ETV Bharat / state

ಹಾಸನದಲ್ಲಿ ಇಂದು 159 ಹೊಸ ಕೊರೊನಾ ಪ್ರಕರಣ ಪತ್ತೆ: ನಾಲ್ವರು ಸಾವು

author img

By

Published : Aug 6, 2020, 5:48 PM IST

ಹಾಸನ ಜಿಲ್ಲೆಯಲ್ಲಿ ಇಂದು 159 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸದ್ಯ ಸಕ್ರೀಯ ಪ್ರಕರಣಗಳ ಸಂಖ್ಯೆ 1,728 ಆಗಿದೆ.

Hassan Covid Update
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಹಾಸನ : ಜಿಲ್ಲೆಯಲ್ಲಿ‌ ಇಂದು 159 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಆಲೂರು ತಾಲೂಕಿನಲ್ಲಿ 2, ಹಾಸನದಲ್ಲಿ 103, ಅರಸೀಕೆರೆಯಲ್ಲಿ 10, ಚನ್ನರಾಯಪಟ್ಟಣದಲ್ಲಿ 11, ಅರಕಲಗೂಡಿನಲ್ಲಿ 11, ಹೊಳೇನರಸೀಪುರದಲ್ಲಿ 13, ಸಕಲೇಶಪುರ 9 ಸೇರಿ ಒಟ್ಟು 159 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದುವರೆ ಜಿಲ್ಲೆಯಲ್ಲಿ ಒಟ್ಟು 3,031 ಪ್ರಕರಣಗಳು ದಾಖಲಾಗಿವೆ. ಇಂದು 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 1,224 ಮಂದಿ ಗುಣಮುಖರಾಗಿದ್ದಾರೆ. ಸದ್ಯ, 1,728 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 79 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆ, ಉಸಿರಾಟ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಸಮಸ್ಯೆಗಳಿದ್ದಲ್ಲಿ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ -ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲೂಕುವಾರು ಪ್ರಕರಣಗಳು :

1. ಆಲೂರು - 98
2. ಅರಕಲಗೂಡು -232
3. ಅರಸೀಕೆರೆ - 441
4. ಬೆಲೂರು- 179
5. ಚನ್ನರಾಯಪಟ್ಟಣ- 475
6. ಹಾಸನ -1204
7. ಹೊಳೆನರಸೀಪುರದಲ್ಲಿ- 286
8. ಸಕಲೇಶಪುರ -100
9. ಇತರ -16

ಹಾಸನ : ಜಿಲ್ಲೆಯಲ್ಲಿ‌ ಇಂದು 159 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಆಲೂರು ತಾಲೂಕಿನಲ್ಲಿ 2, ಹಾಸನದಲ್ಲಿ 103, ಅರಸೀಕೆರೆಯಲ್ಲಿ 10, ಚನ್ನರಾಯಪಟ್ಟಣದಲ್ಲಿ 11, ಅರಕಲಗೂಡಿನಲ್ಲಿ 11, ಹೊಳೇನರಸೀಪುರದಲ್ಲಿ 13, ಸಕಲೇಶಪುರ 9 ಸೇರಿ ಒಟ್ಟು 159 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದುವರೆ ಜಿಲ್ಲೆಯಲ್ಲಿ ಒಟ್ಟು 3,031 ಪ್ರಕರಣಗಳು ದಾಖಲಾಗಿವೆ. ಇಂದು 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 1,224 ಮಂದಿ ಗುಣಮುಖರಾಗಿದ್ದಾರೆ. ಸದ್ಯ, 1,728 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 79 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆ, ಉಸಿರಾಟ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಸಮಸ್ಯೆಗಳಿದ್ದಲ್ಲಿ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ -ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಸೋಂಕು ತಡೆಗಟ್ಟಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲೂಕುವಾರು ಪ್ರಕರಣಗಳು :

1. ಆಲೂರು - 98
2. ಅರಕಲಗೂಡು -232
3. ಅರಸೀಕೆರೆ - 441
4. ಬೆಲೂರು- 179
5. ಚನ್ನರಾಯಪಟ್ಟಣ- 475
6. ಹಾಸನ -1204
7. ಹೊಳೆನರಸೀಪುರದಲ್ಲಿ- 286
8. ಸಕಲೇಶಪುರ -100
9. ಇತರ -16

ETV Bharat Logo

Copyright © 2024 Ushodaya Enterprises Pvt. Ltd., All Rights Reserved.