ETV Bharat / state

ಆಹಾರೋತ್ಪಾದನೆ ಹೆಚ್ಚಿಸುವ ಹೊಣೆ ರೈತರ ಮೇಲಿದೆ: ಡಾ.ಜಯರಾಮಯ್ಯ ಪ್ರತಿಪಾದನೆ

author img

By

Published : Oct 3, 2019, 11:18 AM IST

ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರೋತ್ಪಾದನೆ ಹೆಚ್ಚಿಸುವ ಮಹತ್ವದ ಹೊಣೆ ರೈತರ ಮೇಲಿದೆ ಎಂದು ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ ಪ್ರತಿಪಾದಿಸಿದ್ದಾರೆ.

ರೈತ ದಸರಾ ಕಾರ್ಯಕ್ರಮ

ಹಾಸನ: ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರದ ಉತ್ಪದಾನೆ ಹೆಚ್ಚಿಸುವ ಮಹತ್ವದ ಹೊಣೆ ರೈತರ ಮೇಲಿದೆ ಎಂದು ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ ತಿಳಿಸಿದರು.

ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ

ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ರೈತ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಲಭ್ಯವಿರುವ ಕೃಷಿ ಭೂಮಿಯಲ್ಲೇ ಹೆಚ್ಚಿನ ಉತ್ಪಾದನೆ ಮಾಡುವುದು ಅನಿವಾರ್ಯವಾಗಲಿದೆ. ಪ್ರಸ್ತುತ 288 ಮಿಲಿಯನ್ ಟನ್ ಆಹಾರದ ಅಗತ್ಯವಿದ್ದು, ಇದು ಸದ್ಯದಲ್ಲೇ 325 ಮಿಲಿಯನ್ ಟನ್‌ಗೆ ಏರಿಕೆಯಾಗಲಿದೆ. ರೈತರು ಕೇವಲ ಒಂದೇ ಬೆಳೆಗೆ ಅಂಟಿಕೊಳ್ಳದೇ ಬೆಳೆ ಪರಿವರ್ತನೆಗೆ ಮುಂದಾಗಬೇಕು. ದ್ವಿದಳ ಹಾಗೂ ಸಿರಿಧಾನ್ಯಗಳ ಕೃಷಿ ಕೈಗೊಳ್ಳುವುದರಿಂದ ಭೂಮಿಯ ಫಲವತ್ತತೆ ಹೆಚ್ಚಲಿದೆ ಎಂದು ಡಾ.ಜಯರಾಮಯ್ಯ ತಿಳಿಸಿದರು .

ವಿವಿಧ ಬೇಸಾಯ ಸಂಬಂಧಿ ಇಲಾಖೆಗಳ ಸಹಯೋಗದಲ್ಲಿ ಕೃಷಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿಮಿತ್ತ ನಡೆದ ರೈತ ಕ್ರೀಡಾಕೂಟದಲ್ಲಿ ರೈತ ಕಬಡ್ಡಿ, ಹಗ್ಗ ಜಗ್ಗಾಟ. ಶ್ವಾನ ಪ್ರದರ್ಶನ ಕೂಡಾ ಏರ್ಪಡಿಸಲಾಗಿತ್ತು.

ಇನ್ನುಈ ಕಾರ್ಯಕ್ರಮದಲ್ಲಿ ಶಾಸಕ ಎ.ಟಿ.ರಾಮಸ್ವಾಮಿ, ತಾಲೂಕು ಪಂಚಾಯತ್​ ಅಧ್ಯಕ್ಷೆ ವೀಣಾ, ಜಿಲ್ಲಾ ಪಂಚಾಯತ್​ ಸದಸ್ಯೆ ರತ್ನಮ್ಮ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯತ್ ಇಒ ಎನ್.ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಕೆ.ಎಚ್.ರಮೇಶ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹಾಸನ: ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರದ ಉತ್ಪದಾನೆ ಹೆಚ್ಚಿಸುವ ಮಹತ್ವದ ಹೊಣೆ ರೈತರ ಮೇಲಿದೆ ಎಂದು ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ ತಿಳಿಸಿದರು.

ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ

ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ರೈತ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಲಭ್ಯವಿರುವ ಕೃಷಿ ಭೂಮಿಯಲ್ಲೇ ಹೆಚ್ಚಿನ ಉತ್ಪಾದನೆ ಮಾಡುವುದು ಅನಿವಾರ್ಯವಾಗಲಿದೆ. ಪ್ರಸ್ತುತ 288 ಮಿಲಿಯನ್ ಟನ್ ಆಹಾರದ ಅಗತ್ಯವಿದ್ದು, ಇದು ಸದ್ಯದಲ್ಲೇ 325 ಮಿಲಿಯನ್ ಟನ್‌ಗೆ ಏರಿಕೆಯಾಗಲಿದೆ. ರೈತರು ಕೇವಲ ಒಂದೇ ಬೆಳೆಗೆ ಅಂಟಿಕೊಳ್ಳದೇ ಬೆಳೆ ಪರಿವರ್ತನೆಗೆ ಮುಂದಾಗಬೇಕು. ದ್ವಿದಳ ಹಾಗೂ ಸಿರಿಧಾನ್ಯಗಳ ಕೃಷಿ ಕೈಗೊಳ್ಳುವುದರಿಂದ ಭೂಮಿಯ ಫಲವತ್ತತೆ ಹೆಚ್ಚಲಿದೆ ಎಂದು ಡಾ.ಜಯರಾಮಯ್ಯ ತಿಳಿಸಿದರು .

ವಿವಿಧ ಬೇಸಾಯ ಸಂಬಂಧಿ ಇಲಾಖೆಗಳ ಸಹಯೋಗದಲ್ಲಿ ಕೃಷಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿಮಿತ್ತ ನಡೆದ ರೈತ ಕ್ರೀಡಾಕೂಟದಲ್ಲಿ ರೈತ ಕಬಡ್ಡಿ, ಹಗ್ಗ ಜಗ್ಗಾಟ. ಶ್ವಾನ ಪ್ರದರ್ಶನ ಕೂಡಾ ಏರ್ಪಡಿಸಲಾಗಿತ್ತು.

ಇನ್ನುಈ ಕಾರ್ಯಕ್ರಮದಲ್ಲಿ ಶಾಸಕ ಎ.ಟಿ.ರಾಮಸ್ವಾಮಿ, ತಾಲೂಕು ಪಂಚಾಯತ್​ ಅಧ್ಯಕ್ಷೆ ವೀಣಾ, ಜಿಲ್ಲಾ ಪಂಚಾಯತ್​ ಸದಸ್ಯೆ ರತ್ನಮ್ಮ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯತ್ ಇಒ ಎನ್.ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಕೆ.ಎಚ್.ರಮೇಶ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Intro: ಹಾಸನ : ಎರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರದ ಉತ್ಪದಾನೆಯನ್ನು ಹೆಚ್ಚಿಸುವ ಮಹತ್ವದ ಹೊಣೆ ರೈತರು ಮೇಲಿದೆ ಎಂದು ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ ತಿಳಿಸಿದರು.
ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ರೈತ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿ, ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಲಭ್ಯವಿರುವ ಕೃಷಿ ಭೂಮಿಯಲ್ಲೆ ಹೆಚ್ಚಿನ ಉತ್ಪಾಧನೆ ಮಾಢುವುದು ಅನಿವಾರ್ಯವಾಗಲಿದೆ. ಪ್ರಸ್ತುತ ೨೮೮ ಮಿಲಿಯನ್ ಟನ್ ಆಹಾರದ ಅಗತ್ಯವಿದ್ದು ಇದು ಸದ್ಯದಲ್ಲೆ ೩೨೫ ಮಿಲಿಯನ್ ಟನ್‌ಗೆ ಏರಿಕೆಯಾಗಲಿದೆ, ಅತಿಯಾದ ರಸಾಯನಿಕಗಳು, ಕೀಟನಾಶಕಗಳ ಬಳಕೆಪರಿಣಾಮ ಭೂಮಿಒಯ ಆರೋಗ್ಯ ಹದಗೆಡುತ್ತಿದೆ. ಅಚಿತರ್ಜಲದ ಮಟ್ಟ ಕುಸಿಯುತ್ತಿದೆ, ಜಾಗತಿಕ ತಾಪಮಾನದ ಪರಿಣಾಮ ಬೆಳೆದ ಬೆಳೆಗಳು ರೋಗ ಮತ್ತು ಕೀಟಬಾಧೆಗೆ ತುತ್ತಾಗುತ್ತಿವೆ, ರೈತರು ಕೇವಲ ಒಂದೇ ಬೆಳೆಗೆ ಅಂಟಿಕೊಳ್ಳದೆ ಬೆಳೆಪರಿವರ್ತನೆಗೆ ಮುಂದಾಗಬೇಕು, ದ್ವಿದಳ ಹಾಗೂ ಸಿರಿಧಾನ್ಯಗಳ ಕೃಷಿ ಕೈಗೊಳ್ಳುವುದರಿಂದ ಭೂಮಿಯ ಫಲವತ್ತತೆ ಹೆಚ್ಚಲಿದೆ ಎಂದರು.

ಬೈಟ್-೧ : ಕಾರೆಕೆರೆ ಕೃಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಯರಾಮಯ್ಯ.
ವಿವಿಧ ಬೇಸಾಯ ಸಂಬಂಧಿ ಇಲಾಖೆಗಳ ಸಹಯೋಗದಲ್ಲಿ ಕೃಷಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ನಡೆದ ರೈತ ಕ್ರೀಡಾಕೂಟದಲ್ಲಿ ರೈತ ಕಬಡ್ಡಿ, ಹಗ್ಗ ಜಗ್ಗಾಟ. ಶ್ವಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಶಕ ಎ.ಟಿ.ರಾಮಸ್ವಾಮಿ, ತಾಪಂ ಅಧ್ಯಕ್ಷೆ ವೀಣಾ, ಜಿಪಂ ಸದಸ್ಯೆ ರತ್ನಮ್ಮ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಎನ್.ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಕೆ.ಎಚ್.ರಮೇಶ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2024 Ushodaya Enterprises Pvt. Ltd., All Rights Reserved.