ETV Bharat / state

ಇಂದು ಹಾಸನದಲ್ಲಿ 127 ಸೋಂಕಿತರು ಪತ್ತೆ: 9 ಸಾವು

author img

By

Published : Aug 7, 2020, 9:52 PM IST

ಹಾಸನದಲ್ಲಿ ಇಂದು 127 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 9 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ತಿಳಿಸಿದರು.

DHO Dr. satish
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಹಾಸನ: ಜಿಲ್ಲೆಯಲ್ಲಿ‌ ಇಂದು 127 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

DHO Dr. satish
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಜಿಲ್ಲೆಯ ಆಲೂರುನಲ್ಲಿ 2, ಬೇಲೂರು 12, ಹಾಸನ 65, ಅರಸೀಕೆರೆ 8, ಚನ್ನರಾಯಪಟ್ಟಣ 10, ಅರಕಲಗೂಡು 14, ಹೊಳೆನರಸೀಪುರ 11, ಸಕಲೇಶಪುರ 5 ಸೋಂಕು ಪತ್ತೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 3158ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 23 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದುವರೆಗೆ 1247 ಜನರು ಬಿಡುಗಡೆಯಾಗಿದ್ದಾರೆ. 1823 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 88 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಕಂಡು ಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ತಪಾಸಣೆಗೆ ಒಳಪಡಬೇಕು ಎಂದರು.

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭಗಳಿಗೆ ತೆರಳಬೇಡಿ, ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 100.
2. ಅರಕಲಗೂಡು 246.
3. ಅರಸೀಕೆರೆ 449.
4. ಬೆಲೂರು 191.
5. ಚನ್ನರಾಯಪಟ್ಟಣ 485.
6. ಹಾಸನ 1269.
7. ಹೊಳೆನರಸೀಪುರದಲ್ಲಿ 297.
8. ಸಕಲೇಶಪುರ 105.
9. ಇತರ 16 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 3158 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಹಾಸನ: ಜಿಲ್ಲೆಯಲ್ಲಿ‌ ಇಂದು 127 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

DHO Dr. satish
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಜಿಲ್ಲೆಯ ಆಲೂರುನಲ್ಲಿ 2, ಬೇಲೂರು 12, ಹಾಸನ 65, ಅರಸೀಕೆರೆ 8, ಚನ್ನರಾಯಪಟ್ಟಣ 10, ಅರಕಲಗೂಡು 14, ಹೊಳೆನರಸೀಪುರ 11, ಸಕಲೇಶಪುರ 5 ಸೋಂಕು ಪತ್ತೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 3158ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 23 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದುವರೆಗೆ 1247 ಜನರು ಬಿಡುಗಡೆಯಾಗಿದ್ದಾರೆ. 1823 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 88 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಕಂಡು ಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ತಪಾಸಣೆಗೆ ಒಳಪಡಬೇಕು ಎಂದರು.

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭಗಳಿಗೆ ತೆರಳಬೇಡಿ, ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 100.
2. ಅರಕಲಗೂಡು 246.
3. ಅರಸೀಕೆರೆ 449.
4. ಬೆಲೂರು 191.
5. ಚನ್ನರಾಯಪಟ್ಟಣ 485.
6. ಹಾಸನ 1269.
7. ಹೊಳೆನರಸೀಪುರದಲ್ಲಿ 297.
8. ಸಕಲೇಶಪುರ 105.
9. ಇತರ 16 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 3158 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.