ETV Bharat / state

ಹಾಸನದಲ್ಲಿ ವಿವಿಧ ಇಲಾಖೆಗಳ ಜಂಟಿ ಸಭೆ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಸೂಚನೆ - ಹಾಸನದಲ್ಲಿ ಮಂಗನ ಕಾಯಿಲೆ ನಿಯಂತ್ರಣ ಸಭೆ ಸುದ್ದಿ

ಹಾಸನ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಜಂಟಿಯಾಗಿ ಮಂಗನ ಕಾಯಿಲೆ ಕುರಿತು ವ್ಯಾಪಕ ಪ್ರಚಾರ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ.ಪರಮೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿವಿಧ ಇಲಾಖೆಗಳ ಜಂಟಿ ಸಭೆ
author img

By

Published : Nov 20, 2019, 1:13 PM IST

ಹಾಸನ: ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಜಂಟಿಯಾಗಿ ಮಂಗನ ಕಾಯಿಲೆ ಕುರಿತು ವ್ಯಾಪಕ ಪ್ರಚಾರ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ.ಪರಮೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದ ಬಿ.ಎ.ಪರಮೇಶ್, ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶಾಲೆಗಳಲ್ಲಿ, ಅಂಗನವಾಡಿ ಮತ್ತು ಸ್ತ್ರೀ ಶಕ್ತಿ ಸಂಘಗಳಲ್ಲಿ ಹಾಗೂ ಗ್ರಾಮ ಆರೋಗ್ಯ ಪೌಷ್ಟಿಕ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಿ ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದರು.

ಯಾವುದೇ ಪ್ರದೇಶದಲ್ಲಿ ಮಂಗಗಳು ಸತ್ತರೆ ಕೂಡಲೇ ಗ್ರಾಮ ಪಂಚಾಯ್ತಿಗಳಿಗೆ, ಆರೋಗ್ಯಾಧಿಕಾರಿಗಳಿಗೆ ಅಥವಾ ಆರೋಗ್ಯ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಅರಿವು ಮೂಡಿಸಿ. ಕಾಡಿನ ಸುತ್ತಮುತ್ತಲಿನ ಹಳ್ಳಿಗಳ ಪ್ರತಿ ಮನೆಗೂ ಉಚಿತವಾಗಿ ಡಿ.ಎಂ.ಪಿ ತೈಲವನ್ನು ವಿತರಿಸುವಂತೆ ಬಿ.ಎ.ಪರಮೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಗಳ ಕಳೇಬರವನ್ನು ಪೋಸ್ಟ್ ಮಾರ್ಟಮ್ ಮಾಡಿ, ವಿಸೆರಾ ಸ್ಯಾಂಪಲ್‍ಗಳನ್ನು ಶಿವಮೊಗ್ಗದ ವಿ.ಡಿ.ಎಲ್. ಲ್ಯಾಬ್‍ಗೆ ಕಳುಹಿಸುವಂತೆ ಪಶುಸಂಗೋಪನಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಪ್ರವಾಸಿಗರು ಟ್ರಕ್ಕಿಂಗ್ ತೆರಳದಂತೆ ಮತ್ತು ಕಾಡಿಗೆ ಹೋದರೆ ನಿರೋಧಕಗಳನ್ನು ಬಳಸುವ ಹಾಗೂ ಲಸಿಕೆಗಳ ಬಗ್ಗೆ ಮಾಹಿತಿ ನೀಡುವ ಬೋರ್ಡ್‍ಗಳನ್ನು ಪ್ರವಾಸಿ ತಾಣಗಳಲ್ಲಿ ಹಾಕುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಬಿ.ಎ.ಪರಮೇಶ್ ನಿರ್ದೇಶನ ನೀಡಿದರು.

ಹಾಸನ: ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಜಂಟಿಯಾಗಿ ಮಂಗನ ಕಾಯಿಲೆ ಕುರಿತು ವ್ಯಾಪಕ ಪ್ರಚಾರ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ.ಪರಮೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದ ಬಿ.ಎ.ಪರಮೇಶ್, ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶಾಲೆಗಳಲ್ಲಿ, ಅಂಗನವಾಡಿ ಮತ್ತು ಸ್ತ್ರೀ ಶಕ್ತಿ ಸಂಘಗಳಲ್ಲಿ ಹಾಗೂ ಗ್ರಾಮ ಆರೋಗ್ಯ ಪೌಷ್ಟಿಕ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಿ ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದರು.

ಯಾವುದೇ ಪ್ರದೇಶದಲ್ಲಿ ಮಂಗಗಳು ಸತ್ತರೆ ಕೂಡಲೇ ಗ್ರಾಮ ಪಂಚಾಯ್ತಿಗಳಿಗೆ, ಆರೋಗ್ಯಾಧಿಕಾರಿಗಳಿಗೆ ಅಥವಾ ಆರೋಗ್ಯ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಅರಿವು ಮೂಡಿಸಿ. ಕಾಡಿನ ಸುತ್ತಮುತ್ತಲಿನ ಹಳ್ಳಿಗಳ ಪ್ರತಿ ಮನೆಗೂ ಉಚಿತವಾಗಿ ಡಿ.ಎಂ.ಪಿ ತೈಲವನ್ನು ವಿತರಿಸುವಂತೆ ಬಿ.ಎ.ಪರಮೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಗಳ ಕಳೇಬರವನ್ನು ಪೋಸ್ಟ್ ಮಾರ್ಟಮ್ ಮಾಡಿ, ವಿಸೆರಾ ಸ್ಯಾಂಪಲ್‍ಗಳನ್ನು ಶಿವಮೊಗ್ಗದ ವಿ.ಡಿ.ಎಲ್. ಲ್ಯಾಬ್‍ಗೆ ಕಳುಹಿಸುವಂತೆ ಪಶುಸಂಗೋಪನಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಪ್ರವಾಸಿಗರು ಟ್ರಕ್ಕಿಂಗ್ ತೆರಳದಂತೆ ಮತ್ತು ಕಾಡಿಗೆ ಹೋದರೆ ನಿರೋಧಕಗಳನ್ನು ಬಳಸುವ ಹಾಗೂ ಲಸಿಕೆಗಳ ಬಗ್ಗೆ ಮಾಹಿತಿ ನೀಡುವ ಬೋರ್ಡ್‍ಗಳನ್ನು ಪ್ರವಾಸಿ ತಾಣಗಳಲ್ಲಿ ಹಾಕುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಬಿ.ಎ.ಪರಮೇಶ್ ನಿರ್ದೇಶನ ನೀಡಿದರು.

Intro:ಹಾಸನ : ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಜಂಟಿಯಾಗಿ ಮಂಗನ ಖಾಯಿಲೆ ಕುರಿತು ವ್ಯಾಪಕ ಪ್ರಚಾರ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಮಂಗನ ಖಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶಾಲೆಗಳಲ್ಲಿ, ಅಂಗನವಾಡಿ ಮತ್ತು ಸ್ತ್ರೀ ಶಕ್ತಿ ಸಂಘಗಳಲ್ಲಿ ಹಾಗೂ ಗ್ರಾಮ ಆರೋಗ್ಯ ಪೌಷ್ಠಿಕ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಿ ಮಂಗನ ಖಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿರೆಂದು ಸೂಚಿಸಿದರು.
ಯಾವುದೇ ಪ್ರದೇಶದಲ್ಲಿ ಮಂಗಗಳು ಸತ್ತರೆ ಕೂಡಲೇ ಗ್ರಾಮ ಪಂಚಾಯ್ತಿಗಳಿಗೆ, ಆರೋಗ್ಯಾಧಿಕಾರಿಗಳಿಗೆ ಅಥವಾ ಆರೋಗ್ಯ ಕಾರ್ಯಕರ್ತೆರಿಗೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಅರಿವು ಮೂಡಿಸಿ ಹಾಗೂ ಕಾಡಿನ ಸುತ್ತಮುತ್ತಲಿನ ಹಳ್ಳಿಗಳ ಪ್ರತಿ ಮನೆಗೂ ಉಚಿತವಾಗಿ ಡಿ.ಎಂ.ಪಿ ತೈಲವನ್ನು ವಿತರಿಸುವಂತೆ ಬಿ.ಎ. ಪರಮೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗ ಸತ್ತಿರುವ ಪ್ರದೇಶಗಳಲ್ಲಿ ಖಾಯಿಲೆ ಬಗ್ಗೆ ಕೆ.ಎಫ್.ಡಿ. ವೈರಲ್ ಫಾಸಿಟಿವ್ ಬಂದಲ್ಲಿ ಲಸಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ, ಲಸಿಕೆ ಹಾಗೂ ಡಿ.ಎಂ.ಪಿ. ತೈಲವನ್ನು ಪ್ರತಿ ಕುಟುಂಬ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖಾಧಿಕಾರಿಗಳಿಗೆ ಅವರು ತಿಳಿಸಿದರು.
ಕಾಡಿನಲ್ಲಿ ಮಂಗಗಳ ಸಾವಿನ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಕಾಡಿಗೆ ತೆರಳುವ ಜನರಿಗೆ ಕಡ್ಡಾಯವಾಗಿ ಡಿ.ಎಂ.ಪಿ. ತೈಲ, ಉಣ್ಣೆ ನಿರೋಧಕವನ್ನು ಬಳಸುವಂತೆ ಮತ್ತು ಕಾಡಿಗೆ ಹೋಗಿ ಬಂದ ಜಾನುವಾರುಗಳ ಮೈತೊಳೆದು ಉಣ್ಣೆ ನಿರೋಧಕಗಳನ್ನು ಬಳಸುವಂತೆ ತಿಳಿಸಲು ಅರಣ್ಯ ಇಲಾಖಾಧಿಕಾರಿಗಳಿಗೆ ಸಿ.ಇ.ಒ. ಹೇಳಿದರು.
ಮಂಗಗಳ ಕಳೇಬರವನ್ನು ಪೋಸ್ಟ್ ಮಾರ್ಟಮ್ ಮಾಡಿ, ವಿಸೆರಾ ಸ್ಯಾಂಪಲ್‍ಗಳನ್ನು ಶಿವಮೊಗ್ಗದ ವಿ.ಡಿ.ಎಲ್. ಲ್ಯಾಬ್‍ಗೆ ಕಳುಹಿಸುವಂತೆ ಪಶುಸಂಗೋಪನಾ ಇಲಾಖಾಧಿಕಾರಿಗಳಿಗೆ ಹೇಳಿದರಲ್ಲದೆ ಗ್ರಾಮ ಪಂಚಾಯತ್ ಹಾಗೂ ಪುರಸಭೆ ಅಧಿಕಾರಿಗಳು ಸತ್ತ ಮಂಗಗಳ ಕಳೇಬರವನ್ನು ಸುಟ್ಟು, ಆ ಪ್ರದೇಶದ ಸುತ್ತ 50 ಮೀ.ವರೆಗೆ ಮೆಲಾಥಿಯಾನ್ ಅನ್ನು ಸಿಂಪಡಿಸುವಂತೆ ಅವರು ತಿಳಿಸಿದರು.
ಪ್ರವಾಸಿಗರಿಗೆ ಟ್ರಕ್ಕಿಂಗ್ ತೆರಳದಂತೆ ಮತ್ತು ಕಾಡಿಗೆ ಹೋದರೆ ಉಣ್ಣೆ ನಿರೋಧಕಗಳನ್ನು ಬಳಸುವ ಹಾಗೂ ಲಸಿಕೆಗಳ ಬಗ್ಗೆ ಮಾಹಿತಿ ನೀಡುವ ಬೋರ್ಡ್‍ಗಳನ್ನು ಪ್ರವಾಸಿ ತಾಣಗಳಲ್ಲಿ ಹಾಕುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಬಿ.ಎ. ಪರಮೇಶ್ ಅವರು ಸೂಚಿಸಿದರು.
ಮಂಗನ ಖಾಯಿಲೆ, ಮಂಗಗಳ ಸಾವು, ರೋಗ ಲಕ್ಷಣಗಳ ಬಗ್ಗೆ, ಉಣ್ಣೆಗಳ ನಿಯಂತ್ರಣ, ಲಸಿಕೆ ಹಾಗೂ ವೈಯಕ್ತಿಕ ರಕ್ಷಣೆಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವ್ಯಾಪಕ ಪ್ರಚಾರ ನೀಡುವಂತೆ ಅವರು ಹೇಳಿದರು.
ಜಿಲ್ಲಾ ಆರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಪಾಪಬೋವಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸ್ ಕುಂಬಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಹೇಮಲತಾ, ಮಲೇರಿಯಾ ರೋಗ ನಿಯಂತ್ರಣಾಧಿಕಾರಿ ಡಾ. ರಾಜಗೊಪಾಲ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.