ETV Bharat / state

ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್​​ - ಹಾಸನ ಜಿಲ್ಲೆ ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್

ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್​ ಅವರನ್ನು ನೇಮಕ ಮಾಡಲಾಗಿದೆ. ವೃತ್ತಿಯಿಂದ ಗುತ್ತಿಗೆದಾರರಾಗಿರುವ ಸುರೇಶ್​ ಹವಲು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದಾರೆ.

bjp president hullahalli suresh
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್
author img

By

Published : Jan 13, 2020, 9:07 AM IST

ಹಾಸನ: ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್ ಅವರನ್ನು ನೇಮಕ ಮಾಡಿದ್ದು, ಭಾನುವಾರ ಅಧಿಕೃತವಾಗಿ ಘೋಷಣೆಯಾಗಿದೆ.

bjp president hullahalli suresh
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್

ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೇಲೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್‌, ಹಾಸನ ನಗರಸಭೆ ಮಾಜಿ ಸದಸ್ಯ ಹೆಚ್‌.ಎಂ.ಸುರೇಶ್‌ ಕುಮಾರ್‌, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ಎಚ್.ರೇಣುಕುಮಾರ್‌, ಅರಸೀಕೆರೆಯ ಜಿವಿಟಿ ಬಸವರಾಜ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿರುವ ಕಾರಣ ಹುಲ್ಲಳ್ಳಿ ಸುರೇಶ್‌ ಹಾಗೂ ಸುರೇಶ್‌ ಕುಮಾರ್‌ ನಡುವೆ ಪೈಪೋಟಿ ಇತ್ತು. ಒಕ್ಕಲಿಗ ಸಮುದಾಯದ ಹುಲ್ಲಳ್ಳಿ ಸುರೇಶ್‌, ವೃತ್ತಿಯಿಂದ ಗುತ್ತಿಗೆದಾರರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. 2008ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ ಬೇಲೂರು ವಿಧಾನಸಭಾ ಕ್ಷೇತ್ರದತ್ತ ಗಮನಹರಿಸಿ, ಪಕ್ಷ ಸಂಘಟನೆಗೆ ಒತ್ತು ನೀಡಿದರು. 2018ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 45 ಸಾವಿರ ಮತ ಗಳಿಸಿ ಮತ್ತೊಮ್ಮೆ ಸೋತರು. ಆರ್ಥಿಕವಾಗಿ ಪ್ರಬಲವಾಗಿರುವ ಅವರು, ರಾಜ್ಯದ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.

ಹಾಸನ: ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್ ಅವರನ್ನು ನೇಮಕ ಮಾಡಿದ್ದು, ಭಾನುವಾರ ಅಧಿಕೃತವಾಗಿ ಘೋಷಣೆಯಾಗಿದೆ.

bjp president hullahalli suresh
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್

ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೇಲೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್‌, ಹಾಸನ ನಗರಸಭೆ ಮಾಜಿ ಸದಸ್ಯ ಹೆಚ್‌.ಎಂ.ಸುರೇಶ್‌ ಕುಮಾರ್‌, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ಎಚ್.ರೇಣುಕುಮಾರ್‌, ಅರಸೀಕೆರೆಯ ಜಿವಿಟಿ ಬಸವರಾಜ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿರುವ ಕಾರಣ ಹುಲ್ಲಳ್ಳಿ ಸುರೇಶ್‌ ಹಾಗೂ ಸುರೇಶ್‌ ಕುಮಾರ್‌ ನಡುವೆ ಪೈಪೋಟಿ ಇತ್ತು. ಒಕ್ಕಲಿಗ ಸಮುದಾಯದ ಹುಲ್ಲಳ್ಳಿ ಸುರೇಶ್‌, ವೃತ್ತಿಯಿಂದ ಗುತ್ತಿಗೆದಾರರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. 2008ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ ಬೇಲೂರು ವಿಧಾನಸಭಾ ಕ್ಷೇತ್ರದತ್ತ ಗಮನಹರಿಸಿ, ಪಕ್ಷ ಸಂಘಟನೆಗೆ ಒತ್ತು ನೀಡಿದರು. 2018ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 45 ಸಾವಿರ ಮತ ಗಳಿಸಿ ಮತ್ತೊಮ್ಮೆ ಸೋತರು. ಆರ್ಥಿಕವಾಗಿ ಪ್ರಬಲವಾಗಿರುವ ಅವರು, ರಾಜ್ಯದ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.

Intro:ಹಾಸನ: ಹಾಸನ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಹುಲ್ಲಹಳ್ಳಿ ಸುರೇಶ್ ಆಯ್ಕೆಯಾಗಿದ್ದು ಇದು ಅಧಿಕೃತವಾಗಿ ಘೋಷಣೆಯಾಗಿದೆ.

ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೇಲೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್‌, ಹಾಸನ ನಗರಸಭೆ ಮಾಜಿ ಸದಸ್ಯ ಎಚ್‌.ಎಂ.ಸುರೇಶ್‌ ಕುಮಾರ್‌, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ಎಚ್.ರೇಣುಕುಮಾರ್‌, ಅರಸೀಕೆರೆಯ ಜಿವಿಟಿ ಬಸವರಾಜ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಪಕ್ಷ ಸಂಘಟನೆ ಕಾರ್ಯ ಚುರುಕುಗೊಳ್ಳುತ್ತಿರುವಂತೆ ಆಕಾಂಕ್ಷಿಗಳ ಒತ್ತಡ ನಡುವೆ ನಾಲ್ವರ ಹೆಸರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಿ ರಾಜ್ಯ ಸಮಿತಿಗೆ ಕಳುಹಿಸಲಾಗಿತ್ತು. ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿರುವ ಕಾರಣ ಹುಲ್ಲಳ್ಳಿ ಸುರೇಶ್‌ ಹಾಗೂ ಸುರೇಶ್‌ ಕುಮಾರ್‌ ನಡುವೆ ಪೈಪೋಟಿ ಇತ್ತು. ಮನೆ ಡಿವಿ ಸದಾನಂದಗೌಡ ಬಂದ ಬಳಿಕ ಮತ್ತಷ್ಟು ರಾಜಕೀಯ ಚುರುಕುಗೊಂಡಿತ್ತು. ಎಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಂಜೆ ಅಂತಿಮವಾಗಿ ಬೇಲೂರಿನ ಪರಾಜಿತ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್ ಅವರನ್ನು ಆಯ್ಕೆ ಮಾಡಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಒಕ್ಕಲಿಗ ಸಮುದಾಯದ ಹುಲ್ಲಳ್ಳಿ ಸುರೇಶ್‌, ವೃತ್ತಿಯಿಂದ ಗುತ್ತಿಗೆದಾರರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. 2008ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ ಬೇಲೂರು ವಿಧಾನಸಭಾ ಕ್ಷೇತ್ರದತ್ತ ಗಮನಹರಿಸಿ, ಪಕ್ಷ ಸಂಘಟನೆಗೆ ಒತ್ತು ನೀಡಿದರು. 2018ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 45 ಸಾವಿರ ಮತಗಳಿಸಿ ಮತ್ತೊಮ್ಮೆ ಸೋತರು. ಆರ್ಥಿಕವಾಗಿ ಪ್ರಬಲವಾಗಿರುವ ಅವರು, ರಾಜ್ಯದ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.



Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.