ETV Bharat / state

ಹಾಸನದಲ್ಲಿ ತಮಿಳುನಾಡು ಪೊಲೀಸರಿಂದ ಸಿನಿಮೀಯ ಶೈಲಿ ಕಾರು ಚೇಸ್ : AIADMKಯ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ

ತಮಿಳುನಾಡಿನ ಮಾಜಿ ಸಚಿವರೊಬ್ಬರ ಕಾರನ್ನು ಚೇಸ್ ಮಾಡಿ ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ..

author img

By

Published : Jan 5, 2022, 2:31 PM IST

Updated : Jan 5, 2022, 3:13 PM IST

ಸಿನಿಮಾ ಶೈಲಿಯಲ್ಲಿ ಮಾಜಿ ಸಚಿವರ ಕಾರು ಚೇಸ್
ಸಿನಿಮಾ ಶೈಲಿಯಲ್ಲಿ ಮಾಜಿ ಸಚಿವರ ಕಾರು ಚೇಸ್

ಹಾಸನ: ಕೆಲಸ ಕೊಡಿಸುವುದಾಗಿ ನಂಬಿಸಿ ವಿವಿಧ ಜನರಿಂದ ಕೋಟ್ಯಂತರ ಹಣವನ್ನು ಪಡೆದುಕೊಂಡು ವಂಚಿಸಿದ್ದ ತಮಿಳುನಾಡು ಮೂಲದ ಮಾಜಿ ಸಚಿವನನ್ನು ಹಾಸನ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬಾಲಾಜಿ ರಾಜೇಂದ್ರನ್ ಬಂಧನಕೊಳಗಾದ ತಮಿಳುನಾಡಿನ ಎಡಿಎಂಕೆ ಪಕ್ಷದ ಮಾಜಿ ಸಚಿವ. ಎಡಿಎಂಕೆ ಪಕ್ಷದಲ್ಲಿ ಮಂತ್ರಿಯಾಗಿದ್ದ ಬಾಲಾಜಿ ರಾಜೇಂದ್ರ ತಮಿಳುನಾಡಿನಲ್ಲಿ ಹಲವರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಾಜಿ ಸಚಿವನನ್ನ ತಮಿಳುನಾಡಿನ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಹುಡುಕಾಟ ನಡೆಸಿದ್ದರು.

ಎಐಎಡಿಎಂಕೆ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ
ಎಐಎಡಿಎಂಕೆ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ

ತಮಿಳುನಾಡಿನಿಂದ ಕರ್ನಾಟಕ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ತಮಿಳುನಾಡು ಮತ್ತು ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಹಾಸನ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಮುಂಭಾಗ ಪೊಲೀಸರು ಆತನ ಕಾರನ್ನು ಅಡ್ಡಗಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

AIADMKಯ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ

ನಾಳೆ (ಜನವರಿ 6) ಸುಪ್ರೀಂಕೋರ್ಟ್‌ನಲ್ಲಿ ಪೂರ್ವ ಜಾಮೀನು ಅರ್ಜಿ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಲಾಗಿದೆ. ರಾಜೇಂದ್ರ ಬಾಲಾಜಿ ಅವರ ವಿರುದ್ಧ ಅವಿನ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವಿದೆ.

ಹಾಸನ: ಕೆಲಸ ಕೊಡಿಸುವುದಾಗಿ ನಂಬಿಸಿ ವಿವಿಧ ಜನರಿಂದ ಕೋಟ್ಯಂತರ ಹಣವನ್ನು ಪಡೆದುಕೊಂಡು ವಂಚಿಸಿದ್ದ ತಮಿಳುನಾಡು ಮೂಲದ ಮಾಜಿ ಸಚಿವನನ್ನು ಹಾಸನ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬಾಲಾಜಿ ರಾಜೇಂದ್ರನ್ ಬಂಧನಕೊಳಗಾದ ತಮಿಳುನಾಡಿನ ಎಡಿಎಂಕೆ ಪಕ್ಷದ ಮಾಜಿ ಸಚಿವ. ಎಡಿಎಂಕೆ ಪಕ್ಷದಲ್ಲಿ ಮಂತ್ರಿಯಾಗಿದ್ದ ಬಾಲಾಜಿ ರಾಜೇಂದ್ರ ತಮಿಳುನಾಡಿನಲ್ಲಿ ಹಲವರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಾಜಿ ಸಚಿವನನ್ನ ತಮಿಳುನಾಡಿನ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಹುಡುಕಾಟ ನಡೆಸಿದ್ದರು.

ಎಐಎಡಿಎಂಕೆ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ
ಎಐಎಡಿಎಂಕೆ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ

ತಮಿಳುನಾಡಿನಿಂದ ಕರ್ನಾಟಕ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ತಮಿಳುನಾಡು ಮತ್ತು ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಹಾಸನ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಮುಂಭಾಗ ಪೊಲೀಸರು ಆತನ ಕಾರನ್ನು ಅಡ್ಡಗಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

AIADMKಯ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ

ನಾಳೆ (ಜನವರಿ 6) ಸುಪ್ರೀಂಕೋರ್ಟ್‌ನಲ್ಲಿ ಪೂರ್ವ ಜಾಮೀನು ಅರ್ಜಿ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಲಾಗಿದೆ. ರಾಜೇಂದ್ರ ಬಾಲಾಜಿ ಅವರ ವಿರುದ್ಧ ಅವಿನ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವಿದೆ.

Last Updated : Jan 5, 2022, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.