ETV Bharat / state

ಹಾಸನದಲ್ಲಿ ಹರಿಯಿತು ನೆತ್ತರು: ವ್ಯಕ್ತಿ ಬರ್ಬರ ಕೊಲೆ, ಬೆಚ್ಚಿಬಿದ್ದ ಜನ

author img

By

Published : Sep 30, 2019, 8:22 AM IST

Updated : Sep 30, 2019, 9:35 AM IST

ಹಾಸನದಲ್ಲೂ ನೆತ್ತರು ಹರಿದಿದೆ. ನಗರದ ಬೀರನಹಳ್ಳಿ ಕೆರೆ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಗಾರೆ ಕೆಲಸಗಾರನನ್ನು ಕೊಲೆಗೈದಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ

ಹಾಸನ: ನಗರದಲ್ಲಿ ನೆತ್ತರು ಹರಿದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.

ಹಾಸನದಲ್ಲಿ ಗಾರೆಕೆಲಸಗಾರನ ಬರ್ಬರ ಹತ್ಯೆ

ರಮೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹಾಸನ ತಾಲೂಕಿನ ಚಿಕ್ಕಗೇಣಿಗೆರೆ ಗ್ರಾಮದವನು ಎಂದು ತಿಳಿದುಬಂದಿದೆ. ನಗರದ ರಾಘವೇಂದ್ರ ಕಾಲೋನಿ ಬಳಿ ಬೈಕ್​ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರಮೇಶನನ್ನು ಕೊಲೆಗೈದಿದ್ದಾರೆ.

ಪಿತೃಪಕ್ಷವಿದ್ದ ಕಾರಣ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ ಚಿಕ್ಕಗೇಣಿಗೆರೆ ಗ್ರಾಮಕ್ಕೆ ತೆರಳುವ ವೇಳೆ ಮೂರು ಮಂದಿ ದುಷ್ಕರ್ಮಿಗಳು ಬೈಕಿನಲ್ಲಿ ತೆರಳುತ್ತಿದ್ದ ರಮೇಶನನ್ನು ಅಡ್ಡಗಟ್ಟಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಬಲವಾದ ಮಾರಕಾಸ್ತ್ರಗಳಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ರಮೇಶನ ಪ್ರಾಣಪಕ್ಷಿ ಹಾರಿಹೋಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಮೇಶ್ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿಂದೆ ಹಣದ ವಿಚಾರವಾಗಿ ಕೆಲವರೊಂದಿಗೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗ್ತಿದೆ. ಅಷ್ಟೇ ಅಲ್ಲದೆ, ಮೂರು ದಿನಗಳ ಹಿಂದೆ ಕೆಲ ಸ್ನೇಹಿತರ ನಡುವೆ ಜಗಳ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಬೀರನಹಳ್ಳಿ ಕೆರೆಯ ಸಮೀಪ ರಾಘವೇಂದ್ರ ಕಾಲೋನಿಯಲ್ಲಿ ಬಡ್ಡಿ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಬಹುತೇಕ ಹಣದ ವಿಚಾರವಾಗಿಯೇ ರಮೇಶ ಕೊಲೆ ಆಗಿರಬಹುದು ಎಂದು ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಸ್ಥಳಕ್ಕಾಗಮಿಸಿದ ಬಡಾವಣೆ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಕೊಲೆ ಆರೋಪಿಗಳಿಗಾಗಿ ಎಸ್​ಪಿ ರಾಮನಿವಾಸ್ ಸೆಪಟ್ ಆದೇಶದ ಮೇರೆಗೆ ವಿಶೇಷ ತಂಡ ರಚಿಸಲಾಗಿದೆ. ಇನ್ನು ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ನಗರದಲ್ಲಿ ನೆತ್ತರು ಹರಿದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.

ಹಾಸನದಲ್ಲಿ ಗಾರೆಕೆಲಸಗಾರನ ಬರ್ಬರ ಹತ್ಯೆ

ರಮೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹಾಸನ ತಾಲೂಕಿನ ಚಿಕ್ಕಗೇಣಿಗೆರೆ ಗ್ರಾಮದವನು ಎಂದು ತಿಳಿದುಬಂದಿದೆ. ನಗರದ ರಾಘವೇಂದ್ರ ಕಾಲೋನಿ ಬಳಿ ಬೈಕ್​ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರಮೇಶನನ್ನು ಕೊಲೆಗೈದಿದ್ದಾರೆ.

ಪಿತೃಪಕ್ಷವಿದ್ದ ಕಾರಣ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ ಚಿಕ್ಕಗೇಣಿಗೆರೆ ಗ್ರಾಮಕ್ಕೆ ತೆರಳುವ ವೇಳೆ ಮೂರು ಮಂದಿ ದುಷ್ಕರ್ಮಿಗಳು ಬೈಕಿನಲ್ಲಿ ತೆರಳುತ್ತಿದ್ದ ರಮೇಶನನ್ನು ಅಡ್ಡಗಟ್ಟಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಬಲವಾದ ಮಾರಕಾಸ್ತ್ರಗಳಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ರಮೇಶನ ಪ್ರಾಣಪಕ್ಷಿ ಹಾರಿಹೋಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಮೇಶ್ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿಂದೆ ಹಣದ ವಿಚಾರವಾಗಿ ಕೆಲವರೊಂದಿಗೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗ್ತಿದೆ. ಅಷ್ಟೇ ಅಲ್ಲದೆ, ಮೂರು ದಿನಗಳ ಹಿಂದೆ ಕೆಲ ಸ್ನೇಹಿತರ ನಡುವೆ ಜಗಳ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಬೀರನಹಳ್ಳಿ ಕೆರೆಯ ಸಮೀಪ ರಾಘವೇಂದ್ರ ಕಾಲೋನಿಯಲ್ಲಿ ಬಡ್ಡಿ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಬಹುತೇಕ ಹಣದ ವಿಚಾರವಾಗಿಯೇ ರಮೇಶ ಕೊಲೆ ಆಗಿರಬಹುದು ಎಂದು ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಸ್ಥಳಕ್ಕಾಗಮಿಸಿದ ಬಡಾವಣೆ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಕೊಲೆ ಆರೋಪಿಗಳಿಗಾಗಿ ಎಸ್​ಪಿ ರಾಮನಿವಾಸ್ ಸೆಪಟ್ ಆದೇಶದ ಮೇರೆಗೆ ವಿಶೇಷ ತಂಡ ರಚಿಸಲಾಗಿದೆ. ಇನ್ನು ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ರಮೇಶ್ @ ಗಾರೆ ರಮೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದು, ಹಾಸನ ತಾಲ್ಲೂಕಿನ ಶಾಂತಿಗ್ರಾಮ ಸಮೀಪದ ಚಿಕ್ಕಗೇಣಿಗೆರೆ ಗ್ರಾಮದವನು ಎಂದು ತಿಳಿದಿದೆ. ಹಾಸನ ನಗರದ ರಾಯಲ್ ಆರ್ಕಿಡ್ ಸಮೀಪವಿರುವ ಬೀರನಹಳ್ಳಿ ಕೆರೆ ಬಳಿಯ ರಾಘವೇಂದ್ರ ಕಾಲೋನಿ ಹತ್ತಿರ ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಪಿತೃಪಕ್ಷವಿದ್ದ ಕಾರಣ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ ಚಿಕ್ಕಗೇಣಿಗೆರೆ ಗ್ರಾಮಕ್ಕೆ ತೆರಳುವ ವೇಳೆ ಮೂರು ಮಂದಿ ದುಷ್ಕರ್ಮಿಗಳು ಬೈಕಿನಲ್ಲಿ ತೆರಳುತ್ತಿದ್ದ ರಮೇಶನನ್ನು ಅಡ್ಡಗಟ್ಟಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಬಲವಾದ ಮಾರಕಾಸ್ತ್ರಗಳಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ರಕ್ತಸಿಕ್ತವಾಗಿ ಕೊಲೆಯಾಗಿದ್ದು ಕೊಲೆ ಮಾಡಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಮೇಶ್ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿಂದೆ ಹಣದ ವಿಚಾರವಾಗಿ ಕೆಲವರೊಂದಿಗೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗಿದ್ದು,ಅಷ್ಟೇ ಅಲ್ಲದೆ ಮೂರು ದಿನಗಳ ಹಿಂದೆ ಕೆಲವು ಸ್ನೇಹಿತರ ನಡುವೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಕಳೆದವರ್ಷ ಬಡ್ಡಿ ವ್ಯವಹಾರದಲ್ಲಿ ಮಾಜಿ ಸೈನಿಕನ ಹೆಂಡತಿಯ ಕೊಲೆ ನಡೆದಿತ್ತು. ಅಸಲು ಮತ್ತು ಬಡ್ಡಿ ಹಣ ಎರಡನ್ನೂ ಕೊಡುವುದಾಗಿ ಹಣ ಪಡೆದ ದಂಪತಿಗಳು ಹಣ ಕೊಟ್ಟಿದ್ದ ಮಾಜಿ ಸೈನಿಕನ ಹೆಂಡತಿಯನ್ನು ಮನೆಗೆ ಕರೆಯಿಸಿಕೊಂಡು ಆಕೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಎಸೆದಿದ್ದರು. ಬೀರನಹಳ್ಳಿ ಕೆರೆಯ ಸಮೀಪ ರಾಘವೇಂದ್ರ ಕಾಲೋನಿಯಲ್ಲಿ ಬಡ್ಡಿ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಬಹುತೇಕ ಹಣದ ವಿಚಾರವಾಗಿಯೇ ರಮೇಶನ ಈ ಕೊಲೆ ನಡೆದಿರಬಹುದು ಎಂದು ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಬಡಾವಣೆ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೊಲೆಮಾಡಿದ ಆರೋಪಿಗಳಿಗಾಗಿ ಎಸ್ಪಿ ರಾಮನಿವಾಸ್ ಸೆಪಟ್ ಆದೇಶದ ಮೇಲೆ ವಿಶೇಷ ತಂಡ ರಚಿಸಲಾಗಿದೆ. ಇನ್ನು ಈ ಸಂಬಂಧ ಬಡವನ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.


Body:0


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
Last Updated : Sep 30, 2019, 9:35 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.