ETV Bharat / state

ರಸ್ತೆ ಡಾಂಬರೀಕರಣ ಮಾಡುವುದಾಗಿ ಸಚಿವರ ಭರವಸೆ: 5 ದಿನದಿಂದ ನಡಿತಿದ್ದ ಪ್ರತಿಭಟನೆ ಅಂತ್ಯ - ಸಚಿವ ಮಾಧುಸ್ವಾಮಿ ಹಾಸನ ಭೇಟಿ ಸುದ್ದಿ

ರಾಷ್ಟ್ರೀಯ ಹೆದ್ದಾರಿ 75ರ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಹಾಸನದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ.

ಪ್ರತಿಭಟನೆ ಅಂತ್ಯ
author img

By

Published : Oct 27, 2019, 10:43 AM IST

ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಪಡೆಯಲಾಗಿದೆ.

ಹಾಸನ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಾಳ್ಳುಪೇಟೆಯಲ್ಲಿ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡಬೇಕೆಂದು ವಿವಿಧ ಸಂಘಟನೆಗಳು 5 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ರಸ್ತೆ ಹದಗೆಟ್ಟಿರುವುದು ಈಗಾಗಲೇ ತನ್ನ ಗಮನಕ್ಕೆ ಬಂದಿದ್ದು, ಮಳೆ ನಿಂತ ತಕ್ಷಣವೇ ಮರು ಡಾಂಬರೀಕರಣ ಕಾಮಗಾರಿ ಆರಂಭಿಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.

ಪ್ರತಿಭಟನೆ ಅಂತ್ಯ

ಇದಕ್ಕೂ ಮುನ್ನ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಎಂದು ಪಟ್ಟುಹಿಡಿದಿದ್ದರು. ಹಾಗಾಗಿ ಪ್ರತಿಭಟನೆಯ ಕಾರಣವೆನೆಂಬುದನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಸ್ಥಳೀಯ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಹಾಗಾಗಿ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಸಚಿವರು ಮನವಿ ಮಾಡಿದ್ರು.

ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಪಡೆಯಲಾಗಿದೆ.

ಹಾಸನ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಾಳ್ಳುಪೇಟೆಯಲ್ಲಿ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡಬೇಕೆಂದು ವಿವಿಧ ಸಂಘಟನೆಗಳು 5 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ರಸ್ತೆ ಹದಗೆಟ್ಟಿರುವುದು ಈಗಾಗಲೇ ತನ್ನ ಗಮನಕ್ಕೆ ಬಂದಿದ್ದು, ಮಳೆ ನಿಂತ ತಕ್ಷಣವೇ ಮರು ಡಾಂಬರೀಕರಣ ಕಾಮಗಾರಿ ಆರಂಭಿಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.

ಪ್ರತಿಭಟನೆ ಅಂತ್ಯ

ಇದಕ್ಕೂ ಮುನ್ನ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಎಂದು ಪಟ್ಟುಹಿಡಿದಿದ್ದರು. ಹಾಗಾಗಿ ಪ್ರತಿಭಟನೆಯ ಕಾರಣವೆನೆಂಬುದನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಸ್ಥಳೀಯ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಹಾಗಾಗಿ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಸಚಿವರು ಮನವಿ ಮಾಡಿದ್ರು.

Intro:ಹಾಸನ: ರಾಷ್ಟ್ರೀಯ ಹೆದ್ದಾರಿ 75 ಸಂಪೂರ್ಣವಾಗಿ ಹದಗೆಟ್ಟಿರುವುದು ಈಗಾಗಲೇ ತನ್ನ ಗಮನಕ್ಕೆ ಬಂದಿದ್ದು ಮಳೆ ನಿಂತ ತಕ್ಷಣವೇ ಮರು ಡಾಂಬರೀಕರಣ ಕಾಮಗಾರಿ ಆರಂಭಿಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಭರವಸೆ ನೀಡಿದರು.

ಹಾಸನ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಾಳ್ಳುಪೇಟೆಯಲ್ಲಿ ಹದಗೆಟ್ಟಿರುವ ರಸ್ತೆಗೆ ಮರುಡಾಂಬರೀಕರಣ ಮಾಡಬೇಕೆಂದು ವಿವಿಧ ಸಂಘಟನೆಗಳು ಕಳೆದ 5 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನ ಸಚಿವರ ಭರವಸೆಯ ಮೇರೆಗೆ ಇಂದು ವಾಪಸ್ ಪಡೆಯುವ ಮೂಲಕ ಮುಕ್ತಾಯಗೊಳಿಸಿದರು.

ಇದಕ್ಕೂ ಮುನ್ನ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಎಂದು ಪಟ್ಟುಹಿಡಿದಿದ್ದರು. ಹಾಗಾಗಿ ಪ್ರತಿಭಟನೆಯ ಕಾರಣವೆನೆಂಬುದನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಸ್ಥಳೀಯ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವರಿಕೆ ಮಾಡಿಕೊಟ್ಟ ಹಿನ್ನಲೆಯಲ್ಲಿ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಿ ಪ್ರತಿಭಟನೆಯನ್ನ ಹಿಂಪಡೆಯುವಂತೆ ಮಾಡಿದ್ರು.

ಸಚಿವರು ಬರುವುದಕ್ಕೂ ಮುನ್ನ ಪ್ರತಿಭಟನಾಕಾರರು ಮಳೆಯಲ್ಲಿಯೇ ಪ್ರತಿಭಟನೆ ಮಾಡಿದ್ದಷ್ಟೆಯಲ್ಲದೇ ರಸ್ತೆಯಲ್ಲಿಯೇ ಕಬ್ಬಡ್ಡಿಯಾಡುವ ಮೂಲಕ ಮಳೆಯಲ್ಲಿ ಮಿಂದೆದ್ದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಮಾಧುಸ್ವಾಮಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದರು. ಈ ವೇಳೆ ಸುರಿಯುತ್ತಿರುವ ಮಳೆಯಲ್ಲಿ ಕಾಮಗಾರಿ ಮಾಡಿದರೆ ಪ್ರಯೋಜನವಿಲ್ಲ. ನಾನು ಇನ್ನು 3-4 ದಿನ ಬೆಂಗಳೂರಿಗೆ ಹೋಗುವುದು ಕಷ್ಟ. ಕಾರಣ ಮಂಗಳೂರು, ಬೆಳಗಾಂ, ಜಿಲ್ಲೆಯಲ್ಲಿ ಪ್ರವಾಸವಿದೆ. ಹಾಗಾಗಿ ಬೆಂಗಳೂರಿಗೆ ಹೋದಬಳಿಕ ಕಾಮಗಾರಿ ಹೇಗೆ ಮಾಡಬೇಕೆಂಬ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಲೋಕೋಪಯೋಗಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಂಗಳವಾರ ಕರೆಯಲಾಗಿದ್ದು, ಅಲ್ಲಿಗೆ ನೀವೆಲ್ಲಾ ಬಂದು ಸಭೆಯಲ್ಲಿ ಭಾಗವಹಿಸಿ, ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಆಹ್ವಾನ ನೀಡಿದರು.

ಇನ್ನು ಕಾಡಾನೆ ಸಮಸ್ಯೆ ಬಗೆಹರಿಸಲು ಸರ್ಕಾರ ರೈಲೆ ಕಂಬಿ ನಿರ್ಮಾಣಕ್ಕಾಗಿ 100 ಕೋಟಿ ರೂ., ಹಣ ಬಿಡುಗಡೆ ಮಾಡಿದ್ದು, ಇದರಲ್ಲಿ ತಾಲೂಕು ವ್ಯಾಪ್ತಿಯ 12 ಕಿ.ಮೀ ಸೇರಿಕೊಳ್ಳುತ್ತದೆ. ಕಂಬಿ ಅಳವಡಿಸಲು ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಪ್ರದೇಶ ಹುಡುಕಲು ಆದೇಶಿಸಲಾಗಿದೆ ಎಂದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನ ಹಿಂಪಡೆದುಕೊಂಡರು.

ಈ ವೇಳೆ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಕನ್ನಡ ಪರ ಹೋರಾಟಗಾರ ಬಾಳ್ಳುಗೋಪಾಲ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್ ಮುಂತಾದವರಿದ್ದರು.


Body:0


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.