ಹಾಸನ: ಜಿಲ್ಲೆಯಲ್ಲಿ ಮತ್ತೊಬ್ಬರು ಕೋವಿಡ್-19 ಮಹಾಮಾರಿಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ ಚನ್ನರಾಯಪಟ್ಟಣದ 65 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ. ವ್ಯಕ್ತಿಯ ಸ್ವಾಬ್(ಗಂಟಲು ದ್ರವ) ಸಂಗ್ರಹಿಸಿ ಕೊರೊನಾ ಪರೀಕ್ಷೆ ನಡೆಸಿದ್ದು, ಸೋಂಕು ದೃಢವಾದ ಹಿನ್ನೆಲೆ ಕಳೆದ ರಾತ್ರಿ 12:45ಕ್ಕೆ ಇವರನ್ನು ಖಾಸಗಿ ಆಸ್ಪತ್ರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬೆಳಗ್ಗೆ 7:45ಕ್ಕೆ ಸಾವು ಸಂಭವಿಸಿದೆ. ಮೃತರು ಮಧುಮೇಹ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಇಂದು ಹೊಸದಾಗಿ 6 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 432ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾನಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.