ETV Bharat / state

ಆಡಿಯೋ ಪ್ರಕರಣ: ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ- ದೇವೇಗೌಡ ಪ್ರಶ್ನೆ

author img

By

Published : Nov 3, 2019, 5:56 PM IST

ರಾಜ್ಯದಲ್ಲಿನ ಸರ್ಕಾರ ರಚನೆಯಾಗಿರುವುದೇ ಕೆಟ್ಟ ನಡವಳಿಕೆಯಿಂದ, ಬಿಜೆಪಿ ನಡೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ದೇವೇಗೌಡ ಕಿಡಿಕಾರಿದ್ದಾರೆ. ಅಲ್ಲದೆ, ಆಡಿಯೋ ಪ್ರಕರಣ ಕುರಿತು ಪ್ರತಿಕ್ರಿಯಿಸಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಆಡಿಯೋ ಪ್ರಕರಣದ ಬಗ್ಗೆ ಹಾಸನದಲ್ಲಿ ದೇವೇಗೌಡ ಪ್ರತಿಕ್ರಿಯೆ

ಹಾಸನ: ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ 'ಕುದುರೆ ವ್ಯಾಪಾರ'ದಲ್ಲಿ ತೊಡಗಲು ಪ್ರಯತ್ನಿಸಿದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ. ಹಾಗೆಯೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಮೇಲೆಯೂ ಕ್ರಮ ಕೈಗೊಳ್ಳಬೇಕಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಈ ರೀತಿ ಉತ್ತರಾಖಂಡ್​ ಮಾಜಿ ಸಿಎಂ ವಿರುದ್ಧ ಕ್ರಮ ಜರುಗಿಸಿದೆ. ಹಾಗೆಯೇ ರಾಜ್ಯದಲ್ಲೂ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಲ್ಲ. ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಅಲ್ಲದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನ ಕಾದು ನೋಡೋಣ ಎಂದರು.

ಆಡಿಯೋ ಪ್ರಕರಣದ ಬಗ್ಗೆ ಹಾಸನದಲ್ಲಿ ದೇವೇಗೌಡ ಪ್ರತಿಕ್ರಿಯೆ

ಇನ್ನು, ರಾಜ್ಯದಲ್ಲಿನ ಸರ್ಕಾರ ರಚನೆಯಾಗಿರುವುದೇ ಕೆಟ್ಟ ನಡವಳಿಕೆಯಿಂದ, ಬಿಜೆಪಿ ನಡೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಅಡಿಯೋ ವಿರುದ್ಧ ಕಾಂಗ್ರೆಸ್​​ನವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ ಅವರಿಗೂ ದೂರು ನೀಡುವುದಾಗಿ ಹೇಳಿದ್ದಾರೆ ಎಂದರು.

ಆರ್​ಸಿಇಪಿ ಒಪ್ಪಂದ ವಿಚಾರದ ಬಗ್ಗೆ ಪ್ರಧಾನಿಗೆ ಸುದೀರ್ಘ ಪತ್ರ ಬರೆದಿದ್ದೇನೆ. ಸಿದ್ದರಾಮಯ್ಯ ಅವರೂ ಮಾತನಾಡಿದ್ದಾರೆ. ಅದರ ಬಗ್ಗೆ ನಾನು ನಾಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಮಾಡಿ ಎಲ್ಲಾ ವಿಚಾರಗಳ ಕುರಿತು ಮಾತನಾಡುವುದಾಗಿ ತಿಳಿಸಿದ್ರು.

ಹಾಸನ: ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ 'ಕುದುರೆ ವ್ಯಾಪಾರ'ದಲ್ಲಿ ತೊಡಗಲು ಪ್ರಯತ್ನಿಸಿದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ. ಹಾಗೆಯೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಮೇಲೆಯೂ ಕ್ರಮ ಕೈಗೊಳ್ಳಬೇಕಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಈ ರೀತಿ ಉತ್ತರಾಖಂಡ್​ ಮಾಜಿ ಸಿಎಂ ವಿರುದ್ಧ ಕ್ರಮ ಜರುಗಿಸಿದೆ. ಹಾಗೆಯೇ ರಾಜ್ಯದಲ್ಲೂ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಲ್ಲ. ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಅಲ್ಲದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನ ಕಾದು ನೋಡೋಣ ಎಂದರು.

ಆಡಿಯೋ ಪ್ರಕರಣದ ಬಗ್ಗೆ ಹಾಸನದಲ್ಲಿ ದೇವೇಗೌಡ ಪ್ರತಿಕ್ರಿಯೆ

ಇನ್ನು, ರಾಜ್ಯದಲ್ಲಿನ ಸರ್ಕಾರ ರಚನೆಯಾಗಿರುವುದೇ ಕೆಟ್ಟ ನಡವಳಿಕೆಯಿಂದ, ಬಿಜೆಪಿ ನಡೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಅಡಿಯೋ ವಿರುದ್ಧ ಕಾಂಗ್ರೆಸ್​​ನವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ ಅವರಿಗೂ ದೂರು ನೀಡುವುದಾಗಿ ಹೇಳಿದ್ದಾರೆ ಎಂದರು.

ಆರ್​ಸಿಇಪಿ ಒಪ್ಪಂದ ವಿಚಾರದ ಬಗ್ಗೆ ಪ್ರಧಾನಿಗೆ ಸುದೀರ್ಘ ಪತ್ರ ಬರೆದಿದ್ದೇನೆ. ಸಿದ್ದರಾಮಯ್ಯ ಅವರೂ ಮಾತನಾಡಿದ್ದಾರೆ. ಅದರ ಬಗ್ಗೆ ನಾನು ನಾಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಮಾಡಿ ಎಲ್ಲಾ ವಿಚಾರಗಳ ಕುರಿತು ಮಾತನಾಡುವುದಾಗಿ ತಿಳಿಸಿದ್ರು.

Intro:ಹಾಸನ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದೇ ಕೆಟ್ಟ
ನಡವಳಿಕೆಯಿಂದ ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಿಡಿಕಾರಿದರು. ಹಾಸನದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್
ತೀರ್ಪು ನೋಡಿ ಮುಂದಿನ ನಿರ್ಧಾರ ಮಾಡಲಾಗುವುದು ಎಂದರು.

ಸಿಎಂ ಬಿಎಸ್‌ವೈ ಅನರ್ಹ ಶಾಸಕರ ಕುರಿತಾದ ಅಡಿಯೋ ವಿರುದ್ಧ
ಕಾಂಗ್ರೆಸ್ ನವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ
ಅವರಿಗೂ ದೂರು ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ಈ ನಡೆ
ಪ್ರಜಾಪ್ರಭುತ್ವಕ್ಕೆ ಮಾರಕ ವಾದದ್ದು ಎಂದು ಕಿಡಿಕಾರಿದರು.

ಸಿಎಂ ಬಿಎಸ್‌ವೈ ಅಡಿಯೋದಲ್ಲಿ ಉಲ್ಲೇಖವಾಗಿರುವ ವಿಚಾರ, ಪ್ರಧಾನಿ
ನರೇಂದ್ರ ಮೋದಿ ಸೇರಿ ಎಲ್ಲರಿಗೂ ತಿಳಿದಿದೆ. ಕೇಂದ್ರ ಸರ್ಕಾರ
ಉತ್ತರಾಂಚಲ ದಲ್ಲಿ ಸಿಎಂ ಮೇಲೆ ಸಿಬಿಐ ಕೇಸ್ ದಾಖಲಿಸಿದ.ಅದೇ
ಮಾನದಂಡವನ್ನು ಯಡಿಯೂರಪ್ಪ ಅನ್ವಯ ಮಾಡಬೇಕು ಅಲ್ವಾ
ಎಂದು ಪ್ರಶ್ನಿಸಿದ ಅವರು ಒಬ್ಬೊಬ್ಬರಿಗೆ ಒಂದೊಂದು ನ್ಯಾಯವೇ? ಇಲ್ಲಿಏನು ಮಾಡುತ್ತಾರೋ ನೋಡೋಣ ಎಂದರು.

ಅನರ್ಹ ಶಾಸಕರ ಕುರಿತಾಗಿ ಬಿಜೆಪಿ ಕೆಲವು ಮುಖಂಡ ನಿಲುವನ್ನು
ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ
ಸಿಎಂ ಬಿಎಸ್‌ವೈ ಅಸಮಾಧಾನವನ್ನು ಹೊರಹಾಕಿದ್ದರು. ಅನರ್ಹ
ಶಾಪಕರ ಬಗ್ಗೆ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆ ಗಳಿಗೆ ವಿರೋಧ
ವ್ಯಕ್ತಪಡಿಸಿದ್ದರು, ಅಲ್ಲದೆ ಆಪರೇಷನ್ ಕಮಲ ಸಂದರ್ಭದಲ್ಲಿ ಅಮಿತ್
ಶಾ ಪಾತ್ರ ಕುರಿತಾಗಿ ಯೂ ಆಡಿಯೋದಲ್ಲಿ ಉಲ್ಲೇಖಗೊಂಡಿತ್ತು. ಈ
ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈಗಾಗಲೇ ವಿಡಿಯೋ ವಿರುದ್ಧ ಕಾಂಗ್ರೆಸ್ ರಾಜ್ಯಸವಾಲರಿಗೆ ದೂರು
ಸಲ್ಲಿಸಿದ್ದು ಸಿಎಂ ಬಿಎಸ್‌ವೈ ಹಾಗೂ ಕೇಂದ್ರ ಗೃಹ ಸಚಿವ ಅಮಿತ್
ಶಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸೋಮವಾರ ರಾಜ್ಯಾದ್ಯಂತ
ಪ್ರತಿಭಟನೆ ಗೋ ಕಾಂಗ್ರೆಸ್ ಕರೆ ನೀಡಿದೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.