ETV Bharat / state

ವಿದ್ಯುತ್ ಶಾಕ್​ನಿಂದ ಪಾರಾಗುವ ಸಲುವಾಗಿ ಮರ ಕೆಡವಲು ವಿಫಲ ಯತ್ನ ಮಾಡಿದ ಗಜರಾಜ: ವಿಡಿಯೋ

author img

By

Published : Jan 9, 2020, 8:55 PM IST

ಕಾಫಿ ತೋಟಕ್ಕೆ ಬಂದಿದ್ದ ಆನೆಯೊಂದು ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಪಕ್ಕದಲ್ಲಿದ್ದ ಮರವೊಂದನ್ನ ಸೋಲಾರ್ ತಂತಿಯ ಮೇಲೆ ಹಾಕಿ, ಅದರ ಮೇಲಿಂದ ಹತ್ತಿ ಹೊರಗೆ ಹೋಗಲು ಪ್ರಯತ್ನ ಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಗರವಳ್ಳಿ ಗ್ರಾಮದ ಕಾಫಿತೋಟದಲ್ಲಿ ಕಂಡುಬಂದಿದೆ.

Elephant try to to dismantle the tree in hassan
ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಆನೆ ಪರದಾಟ

ಸಕಲೇಶಪುರ: ಕಾಫಿ ತೋಟಕ್ಕೆ ಬಂದಿದ್ದ ಆನೆಯೊಂದು ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಪಕ್ಕದಲ್ಲಿದ್ದ ಮರವೊಂದನ್ನ ಸೋಲಾರ್ ತಂತಿಯ ಮೇಲೆ ಹಾಕಿ, ಅದರ ಮೇಲಿಂದ ಹತ್ತಿ ಹೊರಗೆ ಹೋಗಲು ಪ್ರಯತ್ನ ಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಗರವಳ್ಳಿ ಗ್ರಾಮದ ಕಾಫಿತೋಟದಲ್ಲಿ ಕಂಡುಬಂದಿದೆ.

ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಆನೆ ಪರದಾಟ

ಬುದ್ದಿವಂತ ಪ್ರಾಣಿಗಳಲ್ಲಿ ಆನೆಯೂ ಕೂಡ ಒಂದು. ತನ್ನ ಸಂಚಾರಕ್ಕೆ ಅಡ್ಡಿಯಾಗಿದ್ದ ಸೋಲಾರ್ ವಿದ್ಯುತ್ ಬೇಲಿಯನ್ನು ದಾಟಲು ಮರವನ್ನು ಉರುಳಿ, ವಿಫಲ ಯತ್ನ ನಡೆಸಿದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಗ್ರಾಮದ ಸಂತೋಷ್ ಎಂಬುವರ ಕಾಫಿ ತೋಟಕ್ಕೆ ನುಗ್ಗಿದ ಆನೆ, ಅಲ್ಲಿಂದ ಮುಂದೆ ಹೊರಟಿದೆ. ಆದರೆ ತೋಟದಿಂದ ಹೊರ ಬರಲು ಸೋಲಾರ್ ವಿದ್ಯುತ್ ಬೇಲಿ ಅಡ್ಡಿಯಾಗಿತ್ತು. ಕಾಡಾನೆ ಬೇಲಿ ದಾಟಲು, ವಿದ್ಯುತ್ ಬೇಲಿಯ ಸಮೀಪವೇ ಇದ್ದ ಮರವನ್ನು ಉರುಳಿಸಲು ಪ್ರಯತ್ನಿಸಿದೆ. ಈ ಮರಕ್ಕೆ ವಿದ್ಯುತ್ ಪ್ರವಹಿಸಿದ್ದರಿಂದ ಮರ ಬೀಳಿಸುವ ವಿಫಲ ಪ್ರಯತ್ನ ಬಿಟ್ಟು, ತೋಟದ ಮತ್ತೊಂದೆಡೆ ಇದ್ದ ಗೇಟನ್ನು ದ್ವಂಸಗೊಳಿಸಿ ಹೊರ ಬಂದಿದೆ. ಆನೆ ಮರ ಉರುಳಿಸಲು ಯತ್ನಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಕಲೇಶಪುರ: ಕಾಫಿ ತೋಟಕ್ಕೆ ಬಂದಿದ್ದ ಆನೆಯೊಂದು ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಪಕ್ಕದಲ್ಲಿದ್ದ ಮರವೊಂದನ್ನ ಸೋಲಾರ್ ತಂತಿಯ ಮೇಲೆ ಹಾಕಿ, ಅದರ ಮೇಲಿಂದ ಹತ್ತಿ ಹೊರಗೆ ಹೋಗಲು ಪ್ರಯತ್ನ ಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಗರವಳ್ಳಿ ಗ್ರಾಮದ ಕಾಫಿತೋಟದಲ್ಲಿ ಕಂಡುಬಂದಿದೆ.

ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಆನೆ ಪರದಾಟ

ಬುದ್ದಿವಂತ ಪ್ರಾಣಿಗಳಲ್ಲಿ ಆನೆಯೂ ಕೂಡ ಒಂದು. ತನ್ನ ಸಂಚಾರಕ್ಕೆ ಅಡ್ಡಿಯಾಗಿದ್ದ ಸೋಲಾರ್ ವಿದ್ಯುತ್ ಬೇಲಿಯನ್ನು ದಾಟಲು ಮರವನ್ನು ಉರುಳಿ, ವಿಫಲ ಯತ್ನ ನಡೆಸಿದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಗ್ರಾಮದ ಸಂತೋಷ್ ಎಂಬುವರ ಕಾಫಿ ತೋಟಕ್ಕೆ ನುಗ್ಗಿದ ಆನೆ, ಅಲ್ಲಿಂದ ಮುಂದೆ ಹೊರಟಿದೆ. ಆದರೆ ತೋಟದಿಂದ ಹೊರ ಬರಲು ಸೋಲಾರ್ ವಿದ್ಯುತ್ ಬೇಲಿ ಅಡ್ಡಿಯಾಗಿತ್ತು. ಕಾಡಾನೆ ಬೇಲಿ ದಾಟಲು, ವಿದ್ಯುತ್ ಬೇಲಿಯ ಸಮೀಪವೇ ಇದ್ದ ಮರವನ್ನು ಉರುಳಿಸಲು ಪ್ರಯತ್ನಿಸಿದೆ. ಈ ಮರಕ್ಕೆ ವಿದ್ಯುತ್ ಪ್ರವಹಿಸಿದ್ದರಿಂದ ಮರ ಬೀಳಿಸುವ ವಿಫಲ ಪ್ರಯತ್ನ ಬಿಟ್ಟು, ತೋಟದ ಮತ್ತೊಂದೆಡೆ ಇದ್ದ ಗೇಟನ್ನು ದ್ವಂಸಗೊಳಿಸಿ ಹೊರ ಬಂದಿದೆ. ಆನೆ ಮರ ಉರುಳಿಸಲು ಯತ್ನಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Intro:ಸಕಲೇಶಪುರ: ಕಾಫಿ ತೋಟಕ್ಕೆ ಬಂದಿದ್ದ ಆನೆಯೊಂದು ಸೋಲಾರ್ ವಿದ್ಯುತ್ ತಂತಿಯಿಂದ ರಕ್ಷಿಸಿಕೊಳ್ಳಲು ಪಕ್ಕದಲ್ಲಿದ್ದ ಮರವೊಂದನ್ನ ಸೋಲಾರ್ ತಂತಿಯ ಮೇಲೆ ಹಾಕಿ ಅದ್ರ ಮೇಲಿಂದ ಹತ್ತಿ ಹೊರಕ್ಕೆ ಹೋಗಲು ಪ್ರಯತ್ನ ಪಟ್ಟಿರೋ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಆನೆ ಬುದ್ದಿವಂತ ಪ್ರಾಣಿಗಳಲ್ಲಿ ಒಂದು. ತನ್ನ ಸಂಚಾರಕ್ಕೆ ಅಡ್ಡಿಯಾಗಿದ್ದ ಸೋಲಾರ್ ವಿದ್ಯುತ್ ಬೇಲಿಯನ್ನು ದಾಟಲು ಮರವನ್ನು ಉರುಳಿಸಲು ವಿಫಲ ಯತ್ನ ನಡೆಸಿದ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೊಗರವಳ್ಳಿ ಗ್ರಾಮ ಕಾಫಿತೋಟದಲ್ಲಿ ಇಂತಹದೊಂದು ಘಟನೆ ನಡದಿದೆ.

ಗ್ರಾಮದ ಸಂತೋಷ್ ಎಂಬುವರ ಕಾಫಿ ತೋಟಕ್ಕೆ ನುಗ್ಗಿದ ಆನೆ, ಅಲ್ಲಿಂದ ಮುಂದೆ ಹೊರಟಿದೆ. ಆದರೆ ತೋಟದಿಂದ ಹೊರಬರಲು ಸೋಲಾರ್ ವಿದ್ಯುತ್ ಬೇಲಿ ಅಡ್ಡಿಯಾಗಿತ್ತು ಆಗ ಕಾಡಾನೆ ಬೇಲಿ ದಾಟಲು, ವಿದ್ಯುತ್ ಬೇಲಿಯ ಸಮೀಪವೇ ಇದ್ದ ಮರವನ್ನು ಉರುಳಿಸಲು ಪ್ರಯತ್ನಿಸಿತ್ತು. ಈ ಮರಕ್ಕೆ ವಿದ್ಯುತ್ ಪ್ರವಹಿಸಿದ್ದರಿಂದ ಮರ ಬೀಳಿಸುವ ತನ್ನ ಪ್ರಯತ್ನ ಕೈ ಬಿಟ್ಟು ತೋಟದ ಮತ್ತೊಂದೇಡೆ ಇದ್ದ ಗೇಟನ್ನು ದ್ವಂಸಗೊಳಿಸಿ ಹೊರ ಬಂದಿದೆ. ಆನೆ ಮರ ಉರುಳಿಸಲು ಯತ್ನಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.