ETV Bharat / state

ಸಕಾಲ ಯೋಜನೆಯಲ್ಲಿ ಹಾಸನಕ್ಕೆ ಪ್ರಥಮ ಸ್ಥಾನ : ಜಿಲ್ಲಾಧಿಕಾರಿಗಳಿಂದ ಮೆಚ್ಚುಗೆ

ಸಕಾಲ ಯೋಜನೆಯಡಿ ಅರ್ಜಿಗಳ ಸ್ವೀಕಾರ, ವಿಲೇವಾರಿ ಕಾಲಮಿತಿಯೊಳಗೆ ಆಗಿರುವುದನ್ನು ಪರಿಗಣಿಸಿ ಹಾಸನ ಜಿಲ್ಲೆಗೆ ಮೊದಲ ಸ್ಥಾನ ನೀಡಲಾಗಿದೆ. ಜಿಲ್ಲೆಯಲ್ಲಿ 2019ರ ಸಾಲಿನಲ್ಲಿ ಈವರೆಗೆ ಒಟ್ಟು 2,26,507 ಅರ್ಜಿಗಳು ಸ್ವೀಕೃತವಾಗಿದ್ದು, ಅದರಲ್ಲಿ 2,41,196 ಅರ್ಜಿಗಳು ಈಗಾಗಲೇ ವಿಲೇವಾರಿಯಾಗಿವೆ.

author img

By

Published : May 6, 2019, 12:43 PM IST

ಸಕಾಲ ಯೋಜನೆಯಲ್ಲಿ ಹಾಸನಕ್ಕೆ ಪ್ರಥಮ ಸ್ಥಾನ

ಹಾಸನ: ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಸಕಾಲ ಜಿಲ್ಲಾ ಶ್ರೇಯಾಂಕ ಮತ್ತು ಕಂದಾಯ ಇಲಾಖೆಯ ಶ್ರೇಯಾಂಕದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಸಕಾಲ ಯೋಜನೆಯಲ್ಲಿ ಹಾಸನಕ್ಕೆ ಪ್ರಥಮ ಸ್ಥಾನ

ಸಕಾಲ ಯೋಜನೆಯಲ್ಲಿ ಅರ್ಜಿಗಳ ಸ್ವೀಕಾರ, ವಿಲೇವಾರಿ ಕಾಲಮಿತಿಯೊಳಗೆ ಆಗಿರುವುದನ್ನು ಪರಿಗಣಿಸಿ ಜಿಲ್ಲೆಗೆ ಮೊದಲ ಸ್ಥಾನ ನೀಡಲಾಗಿದೆ. ಜಿಲ್ಲೆಯಲ್ಲಿ 2019ರ ಸಾಲಿನಲ್ಲಿ ಈವರೆಗೆ ಒಟ್ಟು 2,26,507 ಅರ್ಜಿಗಳು ಸ್ವೀಕೃತವಾಗಿದ್ದು, 2,41,196 ಅರ್ಜಿಗಳು ಈಗಾಗಲೇ ವಿಲೇವಾರಿಯಾಗಿವೆ.

ಉಳಿದಂತೆ ಹಾಸನ ಜಿಲ್ಲೆಯಲ್ಲಿನ ತಾಲೂಕು ಶ್ರೇಯಾಂಕವನ್ನು ನೋಡುವುದಾದ್ರೆ, ಸಕಲೇಶಪುರ, ಹಾಸನ, ಅರಕಲಗೂಡು, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಆಲೂರು, ಅರಸೀಕೆರೆ ಸಕಾಲ ಕಾಯ್ದೆಯಡಿ ಹಾಸನ ಜಿಲ್ಲೆ ಪ್ರಗತಿಯಲ್ಲಿ ಪ್ರಥಮ ಶ್ರೇಯಾಂಕ ಪಡೆಯಲು ಸಹಕರಿಸಿದ ಜಿಲ್ಲೆಗಳು. ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ಇದೇ ಶ್ರೇಯಾಂಕವನ್ನು ಮುಂದುವರೆಸಿಕೊಂಡು ಹೋಗುವಂತೆ ಕೋರಿದ್ದಾರೆ.

ಉಡುಪಿ ಜಿಲ್ಲೆಯು ಅರ್ಜಿ ವಿಲೇವಾರಿಯಲ್ಲಿ 2 ನೇ ಸ್ಥಾನಗಳಿಸಿದ್ರೆ, ಚಿಕ್ಕಮಗಳೂರು ಜಿಲ್ಲೆ 3 ನೇ ರ್‍ಯಾಂಕ್ ಗಳಿಸಿದೆ. ಬೀದರ್ ಜಿಲ್ಲೆ 30ನೇ ಸ್ಥಾನಗಳಿಸಿದೆ.

ಹಾಸನ: ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಸಕಾಲ ಜಿಲ್ಲಾ ಶ್ರೇಯಾಂಕ ಮತ್ತು ಕಂದಾಯ ಇಲಾಖೆಯ ಶ್ರೇಯಾಂಕದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಸಕಾಲ ಯೋಜನೆಯಲ್ಲಿ ಹಾಸನಕ್ಕೆ ಪ್ರಥಮ ಸ್ಥಾನ

ಸಕಾಲ ಯೋಜನೆಯಲ್ಲಿ ಅರ್ಜಿಗಳ ಸ್ವೀಕಾರ, ವಿಲೇವಾರಿ ಕಾಲಮಿತಿಯೊಳಗೆ ಆಗಿರುವುದನ್ನು ಪರಿಗಣಿಸಿ ಜಿಲ್ಲೆಗೆ ಮೊದಲ ಸ್ಥಾನ ನೀಡಲಾಗಿದೆ. ಜಿಲ್ಲೆಯಲ್ಲಿ 2019ರ ಸಾಲಿನಲ್ಲಿ ಈವರೆಗೆ ಒಟ್ಟು 2,26,507 ಅರ್ಜಿಗಳು ಸ್ವೀಕೃತವಾಗಿದ್ದು, 2,41,196 ಅರ್ಜಿಗಳು ಈಗಾಗಲೇ ವಿಲೇವಾರಿಯಾಗಿವೆ.

ಉಳಿದಂತೆ ಹಾಸನ ಜಿಲ್ಲೆಯಲ್ಲಿನ ತಾಲೂಕು ಶ್ರೇಯಾಂಕವನ್ನು ನೋಡುವುದಾದ್ರೆ, ಸಕಲೇಶಪುರ, ಹಾಸನ, ಅರಕಲಗೂಡು, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಆಲೂರು, ಅರಸೀಕೆರೆ ಸಕಾಲ ಕಾಯ್ದೆಯಡಿ ಹಾಸನ ಜಿಲ್ಲೆ ಪ್ರಗತಿಯಲ್ಲಿ ಪ್ರಥಮ ಶ್ರೇಯಾಂಕ ಪಡೆಯಲು ಸಹಕರಿಸಿದ ಜಿಲ್ಲೆಗಳು. ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ಇದೇ ಶ್ರೇಯಾಂಕವನ್ನು ಮುಂದುವರೆಸಿಕೊಂಡು ಹೋಗುವಂತೆ ಕೋರಿದ್ದಾರೆ.

ಉಡುಪಿ ಜಿಲ್ಲೆಯು ಅರ್ಜಿ ವಿಲೇವಾರಿಯಲ್ಲಿ 2 ನೇ ಸ್ಥಾನಗಳಿಸಿದ್ರೆ, ಚಿಕ್ಕಮಗಳೂರು ಜಿಲ್ಲೆ 3 ನೇ ರ್‍ಯಾಂಕ್ ಗಳಿಸಿದೆ. ಬೀದರ್ ಜಿಲ್ಲೆ 30ನೇ ಸ್ಥಾನಗಳಿಸಿದೆ.

Intro:ಸಕಾಲ ಯೋಜನೆ ರಾಜ್ಯದಲ್ಲಿ ಹಾಸನ ಪ್ರಥಮ ಸ್ಥಾನ
ಹಾಸನ: ಕರ್ನಾಟಕ ರಾಜ್ಯ ಸರ್ಕಾರವು ೨೦೧೧-೧೨ ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆ ಹಾಸನ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು ಸಕಾಲ ಜಿಲ್ಲಾ ಶ್ರೇಯಾಂಕ ಮತ್ತು ಕಂದಾಯ ಇಲಾಖೆಯ ಶ್ರೇಯಾಂಕದಲ್ಲಿ ಹಾಸನ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.
ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಮೊದಲ ವಾರದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನಗಳಿಸಿದೆ.ಜಿಲ್ಲೆಯಲ್ಲಿ ೨೦೧೯ ರ ಸಾಲಿನಲ್ಲಿ ಈವರೆಗೆ ಒಟ್ಟು ೨,೨೬,೫೦೭ ಅರ್ಜಿಗಳು ಸ್ವೀಕೃತವಾಗಿದ್ದು, ೨,೪೧,೧೯೬ ಅರ್ಜಿಗಳು ವಿಲೇವಾರಿಯಾಗಿವೆ, ಉಳಿದಂತೆ ಹಾಸನ ಜಿಲ್ಲೆಯಲ್ಲಿನ ತಾಲ್ಲೂಕು ಶ್ರೇಯಾಂಕವನ್ನು ನೋಡುವುದಾದ್ರೆ, ಸಕಲೇಶಪುರ, ಹಾಸನ, ಅರಕಲಗೂಡು, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಆಲೂರು, ಅರಸೀಕೆರೆ ಸಕಾಲ ಕಾಯ್ದೆಯಡಿ ಹಾಸನ ಜಿಲ್ಲೆ ಪ್ರಗತಿಯಲ್ಲಿ ಪ್ರಥಮ ಶ್ರೇಯಾಂಕ ಪಡೆಯಲು ಸಹಕರಿಸಿದ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಮತ್ತು ನೌಕರರಿಗೂ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಇದೇ ಶ್ರೇಯಾಂಕವನ್ನು ಮುಂದುವರೆಯುವಂತೆ ಕೋರಿದ್ದಾರೆ. ಸಕಾಲ ಯೋಜನೆಯಲ್ಲಿ ಅರ್ಜಿಗಳ ಸ್ವೀಕಾರ ಕಾಲಮಿತಿಯೊಳಗೆ ವಿಲೇವಾರಿ ಮಾಡುವುದರ ಒಟ್ಟಾರೆಯಾಗಿ ಪರಿಗಣಿಸಿ ಜಿಲ್ಲೆಗೆ ಮೊದಲ ಸ್ಥಾನ ನೀಡಲಾಗಿದೆ. ಸಕಾಲದಲ್ಲಿ ಅರ್ಜಿ ಸಂಖ್ಯೆಗೆ ಸ್ವೀಕರಿಸುವ ವಿಲೇವಾರಿಯಲ್ಲಿ ಸ್ವೀಕರಿಸುವ ಅರ್ಜಿಗಳ ಸಂಖ್ಯೆ ಪ್ರಮಾಣದಲ್ಲಿ ಸರಾಸರಿಯಲ್ಲಿ ಜಿಲ್ಲೆ ಉತ್ತಮ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯು ಅರ್ಜಿ ವಿಲೇವಾರಿಯಲ್ಲಿ ೨ನೇ ಸ್ಥಾನಗಳಿಸಿದ್ರೆ, ಚಿಕ್ಕಮಗಳೂರು ಜಿಲ್ಲೆ ೩ನೇ ರ್‍ಯಾಂಕ್ ಗಳಿಸಿದೆ ಬೀದರ್ ಜಿಲ್ಲೆ ೩೦ನೇ ಸ್ಥಾನಗಳಿಸಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಒಟ್ಟು ೨೨೬೫೦೭ ಅರ್ಜಿಗಳು ಸ್ವೀಕೃತಗೊಂಡಿದ್ದು, ಒಟ್ಟು ೨೪೧೧೯೬ ಅರ್ಜಿಗಳು ವಿಲೇವಾರಿಯಾಗಿವೆ. ಇದರಲ್ಲಿ ೧೪.೪೧೦ ತಡವಾಗಿ ವಿಲೇವಾರಿಯಾಗಿದ್ದು, ಒಟ್ಟು ೧೯೨೫೮ ಅರ್ಜಿಗಳು ತಿರಸ್ಕೃತಗೊಂಡಿವೆ. ಇನ್ನೂ ಸಕಾಲ ಸೇವೆಯಲ್ಲಿ ಒಟ್ಟಾರೆ ಪ್ರಥಮ ಸ್ಥಾನ ಪಡೆಯಲು ಕಾರಣರಾಗಿರುವ ಎಲ್ಲಾ ಅಧಿಕಾರಿ ಸಿಬ್ಬಂಧಿಗಳಿಗೆ ಜಿಲ್ಲಾಧಿಕಾರಿ ಅಭಿನಂದನೆ ಸಲ್ಲಿಸಿದ್ದು ಇದೇ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ. Body:0Conclusion:0

For All Latest Updates

TAGGED:

Sakala
ETV Bharat Logo

Copyright © 2024 Ushodaya Enterprises Pvt. Ltd., All Rights Reserved.