ETV Bharat / state

ಈ ಬಾರಿ ಭಕ್ತರಿಗೆ ಹಾಸನಾಂಬೆ ದರ್ಶನ ಮಾಡಲು ಇಲ್ಲ ಅವಕಾಶ

ಪ್ರತಿವರ್ಷ ದೇವಿ ದರ್ಶನ ಪಡೆಯಲು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ಸಭೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು..

author img

By

Published : Oct 2, 2020, 4:44 PM IST

Updated : Oct 2, 2020, 6:07 PM IST

due-to-corona-pandemic-devotees-will-not-allowed-for-hasanamba-temple
ಈ ಬಾರಿ ಭಕ್ತರಿಗೆ ಹಾಸನಾಂಬೆ ದರ್ಶನ ಮಾಡಲು ಇಲ್ಲ ಅವಕಾಶ

ಹಾಸನ : ಕೋವಿಡ್ ಇರುವುದರಿಂದ ಈ ಬಾರಿ‌ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 5 ರಿಂದ 17ರವರೆಗೆ ತೆರೆಯಲಿದೆ. ಕೊರೊನಾ ಹಿನ್ನೆಲೆ ಪ್ರಾಥಮಿಕ ಸಭೆ‌ ನಡೆಸಿ ದರ್ಶನದ ಬಗ್ಗೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ಚರ್ಚಿಸಲಾಗಿದೆ‌. ಹಾಸನದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆ ಜನ ಸೇರುವುದನ್ನು ನಿಷೇಧಿಸಿರುವುದರಿಂದ ಜನಜಂಗುಳಿ ಆಗದಂತೆ ಆಚರಿಸುವುದು ಕಷ್ಟಸಾಧ್ಯ. ವಿಧಿವಿಧಾನಗಳ ಪ್ರಕಾರ ಈ ಬಾರಿ ಮೊದಲ ಹಾಗೂ ಕೊನೆಯ ದಿನ‌ ಮಾತ್ರ ಸರಳ‌ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಇನ್ನುಳಿದ ದಿನಗಳಲ್ಲಿ ನಡೆಯಬೇಕಾದ ಪೂಜಾ ವಿಧಿ ವಿಧಾನಗಳ ಪ್ರಕಾರ ಕಾರ್ಯಕ್ರಮ ನಡೆಯುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್ ಗಿರೀಶ್

ಹಾಸನಾಂಬೆ ಉತ್ಸವ ಈ ಬಾರಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಮೀಸಲಾಗಲಿದೆ. ಪ್ರತಿವರ್ಷ ದೇವಿ ದರ್ಶನ ಪಡೆಯಲು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ಸಭೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಭಕ್ತರಿಗೆ ಹಾಸನಾಂಬೆ ನೇರ ದರ್ಶನಕ್ಕೆ ಅವಕಾಶ ನೀಡದೇ ಆನ್​ಲೈನ್​ ಮೂಲಕ ದರ್ಶನಕ್ಕೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ತಯಾರಿ ಚಿಂತನೆ ನಡೆಸಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಪರದೆ ಮೂಲಕ ಲೈವ್ ಟೆಲಿಕಾಸ್ಟ್ ಮೂಲಕ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಮಾಡಲು ಯೋಚಿಸಲಾಗುತ್ತಿದೆ ಎಂದು ಹೇಳಿದರು.

ಹಾಸನ : ಕೋವಿಡ್ ಇರುವುದರಿಂದ ಈ ಬಾರಿ‌ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 5 ರಿಂದ 17ರವರೆಗೆ ತೆರೆಯಲಿದೆ. ಕೊರೊನಾ ಹಿನ್ನೆಲೆ ಪ್ರಾಥಮಿಕ ಸಭೆ‌ ನಡೆಸಿ ದರ್ಶನದ ಬಗ್ಗೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ಚರ್ಚಿಸಲಾಗಿದೆ‌. ಹಾಸನದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆ ಜನ ಸೇರುವುದನ್ನು ನಿಷೇಧಿಸಿರುವುದರಿಂದ ಜನಜಂಗುಳಿ ಆಗದಂತೆ ಆಚರಿಸುವುದು ಕಷ್ಟಸಾಧ್ಯ. ವಿಧಿವಿಧಾನಗಳ ಪ್ರಕಾರ ಈ ಬಾರಿ ಮೊದಲ ಹಾಗೂ ಕೊನೆಯ ದಿನ‌ ಮಾತ್ರ ಸರಳ‌ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಇನ್ನುಳಿದ ದಿನಗಳಲ್ಲಿ ನಡೆಯಬೇಕಾದ ಪೂಜಾ ವಿಧಿ ವಿಧಾನಗಳ ಪ್ರಕಾರ ಕಾರ್ಯಕ್ರಮ ನಡೆಯುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್ ಗಿರೀಶ್

ಹಾಸನಾಂಬೆ ಉತ್ಸವ ಈ ಬಾರಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಮೀಸಲಾಗಲಿದೆ. ಪ್ರತಿವರ್ಷ ದೇವಿ ದರ್ಶನ ಪಡೆಯಲು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ಸಭೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಭಕ್ತರಿಗೆ ಹಾಸನಾಂಬೆ ನೇರ ದರ್ಶನಕ್ಕೆ ಅವಕಾಶ ನೀಡದೇ ಆನ್​ಲೈನ್​ ಮೂಲಕ ದರ್ಶನಕ್ಕೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ತಯಾರಿ ಚಿಂತನೆ ನಡೆಸಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಪರದೆ ಮೂಲಕ ಲೈವ್ ಟೆಲಿಕಾಸ್ಟ್ ಮೂಲಕ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಮಾಡಲು ಯೋಚಿಸಲಾಗುತ್ತಿದೆ ಎಂದು ಹೇಳಿದರು.

Last Updated : Oct 2, 2020, 6:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.