ETV Bharat / state

ಗೃಹ ಸಚಿವ ಎಂ. ಬಿ. ಪಾಟೀಲ್​​​ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ - undefined

ಸಮ್ಮಿಶ್ರ ಸರ್ಕಾರದಲ್ಲಿ ಗೃಹ ಸಚಿವರು ರಾಜಕೀಯ ಎದುರಾಳಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ಅವರು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಹಾಸನ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಪ್ರತಿಭಟನೆ
author img

By

Published : May 6, 2019, 3:36 PM IST

ಹಾಸನ: ಗೃಹ ಸಚಿವ ಎಂ.ಬಿ. ಪಾಟೀಲ್‌ ದಬ್ಬಾಳಿಕೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಎನ್‌.ಆರ್‌.ವತ್ತದ ಮಾರ್ಗವಾಗಿ ಮೆರವಣಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ಕಾರ್ಯಕರ್ತರು, ಪಾಲುದಾರಿಕೆ ಸರ್ಕಾರದಲ್ಲಿ ಗೃಹ ಸಚಿವರು ರಾಜಕೀಯ ಎದುರಾಳಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಾ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಮಾಧ್ಯಮಗಳ ಮೇಲೆ ಸೇಡಿನ ಪ್ರತಿಕಾರ ಸಾಧಿಸುತ್ತಿದೆ.

ಬಿಜೆಪಿ ಪ್ರತಿಭಟನೆ

ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ಕರೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕಷ್ಣ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಜೆಡಿಎಸ್‌ ಶಾಸಕ ನಾರಾಯಣಗೌಡ ಚಿತ್ರನಟರಾದ ಯಶ್‌ ಮತ್ತು ದರ್ಶನ್‌ ಅವರಿಗೆ ಬೆದರಿಕೆ ಹಾಕಿದ್ದರೂ ಕ್ರಮ ತೆಗೆದುಕೊಳ್ಳದೆ ಏನೂ ಗೊತ್ತಿಲ್ಲ ಎಂಬಂತೆ ಜಾಣಮೌನ ವಹಿಸಿದೆ ಎಂದರು.

ಹಾಸನ: ಗೃಹ ಸಚಿವ ಎಂ.ಬಿ. ಪಾಟೀಲ್‌ ದಬ್ಬಾಳಿಕೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಎನ್‌.ಆರ್‌.ವತ್ತದ ಮಾರ್ಗವಾಗಿ ಮೆರವಣಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ಕಾರ್ಯಕರ್ತರು, ಪಾಲುದಾರಿಕೆ ಸರ್ಕಾರದಲ್ಲಿ ಗೃಹ ಸಚಿವರು ರಾಜಕೀಯ ಎದುರಾಳಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಾ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಮಾಧ್ಯಮಗಳ ಮೇಲೆ ಸೇಡಿನ ಪ್ರತಿಕಾರ ಸಾಧಿಸುತ್ತಿದೆ.

ಬಿಜೆಪಿ ಪ್ರತಿಭಟನೆ

ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ಕರೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕಷ್ಣ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಜೆಡಿಎಸ್‌ ಶಾಸಕ ನಾರಾಯಣಗೌಡ ಚಿತ್ರನಟರಾದ ಯಶ್‌ ಮತ್ತು ದರ್ಶನ್‌ ಅವರಿಗೆ ಬೆದರಿಕೆ ಹಾಕಿದ್ದರೂ ಕ್ರಮ ತೆಗೆದುಕೊಳ್ಳದೆ ಏನೂ ಗೊತ್ತಿಲ್ಲ ಎಂಬಂತೆ ಜಾಣಮೌನ ವಹಿಸಿದೆ ಎಂದರು.

Intro:ಗೃಹ ಸಚಿವರ ಸ್ಥಾನಕ್ಕೆ ರಾಜೀನಾಮೆ ಜೆಜೆಪಿ ಆಗ್ರಹ 

ಹಾಸನ: ಗೃಹ ಸಚಿವ ಎಂ.ಬಿ.ಪಾಟೀಲ್‌ ದಬ್ಬಾಳಿಕೆ ಹಾಗೂ ಅಭಿವಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದು ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 
ನಗರದ ಹೇಮಾವತಿ ಪ್ರತಿಮಯಿಂದ ಎನ್‌.ಆರ್‌.ವತ್ತದ ಮಾರ್ಗವಾಗಿ ಮೆರವಣಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ಕಾರ್ಯಕರ್ತರು ಪಾಲುದಾರಿಕೆ ಸರ್ಕಾರದ ಗೃಹ ಸಚಿವರು ರಾಜಕೀಯ ಎದುರಾಳಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಾ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಿದರು. 
ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿ,ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಮಾಧ್ಯಮಗಳ ಮೇಲೆ ಸೇಡಿನ ಪ್ರತಿಕಾರ ಸಾಧಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಕರೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕಷ್ಣ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಜೆಡಿಎಸ್‌ ಶಾಸಕ ನಾರಾಯಣಗೌಡ ಚಿತ್ರನಟರಾದ ಯಶ್‌ ಮತ್ತು ದರ್ಶನ್‌ ಅವರಿಗೆ ಬೆದರಿಕೆ ಹಾಕಿದ್ದರೂ ಕ್ರಮ ತೆಗೆದುಕೊಳ್ಳದೆ ಏನೂ ಗೊತ್ತಿಲ್ಲ ಎಂಬಂತೆ ಜಾಣಮೌನ ವಹಿಸಿದೆ ಎಂದರು.  
ಮಾಧ್ಯಮ ಕ್ಷೇತ್ರದ ಮೇಲೆಯೂ ಮೈತ್ರಿ ಸರ್ಕಾರ ಕಿಡಿಕಾರುತ್ತಿದೆ.ತಪ್ಪು ಮಾಡುವ ಸರ್ಕಾರ ಹಾಗೂ ಸಚಿವರನ್ನು ಟೀಕಿಸುವುದೇ ಅಪರಾಧ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಟೀಕಿಸಿದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ.ರಾಜ್ಯದಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳು ಪುನಃ ಮರುಕಳಿಸುತ್ತಿವೆ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ.ಸಾಮಾಜಿಕ ತಾಣದಲ್ಲಿ ಸರ್ಕಾರ ಟೀಕಿಸಿದ ಪತ್ರಕರ್ತರನ್ನು ಕಾರಾಗಹಕ್ಕೆ ತಳ್ಳುತ್ತಿದ್ದಾರೆ. ಈ ವಿಷಯಗಳಲ್ಲಿ ರಾಜ್ಯದ ಗೃಹ ಸಚಿವರೇ ವಿಶೇಷ ಆಸಕ್ತಿ ವಹಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. 
ಮಹೇಶ್ ವಿಕ್ರಂ ಹೆಗಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತ್ ಕುಮಾರ್ ಮತ್ತು ಅಜಿತ್ ಶೆಟ್ಟಿ ಅವರ ಮೇಲೂ ನಿರಾಧಾರ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗಿದೆ.ಇವುಗಳ ಹಿಂದೆ ಸ್ವತಃ ಗಹ ಸಚಿವರ ಕೈವಾಡವಿದೆ. ಎಂ.ಬಿ.ಪಾಟೀಲರು ಲಿಂಗಾಯತ ಸ್ವತಂತ್ರ್ಯ ಧರ್ಮ ವಿಭಜನೆಯಲ್ಲಿ ಕೈ ಜೋಡಿಸಿರಲಿಲ್ಲವೇ?. ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ದಿವ್ಯ ಮೌನಕ್ಕೆ ಶರಣಾಗಿದ್ದಾರೆ. ಕೂಡಲೇ ಮುಖ್ಯಮಂತ್ರಿ ಅವರು ಮಧ್ಯೆ ಪ್ರವೇಶಿಸಬೇಕು.ರಾಜಕೀಯ ದ್ವೇಷ ಬದಿಗೊತ್ತಿ ಪಾರದರ್ಶಕ ಆಡಳಿತ ನಡೆಸಬೇಕು ಎಂದು ಆಗ್ರಹಿಸಿದರು. 

– ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.



















Body:0


Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.