ಹಾಸನ: ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತಂತೆ ಹೈಕೋರ್ಟ್ನ ಮಹತ್ವದ ತೀರ್ಪು ನೀಡಿದೆ. ಆದರೆ, ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಕೋರ್ಟ್ ಆದೇಶವನ್ನು ಖಂಡಿಸಿ ತರಗತಿಗಳಿಗೆ ತೆರಳದೇ ಧರಣಿ ನಡೆಸಿದ್ದಾರೆ.
ಹೈಕೋರ್ಟ್ ತೀರ್ಪಿಗೆ ವಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿನಿಯರು, ನಮ್ಮ ಅಭಿಪ್ರಾಯವನ್ನು ಕೋರ್ಟ್ ಕೇಳಬೇಕಾಗಿತ್ತು. ನಮಗೆ ಅನ್ಯಾಯವಾಗಿದೆ. ನಮಗೆ ಶಿಕ್ಷಣ ಹಾಗೂ ಹಿಜಾಬ್ ಎರಡೂ ಬೇಕು. ಹಿಜಾಬ್ ಇಲ್ಲದೇ ಯಾವುದೇ ಕಾರಣಕ್ಕೂ ಕಾಲೇಜಿಗೆ ಹೋಗಲ್ಲ ಎಂದು ಹಠ ಹಿಡಿದಿದ್ದಾರೆ.
ಕಳೆದೊಂದು ತಿಂಗಳಿನಿಂದ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಗೆ ಹೋಗದೇ ಕಾಲೇಜು ಹೊರಗೆ ಕುಳಿತ್ತಿದ್ದು, ನಮಗೆ ಹಿಜಾಬ್ ಧರಿಸಲು ಅವಕಾಶ ಕೊಡಬೇಕು. ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ಕಾಲೇಜಿಗೆ ಬರಲ್ಲ ಎಂದು ಪಟ್ಟು ಹಿಡಿದಿದ್ದಾರೆ.