ಹಾಸನ : ಹಗಲು, ರಾತ್ರಿ ಎನ್ನದೇ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಮತ್ತು ಅವರ ಕುಟುಂಬದವರ ಆರೋಗ್ಯದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಉಚಿತ ತಪಸಣಾ ಶಿಬಿರವನ್ನು ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು.
ಮದುಮೇಹ, ಕಿಡ್ನಿ, ರಕ್ತ ತಪಾಸಣೆ ಸೇರಿ ವಿವಿಧ ಬಗೆಯ ತಪಾಸಣೆಯನ್ನು 35 ಜನರಿಗೆ ಉಚಿತ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ಪೋಷ್ಟಿಕಾಂಶ ಭರಿತ ಆಹಾರ ಸೇವನೆ ಮಾಡುವ ಮೂಲಕ ರೋಗ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿಯರಾದ ಶೃತಿ, ಹರ್ಷಿತ, ಅರುಣಕುಮಾರ್ ಇದ್ದರು.