ETV Bharat / state

ಆಸ್ಪತ್ರೆ ಬಿಲ್​ ದುಪ್ಪಟ್ಟು ಮಾಡಿದ ಸಿಬ್ಬಂದಿ: ವೈದ್ಯರಿಗೆ ಎಚ್ಚರಿಕೆ ನೀಡಿದ ಡಿಹೆಚ್​ಒ - Double Rate rised in Hassan hospital

ಹಾಸನ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಸೂಕ್ತ ಚಿಕಿತ್ಸೆ ನೀಡದೇ, ಚಿಕಿತ್ಸಾ ಮೌಲ್ಯವನ್ನು ದುಪ್ಪಟ್ಟು ಮಾಡಿ ಕುಟುಂಬವೊಂದನ್ನು ಸಂಕಷ್ಟಕ್ಕೆ ದೂಡಿದ ಘಟನೆ ನಡೆದಿದೆ.

ವೈದ್ಯರಿಗೆ ಎಚ್ಚರಿಕೆ ನೀಡಿದ ಡಿಹೆಚ್​ಒ
ವೈದ್ಯರಿಗೆ ಎಚ್ಚರಿಕೆ ನೀಡಿದ ಡಿಹೆಚ್​ಒ
author img

By

Published : Jul 13, 2020, 8:28 AM IST

ಹಾಸನ: ಅನಾರೋಗ್ಯ ಪೀಡಿತನನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬವೊಂದು ಆಸ್ಪತ್ರೆ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಸಿದ್ಧಣ್ಣಯ್ಯ ಪ್ರೌಢಶಾಲೆಯ ಶಿಕ್ಷಕ ರಮೇಶ್ ಎಂಬುವವರು ಕಳೆದ ತಿಂಗಳು ಅನಾರೋಗ್ಯಕ್ಕೆ ತುತ್ತಾಗಿ, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಲ್ಲಿನ ಸಿಬ್ಬಂದಿ ಸೂಕ್ತ ಚಿಕಿತ್ಸೆಯನ್ನೂ ನೀಡದೆ, ಚಿಕಿತ್ಸೆಯ ಮೌಲ್ಯವನ್ನು ದುಪ್ಪಟ್ಟು ಮಾಡಿದ್ದಾರೆ. ಇನ್ನು ರಮೇಶ್​ ಕುಟುಂಬ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿದ್ದು, ಮಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಕೆಲಸದ ಸಲುವಾಗಿ ಹೈದರಾಬಾದ್​ಗೆ ತೆರಳಿದ್ದ ಮಗಳು ಕೊರೊನಾ ಹಿನ್ನೆಲೆಯಲ್ಲಿ ಹಿಂತಿರುಗಿ ಬಂದಿದ್ದಾರೆ.

ವೈದ್ಯರಿಗೆ ಎಚ್ಚರಿಕೆ ನೀಡಿದ ಡಿಹೆಚ್​ಒ

ಚಿಕಿತ್ಸೆಗಾಗಿ ಈಗಾಗಲೇ ಇದ್ದ ಅಲ್ಪಸ್ವಲ್ಪ ಜಮೀನು ಮಾರಿ, ಕೂಡಿಟ್ಟ ಹಣವನ್ನು ಸೇರಿಸಿ 10ಲಕ್ಷಕ್ಕೂ ಹೆಚ್ಚು ಹಣವನ್ನು ಪಾವತಿ ಮಾಡಿದ್ದಾರೆ. ಆದರೆ, ಮತ್ತೆ ಈಗ ಏಕಾಏಕಿ ಎರಡೂವರೆ ಲಕ್ಷ ರೂ. ಕಟ್ಟಲೇಬೇಕು ಎಂದು ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿಕ್ಕುಕಾಣದೇ ಕಂಗಾಲಾಗಿ ಪ್ರತಿಭಟನೆ ಮಾಡುವ ಮೂಲಕ ನ್ಯಾಯಕ್ಕಾಗಿ ಪಟ್ಟುಹಿಡಿದಿದ್ದಾರೆ. ಪ್ರತಿಭಟನೆ ಮಾಡಲು ಮುಂದಾದ ಈ ಕುಟುಂಬದ ವಿರುದ್ಧ ವೈದ್ಯರು ಮತ್ತು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಮಾಡಿದರೂ ಅಷ್ಟೇ, ಹಣ ಪಾವತಿ ಮಾಡದೇ ತಂದೆಯನ್ನು ಡಿಸ್ಚಾರ್ಜ್​ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಮಾತಿನ ಚಕಮಕಿ ನಡೆಸಿದ್ದಾರೆ.

ಸೋಷಿಯಲ್​ ಮೀಡಿಯಾ ಮೂಲಕ ಸಿಎಂ ಗಮನಕ್ಕೆ ತಂದ ಪುತ್ರಿ

ಘಟನೆ ಉದ್ರೇಕಗೊಳ್ಳುತ್ತಿದ್ದಂತೆ, ರಮೇಶ್ ಪುತ್ರಿ ರಶ್ಮಿ ಸಾಮಾಜಿಕ ಜಾಲತಾಣಗಳ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಸಾಮಾಜಿಕ ಜಾಲತಾಣಗಳ ಅಕೌಂಟ್​​​​ಗೆ ಖಾಸಗಿ ಆಸ್ಪತ್ರೆಯ ಅಕ್ರಮಗಳ ಬಗ್ಗೆ ಸಾಕ್ಷಾಧಾರಗಳನ್ನು ಅಪ್ಲೋಡ್​​​ ಮಾಡಿ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ಅಂತೂ ಸ್ಥಳಕ್ಕೆ ಬಂದ ಡಿಎಚ್​​ಒ

ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸ್ಥಳಕ್ಕೆ ಹಾಸನದ ಡಿಎಚ್ಒ ಕೆ.ಸತೀಶ್ ಆಗಮಿಸಿ ಕುಟುಂಬದ ಮನವಿಯನ್ನು ಸ್ವೀಕರಿಸಿ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಚಾಟಿ ಬೀಸಿದ್ದಾರೆ.

ಹಾಸನ: ಅನಾರೋಗ್ಯ ಪೀಡಿತನನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬವೊಂದು ಆಸ್ಪತ್ರೆ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಸಿದ್ಧಣ್ಣಯ್ಯ ಪ್ರೌಢಶಾಲೆಯ ಶಿಕ್ಷಕ ರಮೇಶ್ ಎಂಬುವವರು ಕಳೆದ ತಿಂಗಳು ಅನಾರೋಗ್ಯಕ್ಕೆ ತುತ್ತಾಗಿ, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಲ್ಲಿನ ಸಿಬ್ಬಂದಿ ಸೂಕ್ತ ಚಿಕಿತ್ಸೆಯನ್ನೂ ನೀಡದೆ, ಚಿಕಿತ್ಸೆಯ ಮೌಲ್ಯವನ್ನು ದುಪ್ಪಟ್ಟು ಮಾಡಿದ್ದಾರೆ. ಇನ್ನು ರಮೇಶ್​ ಕುಟುಂಬ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿದ್ದು, ಮಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಕೆಲಸದ ಸಲುವಾಗಿ ಹೈದರಾಬಾದ್​ಗೆ ತೆರಳಿದ್ದ ಮಗಳು ಕೊರೊನಾ ಹಿನ್ನೆಲೆಯಲ್ಲಿ ಹಿಂತಿರುಗಿ ಬಂದಿದ್ದಾರೆ.

ವೈದ್ಯರಿಗೆ ಎಚ್ಚರಿಕೆ ನೀಡಿದ ಡಿಹೆಚ್​ಒ

ಚಿಕಿತ್ಸೆಗಾಗಿ ಈಗಾಗಲೇ ಇದ್ದ ಅಲ್ಪಸ್ವಲ್ಪ ಜಮೀನು ಮಾರಿ, ಕೂಡಿಟ್ಟ ಹಣವನ್ನು ಸೇರಿಸಿ 10ಲಕ್ಷಕ್ಕೂ ಹೆಚ್ಚು ಹಣವನ್ನು ಪಾವತಿ ಮಾಡಿದ್ದಾರೆ. ಆದರೆ, ಮತ್ತೆ ಈಗ ಏಕಾಏಕಿ ಎರಡೂವರೆ ಲಕ್ಷ ರೂ. ಕಟ್ಟಲೇಬೇಕು ಎಂದು ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿಕ್ಕುಕಾಣದೇ ಕಂಗಾಲಾಗಿ ಪ್ರತಿಭಟನೆ ಮಾಡುವ ಮೂಲಕ ನ್ಯಾಯಕ್ಕಾಗಿ ಪಟ್ಟುಹಿಡಿದಿದ್ದಾರೆ. ಪ್ರತಿಭಟನೆ ಮಾಡಲು ಮುಂದಾದ ಈ ಕುಟುಂಬದ ವಿರುದ್ಧ ವೈದ್ಯರು ಮತ್ತು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಮಾಡಿದರೂ ಅಷ್ಟೇ, ಹಣ ಪಾವತಿ ಮಾಡದೇ ತಂದೆಯನ್ನು ಡಿಸ್ಚಾರ್ಜ್​ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಮಾತಿನ ಚಕಮಕಿ ನಡೆಸಿದ್ದಾರೆ.

ಸೋಷಿಯಲ್​ ಮೀಡಿಯಾ ಮೂಲಕ ಸಿಎಂ ಗಮನಕ್ಕೆ ತಂದ ಪುತ್ರಿ

ಘಟನೆ ಉದ್ರೇಕಗೊಳ್ಳುತ್ತಿದ್ದಂತೆ, ರಮೇಶ್ ಪುತ್ರಿ ರಶ್ಮಿ ಸಾಮಾಜಿಕ ಜಾಲತಾಣಗಳ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಸಾಮಾಜಿಕ ಜಾಲತಾಣಗಳ ಅಕೌಂಟ್​​​​ಗೆ ಖಾಸಗಿ ಆಸ್ಪತ್ರೆಯ ಅಕ್ರಮಗಳ ಬಗ್ಗೆ ಸಾಕ್ಷಾಧಾರಗಳನ್ನು ಅಪ್ಲೋಡ್​​​ ಮಾಡಿ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ಅಂತೂ ಸ್ಥಳಕ್ಕೆ ಬಂದ ಡಿಎಚ್​​ಒ

ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸ್ಥಳಕ್ಕೆ ಹಾಸನದ ಡಿಎಚ್ಒ ಕೆ.ಸತೀಶ್ ಆಗಮಿಸಿ ಕುಟುಂಬದ ಮನವಿಯನ್ನು ಸ್ವೀಕರಿಸಿ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಚಾಟಿ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.