ETV Bharat / state

ಮಂದಿರ ಬದಲು ಆಸ್ಪತ್ರೆ ಕಟ್ಟಿದರೆ ಕೊರೊನಾದಂತಹ ರೋಗಗಳ ನಿಯಂತ್ರಣ ಸಾಧ್ಯ: ಶ್ವೇತ ದೇವರಾಜು - ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತ ದೇವರಾಜು

ನಮ್ಮ ಜಿಲ್ಲೆ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕಿತರು ಇಲ್ಲ ಎಂದು ಉದಾಸೀನತೆ ಬೇಡ. ಹೊರ ದೇಶ, ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಯಿಂದ ಬರುವವರ ಮೇಲೆ ಎಚ್ಚರಿಕೆ ವಹಿಸಬೇಕು ಎಂದು ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತ ದೇವರಾಜು ಹೇಳಿದ್ದಾರೆ.

Shwetha  Devaraju
ಶ್ವೇತ ದೇವರಾಜು
author img

By

Published : Apr 17, 2020, 8:23 PM IST

ಸಕಲೇಶಪುರ: ಇನ್ನು ಮುಂದೆಯಾದರೂ ದೇವಸ್ಥಾನ, ಮಸೀದಿ, ಚರ್ಚ್​ಗಳನ್ನು ಹೆಚ್ಚಾಗಿ ಕಟ್ಟುವ ಬದಲು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳನ್ನು ಕಟ್ಟಿದರೆ ಜನರ ಜೀವನವನ್ನು ಬಲಿ ಪಡೆಯುತ್ತಿರುವ ಮಾರಕ ರೋಗವಾದ ಕೋವಿಡ್-19 ನಂತಹ ರೋಗಗಳನ್ನು ತಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತ ದೇವರಾಜು ಹೇಳಿದರು.

ಶುಕ್ರವಾರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕಿತರು ಇಲ್ಲ ಎಂದು ಉದಾಸೀನತೆ ಬೇಡ. ಹೊರ ದೇಶ, ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಯಿಂದ ಬರುವವರ ಮೇಲೆ ಎಚ್ಚರಿಕೆ ವಹಿಸಬೇಕು ಎಂದರು.

ಶ್ವೇತ ದೇವರಾಜು, ಜಿಪಂ ಅಧ್ಯಕ್ಷೆ

ಯಾವುದೇ ವ್ಯಕ್ತಿಯು ಹಸಿವಿನಿಂದ ಸಾಯಬಾರದು. ಅಂತವರು ಕಂಡು ಬಂದರೆ ತಾಲೂಕು ಆಡಳಿತ ಕೂಡಲೇ ಅಂತಹವರಿಗೆ ಪಡಿತರ ವ್ಯವಸ್ಥೆ ಅಥವಾ ಊಟದ ವ್ಯವಸ್ಥೆ ಮಾಡಬೇಕು. ತಾಲೂಕು ಹೆಚ್ಚು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಎಸ್ಟೇಟ್​​ಗಳಲ್ಲಿ ಇರುವ ಕೂಲಿ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ ಮಾಡುವ ಜೊತೆಗೆ ಅವರ ಆರೋಗ್ಯದ ಬಗ್ಗೆ ತಪಾಸಣೆಯನ್ನೂ ಕೂಡ ಮಾಡಬೇಕು ಎಂದಿದ್ದಾರೆ.

ಸಕಲೇಶಪುರ: ಇನ್ನು ಮುಂದೆಯಾದರೂ ದೇವಸ್ಥಾನ, ಮಸೀದಿ, ಚರ್ಚ್​ಗಳನ್ನು ಹೆಚ್ಚಾಗಿ ಕಟ್ಟುವ ಬದಲು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳನ್ನು ಕಟ್ಟಿದರೆ ಜನರ ಜೀವನವನ್ನು ಬಲಿ ಪಡೆಯುತ್ತಿರುವ ಮಾರಕ ರೋಗವಾದ ಕೋವಿಡ್-19 ನಂತಹ ರೋಗಗಳನ್ನು ತಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತ ದೇವರಾಜು ಹೇಳಿದರು.

ಶುಕ್ರವಾರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕಿತರು ಇಲ್ಲ ಎಂದು ಉದಾಸೀನತೆ ಬೇಡ. ಹೊರ ದೇಶ, ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಯಿಂದ ಬರುವವರ ಮೇಲೆ ಎಚ್ಚರಿಕೆ ವಹಿಸಬೇಕು ಎಂದರು.

ಶ್ವೇತ ದೇವರಾಜು, ಜಿಪಂ ಅಧ್ಯಕ್ಷೆ

ಯಾವುದೇ ವ್ಯಕ್ತಿಯು ಹಸಿವಿನಿಂದ ಸಾಯಬಾರದು. ಅಂತವರು ಕಂಡು ಬಂದರೆ ತಾಲೂಕು ಆಡಳಿತ ಕೂಡಲೇ ಅಂತಹವರಿಗೆ ಪಡಿತರ ವ್ಯವಸ್ಥೆ ಅಥವಾ ಊಟದ ವ್ಯವಸ್ಥೆ ಮಾಡಬೇಕು. ತಾಲೂಕು ಹೆಚ್ಚು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಎಸ್ಟೇಟ್​​ಗಳಲ್ಲಿ ಇರುವ ಕೂಲಿ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ ಮಾಡುವ ಜೊತೆಗೆ ಅವರ ಆರೋಗ್ಯದ ಬಗ್ಗೆ ತಪಾಸಣೆಯನ್ನೂ ಕೂಡ ಮಾಡಬೇಕು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.