ETV Bharat / state

ಹಾಸನದಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೊನಾ: 10ಕ್ಕೂ ಹೆಚ್ಚು ಮಂದಿ ಕ್ವಾರಂಟೈನ್​​​

ಶನಿವಾರ ಆರೋಗ್ಯ ಇಲಾಖೆಯು ಹಾಸನ ನಗರದ ಅರವತ್ತಕ್ಕೂ ಹೆಚ್ಚು ಪತ್ರಕರ್ತರ ಗಂಟಲು ದ್ರವವನ್ನು ಪರೀಕ್ಷೆ ಮಾಡಿದ್ದು, ಅದರಲ್ಲಿ ಒಬ್ಬ ವರದಿಗಾರ ಮತ್ತು ಮತ್ತೋರ್ವ ಛಾಯಾಗ್ರಾಹಕನಿಗೆ ಸೋಂಕು ತಗಲಿರುವುದು ದೃಢವಾಗಿದೆ. ಹೀಗಾಗಿ ಅವರಿಬ್ಬರನ್ನು ಹಾಸನದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

author img

By

Published : Jul 8, 2020, 4:55 PM IST

Corona infection for two journalists: many are quarantined
ಇಬ್ಬರು ಪತ್ರಕರ್ತರಿಗೆ ಕೊರೊನಾ ಸೋಂಕು: ಅನೇಕರು ಕ್ವಾರಂಟೈನ್​

ಹಾಸನ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಹೆಚ್ಚುತ್ತಿದ್ದು, ಇಬ್ಬರು ಪತ್ರಕರ್ತರಿಗೂ ಸೋಂಕು ತಗುಲಿರುವುದು ದೃಢವಾಗಿದೆ. ​

ಶನಿವಾರ ಆರೋಗ್ಯ ಇಲಾಖೆಯು ಹಾಸನ ನಗರದ ಅರವತ್ತಕ್ಕೂ ಹೆಚ್ಚು ಪತ್ರಕರ್ತರ ಗಂಟಲು ದ್ರವವನ್ನು ಪರೀಕ್ಷೆ ಮಾಡಿದ್ದು, ಅದರಲ್ಲಿ ಒಬ್ಬ ವರದಿಗಾರ ಮತ್ತು ಮತ್ತೋರ್ವ ಛಾಯಾಗ್ರಾಹಕನಿಗೆ ಸೋಂಕು ತಗಲಿರುವುದು ದೃಢವಾಗಿದೆ. ಹೀಗಾಗಿ ಅವರಿಬ್ಬರನ್ನು ಹಾಸನದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಂಟಲು ದ್ರವ ಪರೀಕ್ಷೆ ಮಾಡಿಸಿದ ಬಳಿಕ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ಹಲವರ ಜೊತೆ ಒಡನಾಟದಲ್ಲಿದ್ದರು ಎನ್ನಲಾಗಿದೆ. ಇದಲ್ಲದೆ ಮೊನ್ನೆ ಮೃತಪಟ್ಟ ವ್ಯಕ್ತಿಯೋರ್ವನ ಶವ ಸಂಸ್ಕಾರದ ವೇಳೆ ಕೂಡ ಭಾಗವಹಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಇವರ ಒಡನಾಟದಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಪತ್ರಕರ್ತರನ್ನು ಹಾಸನ ನಗರದ ರೆಡ್​​ಕ್ರಾಸ್​​ ಸಂಸ್ಥೆಯಲ್ಲಿ ಜಿಲ್ಲಾಡಳಿತ ಕ್ವಾರಂಟೈನ್​ ಮಾಡಿದ್ದು, ಅವರಿಗೆ ಮತ್ತೊಂದು ಸುತ್ತಿನ ಕೋವಿಡ್​ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

ಪತ್ರಕರ್ತರಿಗೆ ಸೋಂಕು ತಗಲಿರುವ ಹಿನ್ನೆಲೆ ಹಾಸನ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಸ್ಯಾನಿಟೈಸ್​ ಮಾಡುವ ಉದ್ದೇಶದಿಂದ ತಾತ್ಕಾಲಿಕವಾಗಿ ಏಳು ದಿನಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಹಾಸನ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಹೆಚ್ಚುತ್ತಿದ್ದು, ಇಬ್ಬರು ಪತ್ರಕರ್ತರಿಗೂ ಸೋಂಕು ತಗುಲಿರುವುದು ದೃಢವಾಗಿದೆ. ​

ಶನಿವಾರ ಆರೋಗ್ಯ ಇಲಾಖೆಯು ಹಾಸನ ನಗರದ ಅರವತ್ತಕ್ಕೂ ಹೆಚ್ಚು ಪತ್ರಕರ್ತರ ಗಂಟಲು ದ್ರವವನ್ನು ಪರೀಕ್ಷೆ ಮಾಡಿದ್ದು, ಅದರಲ್ಲಿ ಒಬ್ಬ ವರದಿಗಾರ ಮತ್ತು ಮತ್ತೋರ್ವ ಛಾಯಾಗ್ರಾಹಕನಿಗೆ ಸೋಂಕು ತಗಲಿರುವುದು ದೃಢವಾಗಿದೆ. ಹೀಗಾಗಿ ಅವರಿಬ್ಬರನ್ನು ಹಾಸನದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಂಟಲು ದ್ರವ ಪರೀಕ್ಷೆ ಮಾಡಿಸಿದ ಬಳಿಕ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ಹಲವರ ಜೊತೆ ಒಡನಾಟದಲ್ಲಿದ್ದರು ಎನ್ನಲಾಗಿದೆ. ಇದಲ್ಲದೆ ಮೊನ್ನೆ ಮೃತಪಟ್ಟ ವ್ಯಕ್ತಿಯೋರ್ವನ ಶವ ಸಂಸ್ಕಾರದ ವೇಳೆ ಕೂಡ ಭಾಗವಹಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಇವರ ಒಡನಾಟದಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಪತ್ರಕರ್ತರನ್ನು ಹಾಸನ ನಗರದ ರೆಡ್​​ಕ್ರಾಸ್​​ ಸಂಸ್ಥೆಯಲ್ಲಿ ಜಿಲ್ಲಾಡಳಿತ ಕ್ವಾರಂಟೈನ್​ ಮಾಡಿದ್ದು, ಅವರಿಗೆ ಮತ್ತೊಂದು ಸುತ್ತಿನ ಕೋವಿಡ್​ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

ಪತ್ರಕರ್ತರಿಗೆ ಸೋಂಕು ತಗಲಿರುವ ಹಿನ್ನೆಲೆ ಹಾಸನ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಸ್ಯಾನಿಟೈಸ್​ ಮಾಡುವ ಉದ್ದೇಶದಿಂದ ತಾತ್ಕಾಲಿಕವಾಗಿ ಏಳು ದಿನಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.