ETV Bharat / state

ನಾಳೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಮರು ಆರಂಭ ಸಾಧ್ಯತೆ

ಕಳೆದ 4-5 ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ಬೆಂಗಳೂರು-ಮಂಗಳೂರು ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಮೇಲೆ ಮಣ್ಣು ಕುಸಿದು ಬಿದ್ದಿತ್ತು. ಅಲ್ಲದೆ ಅಪಾಯಕಾರಿ ಬಂಡೆಯೂ ಹಳಿಗೆ ಉರುಳಿ ಬಿದ್ದಿತ್ತು. ಈ ಹಿನ್ನೆಲೆ ಎರಡು ದಿನಗಳಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು

author img

By

Published : Jul 22, 2019, 5:05 PM IST

ಮಣ್ಣು ತೆರವು ಕಾರ್ಯದಲ್ಲಿ ನಿರತವಾದ ರೈಲ್ವೇ ಸಿಬ್ಬಂದಿ

ಹಾಸನ: ಬೆಂಗಳೂರು-ಮಂಗಳೂರು ನಡುವಿನ ರೈಲ್ವೇ ಹಳಿ ಮೇಲೆ ಕುಸಿದು ಬಿದ್ದಿದ್ದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು ನಾಳೆಯಿಂದ ರೈಲು ಸಂಚಾರ ಪುನಾರಂಭವಾಗುವ ನಿರೀಕ್ಷೆಯಿದೆ.

2 ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿದ ರೈಲ್ವೇ ಸಿಬ್ಬಂದಿ, 6 ಹಿಟಾಚಿಗಳನ್ನು ಬಳಸಿಕೊಂಡು ಹಳಿ ಮೇಲೆ ಬಿದ್ದಿದ್ದ ಮಣ್ಣು ಮತ್ತು ಬಂಡೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಳೆಯ ಕಾರಣ ಪದೇ ಪದೇ ಹಳಿಗಳ ಮೇಲೆ ಮಣ್ಣು ಕುಸಿಯುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯುಂಟಾಗಿತ್ತು. ಆದ್ದರಿಂದ ಮೊದಲು ಹಳಿ ಮೇಲೆ ಬಿದ್ದಿದ್ದ ಬಂಡೆ ಸುತ್ತಲಿನ ಮಣ್ಣು ತೆರೆವುಗೊಳಿಸುವ ಕಾರ್ಯವನ್ನು ರೈಲ್ವೆ ಇಲಾಖೆ ಸಿಬ್ಬಂದಿ ಮಾಡಿದ್ದರು. ಇಂದು ಮಧ್ಯಾಹ್ನ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ ರೈಲು ಸಂಚಾರ ಆರಂಭವಾಗುವ ಸಾಧ್ಯತೆಯಿದೆ.

ಹಾಸನ: ಬೆಂಗಳೂರು-ಮಂಗಳೂರು ನಡುವಿನ ರೈಲ್ವೇ ಹಳಿ ಮೇಲೆ ಕುಸಿದು ಬಿದ್ದಿದ್ದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು ನಾಳೆಯಿಂದ ರೈಲು ಸಂಚಾರ ಪುನಾರಂಭವಾಗುವ ನಿರೀಕ್ಷೆಯಿದೆ.

2 ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿದ ರೈಲ್ವೇ ಸಿಬ್ಬಂದಿ, 6 ಹಿಟಾಚಿಗಳನ್ನು ಬಳಸಿಕೊಂಡು ಹಳಿ ಮೇಲೆ ಬಿದ್ದಿದ್ದ ಮಣ್ಣು ಮತ್ತು ಬಂಡೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಳೆಯ ಕಾರಣ ಪದೇ ಪದೇ ಹಳಿಗಳ ಮೇಲೆ ಮಣ್ಣು ಕುಸಿಯುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯುಂಟಾಗಿತ್ತು. ಆದ್ದರಿಂದ ಮೊದಲು ಹಳಿ ಮೇಲೆ ಬಿದ್ದಿದ್ದ ಬಂಡೆ ಸುತ್ತಲಿನ ಮಣ್ಣು ತೆರೆವುಗೊಳಿಸುವ ಕಾರ್ಯವನ್ನು ರೈಲ್ವೆ ಇಲಾಖೆ ಸಿಬ್ಬಂದಿ ಮಾಡಿದ್ದರು. ಇಂದು ಮಧ್ಯಾಹ್ನ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ ರೈಲು ಸಂಚಾರ ಆರಂಭವಾಗುವ ಸಾಧ್ಯತೆಯಿದೆ.

Intro:ಹಾಸನ: ಕಳೆದ 4-5ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಕುಸಿತವಾದ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನ ಎರಡುದಿನದಿಂದ ಸ್ಥಗಿತಗೊಳಿಸಲಾಗಿತ್ತು.ಇಂದು ಮಧ್ಯಾಹ್ನ ಮಣ್ಣು ತೆರವುಗೊಳಿಸುವ ಕಾರ್ಯವನ್ನ ಯಶಸ್ವಿಗೊಳಿಸಿದೆ.

ಮಂಗಳೂರು-ಬೆಂಗಳೂರು ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರವನ್ನ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಇಂದು ಮಧ್ಯಾಹ್ನ ಮಣ್ಣು ಕುಸಿತವಾದ ಪ್ರದೇಶದಲ್ಲಿ 6 ಇಟಾಚಿಗಳ ಮೂಲಕ 2 ದಿನದಿಂದ ಕಾರ್ಯಾಚರಣೆ ಮಾಡುವ ಮೂಲಕ ಹಳಿಗಳ ಮೇಲೆ ಬಿದ್ದದ್ದ ಮಣ್ಣನ್ನ ಯಶಸ್ವಿಯಾಗಿ ತೆಗೆಯಲಾಗಿದೆ.

ಮಳೆಯ ನಡುವೆಯೂ ಕೂಡಾ ಘಾಟಿ ಪ್ರದೇಶದಲ್ಲಿ ಹಳಿಗಳ ಮೇಲೆ ಮಣ್ಣು ಸವಕಳಿಯಾಗುತ್ತಿದ್ದ ಹಿನ್ನಲೆಯಲ್ಲಿ ಬಂಡೆಯ ಸುತ್ತಲಿನಲ್ಲಿದ್ದ ಮಣ್ಣನ್ನು ತೆರೆವುಗೊಳಿಸುವ ಕಾರ್ಯವನ್ನ ರೈಲ್ವೆ ಇಲಾಖೆ ಮತ್ತು ಸಿಬ್ಬಂತೆ ಮಾಡಿದೆ. ನಾಳೆಯಿಂದ ರೈಲು ಸಂಚಾರ ಆರಂಭವಾಗುವ ಸಾಧ್ಯತೆಯಿದೆ.

ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

Body:0Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.