ETV Bharat / state

ಬೇಲೂರಿನಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ.. ದೇಸಿ ಕ್ರೀಡೆ ನೋಡಲು ಬಂದವರಿಗೆ ಫುಲ್‌ ಮಜಾ.. - ಬೇಲೂರಿನಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ

ರಾಜ್ಯ ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿ ಸಂಭ್ರಮಿಸಿದರು. ಸಾಂಪ್ರದಾಯಿಕ ಎತ್ತಿನ ಬಂಡಿ ಸ್ಪರ್ಧೆ ನೋಡಲು ಬಂದಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸವಾರರನ್ನು ಹುರಿದುಂಬಿಸುತ್ತಿದ್ದರು.

Bull cart competiotion in Beluru
ಬೇಲೂರಿನಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ
author img

By

Published : Jan 20, 2020, 5:17 PM IST

ಹಾಸನ: ಬೇಲೂರಿನಲ್ಲಿ ಮಲ್ಲೇಶ್ವರ ಯುವಕ ಸಂಘ ಆಯೋಜಿಸಿದ್ದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌ ಚಾಲನೆ ನೀಡಿದರು.

ಬೇಲೂರಿನಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ..

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌, ನಾಗರಿಕತೆ ಬೆಳೆದಂತೆ ಸಂಸ್ಕೃತಿಯ ಮೇಲೆ ಪ್ರಹಾರ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಅಗತ್ಯ ಎಂದು ಅಭಿಪ್ರಾಯಪಟ್ಟರು.

ತಾಲೂಕಿನ ಮುತ್ತುಗನ್ನೆ ಗ್ರಾಮದ ಮಲ್ಲೇಶ್ವರ ಯುವಕ ಸಂಘದಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿ ಸಂಭ್ರಮಿಸಿದರು. ಸಾಂಪ್ರದಾಯಿಕ ಎತ್ತಿನ ಬಂಡಿ ಸ್ಪರ್ಧೆ ನೋಡಲು ಬಂದಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸವಾರರನ್ನು ಹುರಿದುಂಬಿಸುತ್ತಿದ್ದರು. ಅಕ್ಕಪಕ್ಕದ ಜಿಲ್ಲೆಗಳಾದ ಚಿತ್ರದುರ್ಗ,ಕೋಲಾರ, ಚಿಕ್ಕಮಗಳೂರು, ಹಾಸನ, ಹುಬ್ಬಳ್ಳಿ ಹಾಗೂ ಮಂಡ್ಯ ಸೇರಿ ವಿವಿಧ ಕಡೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಹಾಸನ: ಬೇಲೂರಿನಲ್ಲಿ ಮಲ್ಲೇಶ್ವರ ಯುವಕ ಸಂಘ ಆಯೋಜಿಸಿದ್ದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌ ಚಾಲನೆ ನೀಡಿದರು.

ಬೇಲೂರಿನಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ..

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌, ನಾಗರಿಕತೆ ಬೆಳೆದಂತೆ ಸಂಸ್ಕೃತಿಯ ಮೇಲೆ ಪ್ರಹಾರ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಅಗತ್ಯ ಎಂದು ಅಭಿಪ್ರಾಯಪಟ್ಟರು.

ತಾಲೂಕಿನ ಮುತ್ತುಗನ್ನೆ ಗ್ರಾಮದ ಮಲ್ಲೇಶ್ವರ ಯುವಕ ಸಂಘದಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿ ಸಂಭ್ರಮಿಸಿದರು. ಸಾಂಪ್ರದಾಯಿಕ ಎತ್ತಿನ ಬಂಡಿ ಸ್ಪರ್ಧೆ ನೋಡಲು ಬಂದಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸವಾರರನ್ನು ಹುರಿದುಂಬಿಸುತ್ತಿದ್ದರು. ಅಕ್ಕಪಕ್ಕದ ಜಿಲ್ಲೆಗಳಾದ ಚಿತ್ರದುರ್ಗ,ಕೋಲಾರ, ಚಿಕ್ಕಮಗಳೂರು, ಹಾಸನ, ಹುಬ್ಬಳ್ಳಿ ಹಾಗೂ ಮಂಡ್ಯ ಸೇರಿ ವಿವಿಧ ಕಡೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

Intro:ಹಾಸನ: ನಾಗರಿಕತೆ ಬೆಳೆದಂತೆ ಸಂಸ್ಕೃತಿಯ ಮೇಲೆ ಪ್ರಹಾರ ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಅಗತ್ಯ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌ ಅಭಿಪ್ರಾಯಪಟ್ಟರು.

ಹಾಸನದ ಬೇಲೂರಿನಲ್ಲಿ ಆಯೋಜಿಸಿದ್ದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದ್ರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಮಲ್ಲೇಶ್ವರ ಯುವಕ ಸಂಘದವರು ಜೋಡಿ ಎತ್ತಿನಬಂಡಿ ಓಟದ ಸ್ಪರ್ಧೆ ಆಯೋಜಿಸಿರುವುದು ಶ್ಲಾಘನೀಯ ಎಂದ್ರು.

ತಾಲ್ಲೂಕಿನ ಮುತ್ತುಗನ್ನೆ ಗ್ರಾಮದ ಮಲ್ಲೇಶ್ವರ ಯುವಕ ಸಂಘದಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯದಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿ ಸಂಭ್ರಮಿಸಿದ್ರು.

ಒಂದಕ್ಕಿಂತ ಒಂದು ಎತ್ತಿನ ಬಂಡಿಗಳು ಬಿರುಗಾಳಿಯಂತೆ ಮುನ್ನುಗ್ಗುತ್ತಿದ್ದು, ಸವಾರರು ಉತ್ಸಾಹದಿಂದ ಬಂಡಿಯನ್ನು ಓಡಿಸುತ್ತಿದ್ದರೆ, ಸಾಂಪ್ರದಾಯಿಕ ಎತ್ತಿನ ಬಂಡಿ ಸ್ಪರ್ಧೆ ನೋಡಲು ಬಂದಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸವಾರರನ್ನು ಹುರಿದುಂಬಿಸುತ್ತಿದ್ದರು.

ಇನ್ನು ಅಕ್ಕಪಕ್ಕದ ಜಿಲ್ಲೆಗಳಾದ ಚಿತ್ರದುರ್ಗ,ಕೋಲಾರ, ಚಿಕ್ಕಮಗಳೂರು, ಹಾಸನ, ಹುಬ್ಬಳ್ಳಿ, ಮಂಡ್ಯ ಸೇರಿದಂತೆ ವಿವಿಧ ಕಡೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಮಲ್ಲೇಶ್ವರ ಯುವಕ ಸಂಘದ ಅಧ್ಯಕ್ಷ ಮಹೇಶ್‌, ಪದಾಧಿಕಾರಿಗಳಾದ ಜಗದೀಶ್, ದಯಾನಂದ್‌, ದಿಲೀಪ್, ಪುನೀತ್‌, ಸೂರಿ ಮುಂತಾದವರಿದ್ದರು.



Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.