ETV Bharat / state

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ: ಹಾಸನ ನೂತನ ಡಿಸಿ

author img

By

Published : Sep 1, 2019, 2:13 PM IST

ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ನಗರ ಸಂಚಾರ ನಡೆಸಿ, ವಿವಿಧ ಪ್ರದೇಶಗಳಲ್ಲಿನ ಕುಂದುಕೊರತೆ ಪರಿಶೀಲಿಸಿದರು. ತೆರೆದ ಗುಂಡಿಗಳನ್ನು ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ ; ಆರ್.ಗಿರೀಶ್

ಹಾಸನ: ನೂತನ ಜಿಲ್ಲಾಧಿಕಾರಿ ಆರ್.ಗಿರೀಶ್ ನಗರ ಸಂಚಾರ ನಡೆಸಿ, ವಿವಿಧ ಪ್ರದೇಶಗಳಲ್ಲಿನ ಕುಂದುಕೊರತೆ ಪರಿಶೀಲಿಸಿದರು. ತೆರೆದ ಗುಂಡಿಗಳನ್ನು ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ: ಡಿಸಿ

ನಗರದ ಸಂತೇಪೇಟೆ ರಸ್ತೆಯಲ್ಲಿ ಸಾಗಿ ಕಾಮಗಾರಿ ವೀಕ್ಷಿಸಿದ ಗಿರೀಶ್‌, ನಂತರ ಹೊಸಲೈನ್ ರಸ್ತೆಯಲ್ಲಿ ಪೈಪ್‍ಲೈನ್ ಕಾಮಗಾರಿ ವೀಕ್ಷಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಹಾಸನಾಂಬ ದೇವಸ್ಥಾನದ ಜಾತ್ರೆ ಆರಂಭಗೊಳ್ಳುವ ಮುಂಚಿತವಾಗಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ, ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ಡಬಲ್ ಟ್ಯಾಂಕ್ ರಸ್ತೆ ಅಭಿವೃದ್ಧಿ ಗಮನಿಸಿದ ಅವರು, ಎಲ್ಲಾ ಪ್ರಮುಖ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು. ಬಳಿಕ ಸಾಲಗಾಮೆಯ ವರ್ತುಲ ರಸ್ತೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರದಾದ್ಯಂತ ರಸ್ತೆ ಅಗೆದಿರುವ ಕಡೆ ಬೇಗ ಪೈಪ್‍ಲೈನ್ ಅಳವಡಿಕೆ ಪೂರ್ಣಗೊಳಿಸಿ, ಅಭಿವೃದ್ಧಿ ಕೆಲಸ ಮುಗಿಸಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚನೆ ನೀಡಿದರು.

ಇದೇ ವೇಳೆ ನಗರದ ಹುಣಸಿನಕೆರೆಯ ಹಬೀಬಿಯಾ ಸಾ ಮೀಲ್ ರಸ್ತೆ, ಮೆಹಬೂಬ್ ನಗರಗಳಿಗೆ ಭೇಟಿ ನೀಡಿದ ಅವರು, ಗುಂಡಿಗಳನ್ನು ತಕ್ಷಣವೇ ಮುಚ್ಚಿ, ಅಪಾಯಕಾರಿ ಸಂಚಾರಿ ಮಾರ್ಗಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಹಾಸನ: ನೂತನ ಜಿಲ್ಲಾಧಿಕಾರಿ ಆರ್.ಗಿರೀಶ್ ನಗರ ಸಂಚಾರ ನಡೆಸಿ, ವಿವಿಧ ಪ್ರದೇಶಗಳಲ್ಲಿನ ಕುಂದುಕೊರತೆ ಪರಿಶೀಲಿಸಿದರು. ತೆರೆದ ಗುಂಡಿಗಳನ್ನು ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ: ಡಿಸಿ

ನಗರದ ಸಂತೇಪೇಟೆ ರಸ್ತೆಯಲ್ಲಿ ಸಾಗಿ ಕಾಮಗಾರಿ ವೀಕ್ಷಿಸಿದ ಗಿರೀಶ್‌, ನಂತರ ಹೊಸಲೈನ್ ರಸ್ತೆಯಲ್ಲಿ ಪೈಪ್‍ಲೈನ್ ಕಾಮಗಾರಿ ವೀಕ್ಷಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಹಾಸನಾಂಬ ದೇವಸ್ಥಾನದ ಜಾತ್ರೆ ಆರಂಭಗೊಳ್ಳುವ ಮುಂಚಿತವಾಗಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ, ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ಡಬಲ್ ಟ್ಯಾಂಕ್ ರಸ್ತೆ ಅಭಿವೃದ್ಧಿ ಗಮನಿಸಿದ ಅವರು, ಎಲ್ಲಾ ಪ್ರಮುಖ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು. ಬಳಿಕ ಸಾಲಗಾಮೆಯ ವರ್ತುಲ ರಸ್ತೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರದಾದ್ಯಂತ ರಸ್ತೆ ಅಗೆದಿರುವ ಕಡೆ ಬೇಗ ಪೈಪ್‍ಲೈನ್ ಅಳವಡಿಕೆ ಪೂರ್ಣಗೊಳಿಸಿ, ಅಭಿವೃದ್ಧಿ ಕೆಲಸ ಮುಗಿಸಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚನೆ ನೀಡಿದರು.

ಇದೇ ವೇಳೆ ನಗರದ ಹುಣಸಿನಕೆರೆಯ ಹಬೀಬಿಯಾ ಸಾ ಮೀಲ್ ರಸ್ತೆ, ಮೆಹಬೂಬ್ ನಗರಗಳಿಗೆ ಭೇಟಿ ನೀಡಿದ ಅವರು, ಗುಂಡಿಗಳನ್ನು ತಕ್ಷಣವೇ ಮುಚ್ಚಿ, ಅಪಾಯಕಾರಿ ಸಂಚಾರಿ ಮಾರ್ಗಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

Intro:ಹಾಸನ: ನೂತನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ನಗರ ಸಂಚಾರ ನಡೆಸಿ, ವಿವಿಧ ಪ್ರದೇಶಗಳಲ್ಲಿನ ಕುಂದುಕೊರತೆ ಪರಿಶೀಲಿಸಿ ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆ ನೀಡಿದರು.

Body:ನಗರದ ಸಂತೇಪೇಟೆ ರಸ್ತೆಯಲ್ಲಿ ಸಾಗಿ ಕಾಮಗಾರಿ ವೀಕ್ಷಿಸಿದ ಗಿರೀಶ್‌, ತೆರೆದ ಗುಂಡಿಗಳನ್ನು ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ಬೇಗ ಮುಗಿಸಿ ಸುಗಮ ಸಂಚಾರಕ್ಕೆ ನಿಗಾವಹಿ ಸುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಹೊಸಲೈನ್ ರಸ್ತೆಯಲ್ಲಿ ಪೈಪ್‍ಲೈನ್ ಕಾಮಗಾರಿ ವೀಕ್ಷಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಹಾಸನಾಂಬ ದೇವಸ್ಥಾನದ ಜಾತ್ರೆ ಆರಂಭಗೊಳ್ಳುವ ಮುಂಚಿತವಾಗಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ, ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಗುಣಮಟ್ಟ ಕಾಯ್ದುಕೊಳ್ಳುವಂತೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಡಬಲ್ ಟ್ಯಾಂಕ್ ರಸ್ತೆ ಅಭಿವೃದ್ಧಿ ಗಮನಿಸಿದ ಅವರು, ಎಲ್ಲಾ ಪ್ರಮುಖ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಶೀಘ್ರ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.

ಬಳಿಕ ಸಾಲಗಾಮೆಯ ವರ್ತುಲ ರಸ್ತೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರದಾದ್ಯಂತ ರಸ್ತೆ ಅಗೆದಿರುವ ಕಡೆ ಬೇಗ ಪೈಪ್‍ಲೈನ್ ಅಳವಡಿಕೆ ಪೂರ್ಣಗೊಳಿಸಿ, ಅಭಿವೃದ್ಧಿ ಕೆಲಸ ಮುಗಿಸಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚನೆ ನೀಡಿದರು.

ಇದೇ ವೇಳೆ ನಗರದ ಹುಣಸಿನಕೆರೆಯ ಹಬೀಬಿಯಾ ಸಾ ಮೀಲ್ ರಸ್ತೆ, ಮೆಹಬೂಬ್ ನಗರಗಳಿಗೆ ಭೇಟಿ ನೀಡಿದ ಅವರು, ಗುಂಡಿಗಳನ್ನು ತಕ್ಷಣವೇ ಮುಚ್ಚಿ, ಅಪಾಯಕಾರಿ ಸಂಚಾರಿ ಮಾರ್ಗಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.

Conclusion:ಪ್ರಭಾರಿ ಅಪರ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜ್, ನಗರಸಭೆ ಆಯುಕ್ತ ಪರಮೇಶ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಹಾಗೂ ಇತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

-ಅರಕೆರೆ‌ ಮೋಹನಕುಮಾರ, ಈಟಿವಿಭಾರತ ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.