ETV Bharat / state

ಹಾಸನದ 25 ಬಡ ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ! - ಬಡ ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ

ಹಾಸನದ ಖಾಸಗಿ ಆಸ್ಪತ್ರೆಯ ಮುಖ್ಯಸ್ಥ ಅಬ್ದುಲ್ ಬಶೀರ್​ ಎಂಬುವವರು 25 ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ವಿಮೆ ಮಾಡಿಸಿದ್ದಾರೆ. ಮೊದಲ ಹಂತವಾಗಿ 92 ಸಾವಿರ ರೂಪಾಯಿಗಳನ್ನು ವಿಮಾ ಕಂಪನಿಗೆ ಹಸ್ತಾಂತರಿಸಿದ್ದಾರೆ ಎಂದು ಹಿರಿಯ ಸಾಹಿತಿ ರೂಪ ಹಾಸನ್ ಹೇಳಿದರು.

Asha workers have health policy in hassan
ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ
author img

By

Published : Apr 22, 2020, 9:20 PM IST

ಹಾಸನ: ಖಾಸಗಿ ಆಸ್ಪತ್ರೆಯ ಮುಖ್ಯಸ್ಥರೊಬ್ಬರು ಬಡ ಆಶಾ ಕಾರ್ಯಕತೆಯರ ಆರೋಗ್ಯದ ಹಿತದೃಷ್ಟಿಯಿಂದ 1 ಲಕ್ಷದ ಆರೋಗ್ಯ ವಿಮೆ ಸೌಲಭ್ಯವನ್ನು ಉಚಿತವಾಗಿ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ

ಸುಮಾರು 25 ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಅಬ್ದುಲ್ ಬಶೀರ್ ಎಂಬುವವರು 1 ವರ್ಷದ ಆರೋಗ್ಯ ಸೌಲಭ್ಯ ಪಡೆದುಕೊಳ್ಳುವ ವಿಮೆಯನ್ನು ಉಚಿತವಾಗಿ ಅವರ ಹೆಸರುಗಳಲ್ಲಿ ಮಾಡಿಸಿದ್ದಾರೆ. ಈ ಸಂಬಂಧ ಮೊದಲ ಹಂತವಾಗಿ 92 ಸಾವಿರ ರೂಪಾಯಿಗಳ ಚೆಕ್​ಅನ್ನು ಜಿಲ್ಲಾಧಿಕಾರಿ ಮೂಲಕ ನ್ಯೂ ಇಂಡಿಯಾ ವಿಮಾ ಕಂಪನಿಯ ರಾಜಶೇಖರ್ ಅವರಿಗೆ ಹಸ್ತಾಂತರಿಸಿದರು.​

ಈ ಕುರಿತು ಹಿರಿಯ ಸಾಹಿತಿ ರೂಪ ಹಾಸನ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸೌಲಭ್ಯದ ವಿಮೆ ನೀಡಿರುವುದು ಅತ್ಯುತ್ತಮ ಸೇವೆಯಾಗಿದೆ. ಬಡತನದಲ್ಲಿರುವ 25 ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ಸೌಲಭ್ಯ ಕಲ್ಪಿಸಲಾಗಿದೆ. ದೇಶದಲ್ಲಿ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಈ ವಿಮೆ ಮೂಲಕ ವೆಚ್ಚ ಭರಿಸಬಹುದು ಎಂದರು.

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಸಿಗುವ ಗೌರವಧನ ಅತ್ಯಂತ ಕಡಿಮೆ ಇದೆ. ಇಂತಹ ಸಂದರ್ಭದಲ್ಲಿಯೂ ಜೀವ ಲೆಕ್ಕಿಸದೇ ಸರ್ಕಾರದ ಕೆಲಸವನ್ನು, ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ತಪಾಸಣೆ, ಸಮೀಕ್ಷೆಯಂತಹ ಹಲವಾರು ಕೆಲಸಗಳು ಇವರ ಕೊರಳಿಗೆ ಬೀಳುತ್ತವೆ. ಸರ್ಕಾರ ಮುಂಬರುವ ದಿನಗಳಲ್ಲಿ ಪ್ರೋತ್ಸಾಹಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೆಲ ದಿನಗಳ ಹಿಂದೆ ಹಿರಿಯ ಸಾಹಿತಿ ರೂಪ ಹಾಸನ್ ಆಶಾ ಕಾರ್ಯಕರ್ತೆಯರ ಆರೋಗ್ಯದ ವಿಚಾರವಾಗಿ ಚರ್ಚಿಸಿದ್ದರು ಎಂದು ಡಾ.ಅಬ್ದುಲ್ ಬಶೀರ್​ ಹೇಳಿದರು.

ಹಾಸನ: ಖಾಸಗಿ ಆಸ್ಪತ್ರೆಯ ಮುಖ್ಯಸ್ಥರೊಬ್ಬರು ಬಡ ಆಶಾ ಕಾರ್ಯಕತೆಯರ ಆರೋಗ್ಯದ ಹಿತದೃಷ್ಟಿಯಿಂದ 1 ಲಕ್ಷದ ಆರೋಗ್ಯ ವಿಮೆ ಸೌಲಭ್ಯವನ್ನು ಉಚಿತವಾಗಿ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ವಿಮೆ

ಸುಮಾರು 25 ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಅಬ್ದುಲ್ ಬಶೀರ್ ಎಂಬುವವರು 1 ವರ್ಷದ ಆರೋಗ್ಯ ಸೌಲಭ್ಯ ಪಡೆದುಕೊಳ್ಳುವ ವಿಮೆಯನ್ನು ಉಚಿತವಾಗಿ ಅವರ ಹೆಸರುಗಳಲ್ಲಿ ಮಾಡಿಸಿದ್ದಾರೆ. ಈ ಸಂಬಂಧ ಮೊದಲ ಹಂತವಾಗಿ 92 ಸಾವಿರ ರೂಪಾಯಿಗಳ ಚೆಕ್​ಅನ್ನು ಜಿಲ್ಲಾಧಿಕಾರಿ ಮೂಲಕ ನ್ಯೂ ಇಂಡಿಯಾ ವಿಮಾ ಕಂಪನಿಯ ರಾಜಶೇಖರ್ ಅವರಿಗೆ ಹಸ್ತಾಂತರಿಸಿದರು.​

ಈ ಕುರಿತು ಹಿರಿಯ ಸಾಹಿತಿ ರೂಪ ಹಾಸನ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸೌಲಭ್ಯದ ವಿಮೆ ನೀಡಿರುವುದು ಅತ್ಯುತ್ತಮ ಸೇವೆಯಾಗಿದೆ. ಬಡತನದಲ್ಲಿರುವ 25 ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ಸೌಲಭ್ಯ ಕಲ್ಪಿಸಲಾಗಿದೆ. ದೇಶದಲ್ಲಿ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಈ ವಿಮೆ ಮೂಲಕ ವೆಚ್ಚ ಭರಿಸಬಹುದು ಎಂದರು.

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಸಿಗುವ ಗೌರವಧನ ಅತ್ಯಂತ ಕಡಿಮೆ ಇದೆ. ಇಂತಹ ಸಂದರ್ಭದಲ್ಲಿಯೂ ಜೀವ ಲೆಕ್ಕಿಸದೇ ಸರ್ಕಾರದ ಕೆಲಸವನ್ನು, ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ತಪಾಸಣೆ, ಸಮೀಕ್ಷೆಯಂತಹ ಹಲವಾರು ಕೆಲಸಗಳು ಇವರ ಕೊರಳಿಗೆ ಬೀಳುತ್ತವೆ. ಸರ್ಕಾರ ಮುಂಬರುವ ದಿನಗಳಲ್ಲಿ ಪ್ರೋತ್ಸಾಹಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೆಲ ದಿನಗಳ ಹಿಂದೆ ಹಿರಿಯ ಸಾಹಿತಿ ರೂಪ ಹಾಸನ್ ಆಶಾ ಕಾರ್ಯಕರ್ತೆಯರ ಆರೋಗ್ಯದ ವಿಚಾರವಾಗಿ ಚರ್ಚಿಸಿದ್ದರು ಎಂದು ಡಾ.ಅಬ್ದುಲ್ ಬಶೀರ್​ ಹೇಳಿದರು.

For All Latest Updates

TAGGED:

Asha workers
ETV Bharat Logo

Copyright © 2025 Ushodaya Enterprises Pvt. Ltd., All Rights Reserved.