ETV Bharat / state

ಹಾಸನ: 217 ಕೊರೊನಾ ಪ್ರಕರಣಗಳು ಪತ್ತೆ: ಇಬ್ಬರು ಸೋಂಕಿಗೆ ಬಲಿ

author img

By

Published : Aug 31, 2020, 4:28 PM IST

Updated : Aug 31, 2020, 5:02 PM IST

ಹಾಸನದಲ್ಲಿ ಇಂದು ಸೋಂಕಿಗೆ ಇಬ್ಬರು ಬಲಿಯಾಗಿದ್ದು, 138 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 217 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 2504 ಸಕ್ರಿಯ ಪ್ರಕರಣಗಳಿವೆ.

ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್
ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 217 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8025ಕ್ಕೆ ಏರಿಕೆಯಾಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 189 ತಲುಪಿದೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 138 ಜನರು ಸೇರಿ ಈವರೆಗೆ 5332 ಮಂದಿ ಗುಣಮುಖರಾಗಿದ್ದಾರೆ. 2504 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-3, ಅರಕಲಗೂಡು-8, ಅರಸೀಕೆರೆ-18, ಬೇಲೂರು-13, ಚನ್ನರಾಯಪಟ್ಟಣ-26, ಹಾಸನ-124, ಹೊಳೆನರಸೀಪುರ-20, ಸಕಲೇಶಪುರ-4, ಇತರೆ- 1 ಒಟ್ಟು 217 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:

  • 1. ಆಲೂರು - 243
  • 2. ಅರಕಲಗೂಡು 766
  • 3. ಅರಸೀಕೆರೆ 1108
  • 4. ಬೆಲೂರು 635
  • 5. ಚನ್ನರಾಯಪಟ್ಟಣ 1053
  • 7. ಹಾಸನ 3247
  • 8. ಹೊಳೆನರಸೀಪುರದಲ್ಲಿ 693
  • 9. ಸಕಲೇಶಪುರ 227
  • ಇತರೆ 53 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 8025 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 217 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8025ಕ್ಕೆ ಏರಿಕೆಯಾಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 189 ತಲುಪಿದೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 138 ಜನರು ಸೇರಿ ಈವರೆಗೆ 5332 ಮಂದಿ ಗುಣಮುಖರಾಗಿದ್ದಾರೆ. 2504 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-3, ಅರಕಲಗೂಡು-8, ಅರಸೀಕೆರೆ-18, ಬೇಲೂರು-13, ಚನ್ನರಾಯಪಟ್ಟಣ-26, ಹಾಸನ-124, ಹೊಳೆನರಸೀಪುರ-20, ಸಕಲೇಶಪುರ-4, ಇತರೆ- 1 ಒಟ್ಟು 217 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:

  • 1. ಆಲೂರು - 243
  • 2. ಅರಕಲಗೂಡು 766
  • 3. ಅರಸೀಕೆರೆ 1108
  • 4. ಬೆಲೂರು 635
  • 5. ಚನ್ನರಾಯಪಟ್ಟಣ 1053
  • 7. ಹಾಸನ 3247
  • 8. ಹೊಳೆನರಸೀಪುರದಲ್ಲಿ 693
  • 9. ಸಕಲೇಶಪುರ 227
  • ಇತರೆ 53 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 8025 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.
Last Updated : Aug 31, 2020, 5:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.