ETV Bharat / state

ಬಾಡೂಟಕ್ಕೆ ಕರೆಯಲಿಲ್ಲ ಎಂದು ಗಲಾಟೆ; ಹಲ್ಲೆಗೊಳಗಾದ ಯುವಕ ಸಾವು

author img

By

Published : Jan 19, 2022, 12:30 AM IST

ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಇದಕ್ಕೆ ತಮ್ಮನ್ನು ಕರೆದಿಲ್ಲ ಎಂದು ಗೊಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ. ಪರಿಣಾಮ ಆತ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ.

ಬಾಡೂಟಕ್ಕೆ ಕರೆಯಲಿಲ್ಲ ಎಂದು ಗಲಾಟೆ; ಹಲ್ಲೆಗೊಳಗಾದ ಯುವಕ ಸಾವು
ಬಾಡೂಟಕ್ಕೆ ಕರೆಯಲಿಲ್ಲ ಎಂದು ಗಲಾಟೆ; ಹಲ್ಲೆಗೊಳಗಾದ ಯುವಕ ಸಾವು

ಹಾಸನ: ಬಾಡೂಟಕ್ಕೆ ಕರೆಯದಿದ್ದಕ್ಕೆ ನಡೆದ ಜಗಳದಲ್ಲಿ ಮಾರಣಾಂತಿಮ ಹಲ್ಲೆಗೊಳಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಈ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಪುರಲೆಹಳ್ಳಿಯಲ್ಲಿ ನಡೆದಿದೆ.

ಶರತ್(28) ಎಂಬ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾದವ. ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್​ನ ಸಂಬಂಧಿಕರು ತಮ್ಮನ್ನ ಕರೆಯದೇ ಬಾಡೂಟ ಮಾಡಿದ್ದೀರಾ? ಎಂದು ಕ್ಯಾತೆ ಎತ್ತಿದ್ದಾರೆ. ಅಲ್ಲದೇ ಪುರಲೆಹಳ್ಳಿಯ ಧನಪಾಲ್, ಅರ್ಜುನ್, ನಟರಾಜ್, ಮಂಜುನಾಥ ಮತ್ತಿತರರು ಶರತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ವೇಳೆ ಶರತ್ ಜೊತೆ ರಾಕೇಶ್, ಯೋಗೇಶ್ ಎಂಬುವವರು ಗಾಯಗೊಂಡಿದ್ದರು.

ಗಂಭೀರ ಗಾಯಗೊಂಡಿದ್ದ ಶರತ್​​ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನದ ಬಳಿಕ ಚಿಕಿತ್ಸೆಗೆ ಸ್ಪಂದಿಸದ ಶರತ್ ಇಂದು ಮೃತಪಟ್ಟಿದ್ದಾನೆ.

ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್​ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಹಾಸನ: ಬಾಡೂಟಕ್ಕೆ ಕರೆಯದಿದ್ದಕ್ಕೆ ನಡೆದ ಜಗಳದಲ್ಲಿ ಮಾರಣಾಂತಿಮ ಹಲ್ಲೆಗೊಳಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಈ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಪುರಲೆಹಳ್ಳಿಯಲ್ಲಿ ನಡೆದಿದೆ.

ಶರತ್(28) ಎಂಬ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾದವ. ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್​ನ ಸಂಬಂಧಿಕರು ತಮ್ಮನ್ನ ಕರೆಯದೇ ಬಾಡೂಟ ಮಾಡಿದ್ದೀರಾ? ಎಂದು ಕ್ಯಾತೆ ಎತ್ತಿದ್ದಾರೆ. ಅಲ್ಲದೇ ಪುರಲೆಹಳ್ಳಿಯ ಧನಪಾಲ್, ಅರ್ಜುನ್, ನಟರಾಜ್, ಮಂಜುನಾಥ ಮತ್ತಿತರರು ಶರತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ವೇಳೆ ಶರತ್ ಜೊತೆ ರಾಕೇಶ್, ಯೋಗೇಶ್ ಎಂಬುವವರು ಗಾಯಗೊಂಡಿದ್ದರು.

ಗಂಭೀರ ಗಾಯಗೊಂಡಿದ್ದ ಶರತ್​​ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನದ ಬಳಿಕ ಚಿಕಿತ್ಸೆಗೆ ಸ್ಪಂದಿಸದ ಶರತ್ ಇಂದು ಮೃತಪಟ್ಟಿದ್ದಾನೆ.

ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್​ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.