ETV Bharat / state

ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ: ಪತ್ನಿಯ ಬೆನ್ನತ್ತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತಿ!

author img

By

Published : Jun 25, 2023, 3:50 PM IST

ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.

crime-husband-attacked-his-wife-with-a-machete-in-holenarasipur
ಕೌಟುಂಬಿಕ ಕಲಹ: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಹೊಳೆನರಸೀಪುರ (ಹಾಸನ): ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ತಿರುಮನಹಳ್ಳಿಯಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ಪತಿ ಶ್ರೀನಿವಾಸ್​ ವಿರುದ್ಧ ಪತ್ನಿ ಸವಿತಾ ಕೇಸ್ ದಾಖಲಿಸಿದ್ದು, ಕೋರ್ಟ್ ನಲ್ಲಿ ವಿಚಾರಣೆ ಮುಂದುವರಿದಿತ್ತು. ಸವಿತಾ ಪತಿ ಬಳಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿದ್ದರು. ಇದೇ ವಿಚಾರದಲ್ಲಿ ನಿನ್ನೆ ಜಗಳ ತೆಗೆದು ಪತ್ನಿ ಮೇಲೆ ಶ್ರೀನಿವಾಸ್​ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ತನ್ನ ಪತ್ನಿ ಮೇಲೆ ಪತಿ​ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಏನಿದು ಘಟನೆ?: ಸವಿತಾ ಮತ್ತು ಶ್ರೀನಿವಾಸ್ ಮದುವೆಯಾದ ಕೆಲ ವರ್ಷಗಳ ಬಳಿಕ ಇಬ್ಬರು ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದರು. ಗಂಡನ ಸಹವಾಸವೇ ಬೇಡ ಎಂದು ತೀರ್ಮಾನ ಮಾಡಿದ್ದ ಪತ್ನಿ ಸವಿತಾ ಸಂಸಾರ ನಡೆಸೋಕೆ ಪತಿಯ ಬಳಿ ಜೀವನಾಂಶಕ್ಕೆ ಬೇಡಿಕೆಯಿಟ್ಟು, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇರುವಾಗಲೇ ನಿನ್ನೆ(ಶನಿವಾರ) ಸವಿತಾ ಮತ್ತು ಅವರ ತಂಗಿ ಅಂದ್ರೆ ಶ್ರೀನಿವಾಸಸ್​ ನಾದಿನಿ ಊರಿಗೆ ಬಂದು ಪ್ರಕರಣದ ಸಂಬಂಧ ಮಾತನಾಡುತ್ತಿದ್ದರು.

ಈ ವೇಳೆ ಏಕಾಏಕಿ ಮಾರಕಾಸ್ತ್ರ ತಂದ ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪತ್ನಿ ಮತ್ತು ನಾದಿನಿ ಇಬ್ಬರ ಮೇಲೆ ಹಲ್ಲೆ ಮಾಡಿ ನಡುರಸ್ತೆಯಲ್ಲಿಯೇ ಕೊಲೆಗೆ ಯತ್ನಿಸಿದ್ದಾರೆ. ನಂತರ ನಾದಿನಿಯ ಕಾರಿನ ಮೇಲೂ ದಾಳಿ ಮಾಡಿ ಗಾಜನ್ನು ಒಡೆದು ಹಾಕಿದ್ದಾರೆ. ಸದ್ಯ ಹಲ್ಲೆಗೊಳಗಾದ ಸವಿತಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ; 7 ಯುವತಿಯರ ರಕ್ಷಣೆ

ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದ ಕಿರಾತಕ: ಮತ್ತೊಂದೆಡೆ, ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಮಾರೇಶ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾರೇಶ್​ನನ್ನು ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ವಿಜಯ್ ಕರೆಸಿಕೊಂಡಿದ್ದ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮಾರೇಶ್​ನ ಕತ್ತಿಗೆ ಚಾಕುವಿನಿಂದ ವಿಜಯ್ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ಹಲ್ಲೆಯಿಂದ ಅಸ್ವಸ್ಥನಾಗಿ ಕೆಳಗೆ ಬಿದ್ದ ಮಾರೇಶ್​ನ ಕತ್ತಿನಿಂದ ವಿಜಯ್ ರಕ್ತ ಕುಡಿದಿದ್ದಾನೆ. ಇದನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ಹೊಳೆನರಸೀಪುರ (ಹಾಸನ): ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ತಿರುಮನಹಳ್ಳಿಯಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ಪತಿ ಶ್ರೀನಿವಾಸ್​ ವಿರುದ್ಧ ಪತ್ನಿ ಸವಿತಾ ಕೇಸ್ ದಾಖಲಿಸಿದ್ದು, ಕೋರ್ಟ್ ನಲ್ಲಿ ವಿಚಾರಣೆ ಮುಂದುವರಿದಿತ್ತು. ಸವಿತಾ ಪತಿ ಬಳಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿದ್ದರು. ಇದೇ ವಿಚಾರದಲ್ಲಿ ನಿನ್ನೆ ಜಗಳ ತೆಗೆದು ಪತ್ನಿ ಮೇಲೆ ಶ್ರೀನಿವಾಸ್​ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ತನ್ನ ಪತ್ನಿ ಮೇಲೆ ಪತಿ​ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಏನಿದು ಘಟನೆ?: ಸವಿತಾ ಮತ್ತು ಶ್ರೀನಿವಾಸ್ ಮದುವೆಯಾದ ಕೆಲ ವರ್ಷಗಳ ಬಳಿಕ ಇಬ್ಬರು ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದರು. ಗಂಡನ ಸಹವಾಸವೇ ಬೇಡ ಎಂದು ತೀರ್ಮಾನ ಮಾಡಿದ್ದ ಪತ್ನಿ ಸವಿತಾ ಸಂಸಾರ ನಡೆಸೋಕೆ ಪತಿಯ ಬಳಿ ಜೀವನಾಂಶಕ್ಕೆ ಬೇಡಿಕೆಯಿಟ್ಟು, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇರುವಾಗಲೇ ನಿನ್ನೆ(ಶನಿವಾರ) ಸವಿತಾ ಮತ್ತು ಅವರ ತಂಗಿ ಅಂದ್ರೆ ಶ್ರೀನಿವಾಸಸ್​ ನಾದಿನಿ ಊರಿಗೆ ಬಂದು ಪ್ರಕರಣದ ಸಂಬಂಧ ಮಾತನಾಡುತ್ತಿದ್ದರು.

ಈ ವೇಳೆ ಏಕಾಏಕಿ ಮಾರಕಾಸ್ತ್ರ ತಂದ ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪತ್ನಿ ಮತ್ತು ನಾದಿನಿ ಇಬ್ಬರ ಮೇಲೆ ಹಲ್ಲೆ ಮಾಡಿ ನಡುರಸ್ತೆಯಲ್ಲಿಯೇ ಕೊಲೆಗೆ ಯತ್ನಿಸಿದ್ದಾರೆ. ನಂತರ ನಾದಿನಿಯ ಕಾರಿನ ಮೇಲೂ ದಾಳಿ ಮಾಡಿ ಗಾಜನ್ನು ಒಡೆದು ಹಾಕಿದ್ದಾರೆ. ಸದ್ಯ ಹಲ್ಲೆಗೊಳಗಾದ ಸವಿತಾರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ; 7 ಯುವತಿಯರ ರಕ್ಷಣೆ

ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದ ಕಿರಾತಕ: ಮತ್ತೊಂದೆಡೆ, ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಮಾರೇಶ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾರೇಶ್​ನನ್ನು ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ವಿಜಯ್ ಕರೆಸಿಕೊಂಡಿದ್ದ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮಾರೇಶ್​ನ ಕತ್ತಿಗೆ ಚಾಕುವಿನಿಂದ ವಿಜಯ್ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ಹಲ್ಲೆಯಿಂದ ಅಸ್ವಸ್ಥನಾಗಿ ಕೆಳಗೆ ಬಿದ್ದ ಮಾರೇಶ್​ನ ಕತ್ತಿನಿಂದ ವಿಜಯ್ ರಕ್ತ ಕುಡಿದಿದ್ದಾನೆ. ಇದನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.