ETV Bharat / state

ಜೂನ್ 14 ರ ನಂತರ ಹಾಸನದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಕೆ: ಸಚಿವ ಗೋಪಾಲಯ್ಯ - Minister Gopalya talk about lockdown extension in Hassan

ನಾಳೆ ಸಿಎಂ ಯಡಿಯೂರಪ್ಪ ಹಾಸನ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ವಿವರಿಸುತ್ತೇವೆ, ಈಗ ಇರುವ ಲಾಕ್​ಡೌನ್​ನ್ನು ಜೂ 14 ರ ಬಳಿಕವೂ ಒಂದು ವಾರ ವಿಸ್ತರಣೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

minister-gopalya
ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ
author img

By

Published : Jun 10, 2021, 8:26 PM IST

ಹಾಸನ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗ್ತಿಲ್ಲ. ದಿನದಿಂದ ದಿನಕ್ಕೆ ಕೇಸ್​ಗಳು ಮತ್ತು ಪಾಸಿಟಿವಿಟಿ ರೇಟ್ ಸಹ ಕಡಿಮೆಯಾಗದ ಹಿನ್ನೆಲೆ ಮತ್ತೊಂದು ವಾರ ಲಾಕ್​ಡೌನ್​ ಮುಂದುವರೆಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.‌

ಇಂದು ಸಿಎಂ ಜೊತೆ ನಡೆದ ವಿಡಿಯೋ ಕಾನ್ಫರೆನ್ಸ್​ ನಂತರ ಮಾತನಾಡಿದ ಅವರು, ಪ್ರತಿವಾರ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ, ಮುಂದಿನ ವಾರದೊಳಗೆ ಬಹಳಷ್ಟು ಕಡಿಮೆಯಾಗಲಿದೆ. 23 ಹಳ್ಳಿಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ, ವೈದ್ಯರ ನಡೆ ಹಳ್ಳಿಯ ಕಡೆ 2ನೇ ಸುತ್ತು ಆರಂಭಿಸುತ್ತೇವೆ. ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ನಲ್ಲಿಯೇ ಚಿಕಿತ್ಸೆ ಪಡೆಯಬೇಕೆಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿದರು

ಶುಕ್ರವಾರ(ನಾಳೆ) ಸಿಎಂ ಯಡಿಯೂರಪ್ಪ ಹಾಸನ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ವಿವರಿಸುತ್ತೇವೆ. ಈಗ ಇರುವ ಲಾಕ್​ಡೌನ್​ನ್ನು ಜೂ. 14 ರ ಬಳಿಕವೂ ಒಂದು ವಾರ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.

ಹಾಸನದಲ್ಲಿ ಈ ಹಿಂದೆ ವಾರದಲ್ಲಿ ಮೂರು ದಿನ, ಅಂದರೆ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 19 ಗಂಟೆವರೆಗೆ ಅಗತ್ಯವಸ್ತು ಖರೀದಿಸಲು ಅವಕಾಶ ನೀಡಲಾಗಿದ್ದು, ಉಳಿದ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿತ್ತು.

ಓದಿ: ಬಾಲಕನ ಕಿಡ್ನಾಪ್ ಮಾಡಿ 2 ಕೋಟಿ ರೂ.ಗೆ ಬೇಡಿಕೆ ಕೇಸ್​: ಆರೋಪಿಗೆ ಷರತ್ತುಬದ್ಧ ಜಾಮೀನು

ಹಾಸನ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗ್ತಿಲ್ಲ. ದಿನದಿಂದ ದಿನಕ್ಕೆ ಕೇಸ್​ಗಳು ಮತ್ತು ಪಾಸಿಟಿವಿಟಿ ರೇಟ್ ಸಹ ಕಡಿಮೆಯಾಗದ ಹಿನ್ನೆಲೆ ಮತ್ತೊಂದು ವಾರ ಲಾಕ್​ಡೌನ್​ ಮುಂದುವರೆಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.‌

ಇಂದು ಸಿಎಂ ಜೊತೆ ನಡೆದ ವಿಡಿಯೋ ಕಾನ್ಫರೆನ್ಸ್​ ನಂತರ ಮಾತನಾಡಿದ ಅವರು, ಪ್ರತಿವಾರ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ, ಮುಂದಿನ ವಾರದೊಳಗೆ ಬಹಳಷ್ಟು ಕಡಿಮೆಯಾಗಲಿದೆ. 23 ಹಳ್ಳಿಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ, ವೈದ್ಯರ ನಡೆ ಹಳ್ಳಿಯ ಕಡೆ 2ನೇ ಸುತ್ತು ಆರಂಭಿಸುತ್ತೇವೆ. ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ನಲ್ಲಿಯೇ ಚಿಕಿತ್ಸೆ ಪಡೆಯಬೇಕೆಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿದರು

ಶುಕ್ರವಾರ(ನಾಳೆ) ಸಿಎಂ ಯಡಿಯೂರಪ್ಪ ಹಾಸನ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ವಿವರಿಸುತ್ತೇವೆ. ಈಗ ಇರುವ ಲಾಕ್​ಡೌನ್​ನ್ನು ಜೂ. 14 ರ ಬಳಿಕವೂ ಒಂದು ವಾರ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.

ಹಾಸನದಲ್ಲಿ ಈ ಹಿಂದೆ ವಾರದಲ್ಲಿ ಮೂರು ದಿನ, ಅಂದರೆ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 19 ಗಂಟೆವರೆಗೆ ಅಗತ್ಯವಸ್ತು ಖರೀದಿಸಲು ಅವಕಾಶ ನೀಡಲಾಗಿದ್ದು, ಉಳಿದ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿತ್ತು.

ಓದಿ: ಬಾಲಕನ ಕಿಡ್ನಾಪ್ ಮಾಡಿ 2 ಕೋಟಿ ರೂ.ಗೆ ಬೇಡಿಕೆ ಕೇಸ್​: ಆರೋಪಿಗೆ ಷರತ್ತುಬದ್ಧ ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.