ಚಿಕಿತ್ಸೆ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ತಾಲೂಕು ಕಾರ್ಯದರ್ಶಿ ಕೊಲ್ಲಹಳ್ಳಿ ಸಲೀಂ ಮಾತನಾಡಿ, ಆಶಾ ಕಾರ್ಯಕರ್ತೆಯರು ಕೇವಲ 12000 ರೂ. ಮಾಸಿಕ ಗೌರವಧನ ಕೇಳುತ್ತಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿ ಬಜೆಟ್‌ನಲ್ಲಿ ಈಗಾಗಲೇ ಈ ಕಾರ್ಯಕ್ರಮ ರೂಪಿಸಲಾಗಿದೆ. ಕಳೆದ 13 ದಿನಗಳಿಂದ ಆಶಾ ಕಾರ್ಯಕರ್ತೆಯರು ಹೋರಾಟ ಮಾಡುತ್ತಿದ್ದರೂ ಸಹ ಕರ್ನಾಟಕ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ರಾಜ್ಯ ಸರ್ಕಾರ ಕೊರೊನಾ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಯಾವುದೇ ರೀತಿಯ ನೆರವು ನೀಡುತ್ತಿಲ್ಲ ಎಂದರು.

ಪ್ರತಿಭಟನೆ ಅಂಗವಾಗಿ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಮುಖಾಂತರ ಬಂದು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಕೆಲ ಕಾಲ ಧರಣಿ ಮಾಡಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್‌ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.