ETV Bharat / state

ಜನಪದ ಸಂಸ್ಕೃತಿ ನಶಿಸಲು ಅವಕಾಶ ನೀಡಬಾರದು: ಎ.ಟಿ. ರಾಮಸ್ವಾಮಿ

author img

By

Published : Oct 15, 2019, 5:28 AM IST

ಹಾಸನದ ರಾಮನಾಥಪುರದ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಧುನಿಕತೆ ಭರಾಟೆಗೆ ಸಿಲುಕಿ ಮಾತೃ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.

ಗಿರಿಜನ ಉತ್ಸವ ಕಾರ್ಯಕ್ರಮ

ಹಾಸನ: ಆಧುನಿಕತೆಗೆ ಸಿಲುಕಿ ಜನಪದ ಸಂಸ್ಕೃತಿ ನಶಿಸಲು ಅವಕಾಶ ನೀಡಬಾರದು ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.

ನಗರದ ರಾಮನಾಥಪುರದ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನೇ ಕಳೆದುಕೊಂಡಂತೆ. ಜನಪದ ಸೊಗಡಿನಲ್ಲೇ ಭಾರತೀಯ ಮೂಲ ಸಂಸ್ಕೃತಿ, ಪರಂಪರೆಯ ಸತ್ವ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಅವಕಾಶ ನೀಡದೇ ಎಲ್ಲರು ಉಳಿಸಿ ಪೋಷಿಸಬೇಕಿದೆ ಎಂದರು.

ಗಿರಿಜನ ಉತ್ಸವ ಕಾರ್ಯಕ್ರಮ

ಇದಕ್ಕೂ ಮುನ್ನ ಕಾವೇರಿ ನದಿ ದಂಡೆ ಮೇಲಿರುವ ಶ್ರೀ ರಾಮೇಶ್ವರದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿ ಭಾವಚಿತ್ರದೊಂದಿಗೆ ಶ್ರೀ ಸಂಜಯಕುಮಾರಾನಂದ ಸ್ವಾಮೀಜಿ ಅವರನ್ನು ಹೊತ್ತ ಭವ್ಯ ಬೆಳ್ಳಿ ರಥವು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿತು.

ಹಾಸನ: ಆಧುನಿಕತೆಗೆ ಸಿಲುಕಿ ಜನಪದ ಸಂಸ್ಕೃತಿ ನಶಿಸಲು ಅವಕಾಶ ನೀಡಬಾರದು ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.

ನಗರದ ರಾಮನಾಥಪುರದ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನೇ ಕಳೆದುಕೊಂಡಂತೆ. ಜನಪದ ಸೊಗಡಿನಲ್ಲೇ ಭಾರತೀಯ ಮೂಲ ಸಂಸ್ಕೃತಿ, ಪರಂಪರೆಯ ಸತ್ವ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಅವಕಾಶ ನೀಡದೇ ಎಲ್ಲರು ಉಳಿಸಿ ಪೋಷಿಸಬೇಕಿದೆ ಎಂದರು.

ಗಿರಿಜನ ಉತ್ಸವ ಕಾರ್ಯಕ್ರಮ

ಇದಕ್ಕೂ ಮುನ್ನ ಕಾವೇರಿ ನದಿ ದಂಡೆ ಮೇಲಿರುವ ಶ್ರೀ ರಾಮೇಶ್ವರದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿ ಭಾವಚಿತ್ರದೊಂದಿಗೆ ಶ್ರೀ ಸಂಜಯಕುಮಾರಾನಂದ ಸ್ವಾಮೀಜಿ ಅವರನ್ನು ಹೊತ್ತ ಭವ್ಯ ಬೆಳ್ಳಿ ರಥವು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿತು.

Intro:ಹಾಸನ : ಆಧುನಿಕತೆಗೆ ಸಿಲುಕಿ ಜನಪದ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.
ತಾಲೂಕಿನ ರಾಮನಾಥಪುರದ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನೇ ಕಳೆದುಕೊಂಡಂತೆ, ಜನಪದ ಸೊಗಡಿನಲ್ಲೇ ಭಾರತೀಯ ಮೂಲ ಸಂಸ್ಕೃತಿ, ಪರಂಪರೆಯ ಸತ್ವ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಅವಕಾಶ ನೀಡದೇಎಲ್ಲರೂ ಉಳಿಸಿ ಪೋಷಿಸಬೇಕಿದೆ ಎಂದರು.

ಬೈಟ್-೧ : ಎ.ಟಿ. ರಾಮಸ್ವಾಮಿ, ಶಾಸಕ.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ತುಮಕೂರು ಶಿಡ್ಲಕೋಣದ ಶ್ರೀ ಸಂಜಯಕುಮಾರಾನಂದ ಸ್ವಾಮೀಜಿ ಆಶೀರ್ವಚನ ನೀಡಿದ್ರು. ಗ್ರಾಪಂ ಅಧ್ಯಕ್ಷ ಕಾಳೇಗೌಡ, ತಾಪಂ ಉಪಾಧ್ಯಕ್ಷ ಎಸ್.ಆರ್. ನಾಗರಾಜ್, ಸದಸ್ಯರಾದ ವೀರಾಜ್, ದೇವಿಕಾ, ತಹಸೀಲ್ದಾರ್ ಶಿವರಾಜ್, ಪಪಂ ಮುಖ್ಯಾಧಿಕಾರಿ ಸುರೇಶ್ ಬಾಬು, ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನಕಾವೇರಿ ನದಿ ದಂಡೆ ಮೇಲಿರುವ ಶ್ರೀ ರಾಮೇಶ್ವರದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿ ಭಾವಚಿತ್ರದೊಂದಿಗೆ ಶ್ರೀ ಸಂಜಯಕುಮಾರಾನಂದ ಸ್ವಾಮೀಜಿ ಅವರನ್ನು ಹೊತ್ತ ಭವ್ಯ ಬೆಳ್ಳಿ ರಥವು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿತು. ಡೊಳ್ಳುಕುಣಿತ, ವೀರಗಾಸೆ, ಗಾರುಡಿಗೊಂಬೆ, ನಾಸಿಕ್ ಡೋಲು, ಕೀಲು ಕುದುರೆ, ಚಿಟ್ಟಿಮೇಳ, ಪೂಜಾಕುಣಿತ ಮೆರವಣಿಗೆಗೆ ಮೆರಗು ನೀಡಿದವುBody:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2024 Ushodaya Enterprises Pvt. Ltd., All Rights Reserved.