ETV Bharat / state

ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ರೇವಣ್ಣ - HDRevanna pressmeet news

ರಾಜ್ಯದ 12 ಜಿಲ್ಲೆಗಳಲ್ಲಿ ಒಟ್ಟು 35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಆದರೆ ಇದುವರೆಗೂ ಒಂದು ಬಿಡಿಗಾಸು ಬಿಡುಗಡೆಯಾಗಿಲ್ಲ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿಶ್ವಾಸ ಪಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಕಿಡಿಕಾರಿದರು.

ಹೆಚ್​.ಡಿ.ರೇವಣ್ಣ
author img

By

Published : Oct 1, 2019, 8:59 PM IST

ಹಾಸನ: ರಾಜ್ಯದ 12 ಜಿಲ್ಲೆಗಳಲ್ಲಿ ಒಟ್ಟು 35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಆದರೆ ಇದುವರೆಗೂ ಒಂದು ಬಿಡಿಗಾಸು ಬಿಡುಗಡೆಯಾಗಿಲ್ಲ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿಶ್ವಾಸ ಪಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಕಿಡಿಕಾರಿದರು.

ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ಮಾಜಿ ಸಚಿವ ಹೆಚ್​.ಡಿ.ರೇವಣ್ಣ

ಇವರ ಕೈಗೆ ಸರ್ಕಾರ ಕೊಟ್ಟಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದ ಕೊಡಗು ಹಾಗೂ ಇತರೆಡೆ ಅತಿವೃಷ್ಟಿ ಆದಾಗ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಿದ್ದರು ಎಂದರು.

ಸರ್ಕಸ್​​ನಲ್ಲಿ ಹೆಣ್ಣುಮಕ್ಕಳು ತಂತಿ ಮೇಲೆ ನಡೆಯುವಂತೆ ಇಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಸ್ಥಿತಿ ಬಂದಿದೆ. ನೆರೆ ಪರಿಹಾರ ಕಾರ್ಯ ನಿಭಾಯಿಸಲು ಸೋತ ಸರ್ಕಾರ, ಇದನ್ನು ಮರೆಮಾಚಲು ದೂರವಾಣಿ ಕದ್ದಾಲಿಕೆ ಹಾಗೂ ಇತರೆ ವಿವಾದವನ್ನು ಪ್ರಸ್ತಾಪ ಮಾಡುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ದೂರಿದರು.

ಲೋಕಸಭಾ ಚುನಾವಣೆ ವೇಳೆ ರಾಜ್ಯದ ಮಂಡ್ಯ, ತುಮಕೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಬೇಹುಗಾರಿಕೆ ನಡೆಸಿತ್ತು. ಈ ಮೂಲಕ ಪ್ರಾದೇಶಿಕ ಜೆಡಿಎಸ್ ಪಕ್ಷವನ್ನು ತುಳಿಯಲು ಎರಡು ರಾಷ್ಟ್ರೀಯ ಪಕ್ಷಗಳು ಹುನ್ನಾರ ನಡೆಸಿದವು ಎಂದು ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದರು.

ಯಾವುದೇ ಪಕ್ಷದಿಂದ ಜೆಡಿಎಸ್ ಪಕ್ಷವನ್ನು ತುಳಿಯಲು ಸಾಧ್ಯವಿಲ್ಲ. ದ್ವೇಷದ ರಾಜಕೀಯ ಮಾಡಲ್ಲ ಎಂದು ಯಡಿಯೂರಪ್ಪ ಹೇಳುತ್ತಾರೆ. ಆದರೆ ದಿನ ಬೆಳಗಾದರೆ ದೂರವಾಣಿ ಸೇರಿದಂತೆ ಹಲವು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ. ಸಕಲೇಶಪುರದಲ್ಲಿ 20 ಸೇತುವೆ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ. 20 ಕೋಟಿ ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಬೇಲೂರಿನಲ್ಲಿ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದ ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಉದ್ಯೋಗ ಖಾತ್ರಿ ಯೋಜನೆಯ 63 ಕೋಟಿ ರೂ. ಬಿಡುಗಡೆಯಾಗಿಲ್ಲ. 19 ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನ: ರಾಜ್ಯದ 12 ಜಿಲ್ಲೆಗಳಲ್ಲಿ ಒಟ್ಟು 35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಆದರೆ ಇದುವರೆಗೂ ಒಂದು ಬಿಡಿಗಾಸು ಬಿಡುಗಡೆಯಾಗಿಲ್ಲ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿಶ್ವಾಸ ಪಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಕಿಡಿಕಾರಿದರು.

ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ಮಾಜಿ ಸಚಿವ ಹೆಚ್​.ಡಿ.ರೇವಣ್ಣ

ಇವರ ಕೈಗೆ ಸರ್ಕಾರ ಕೊಟ್ಟಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದ ಕೊಡಗು ಹಾಗೂ ಇತರೆಡೆ ಅತಿವೃಷ್ಟಿ ಆದಾಗ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಿದ್ದರು ಎಂದರು.

ಸರ್ಕಸ್​​ನಲ್ಲಿ ಹೆಣ್ಣುಮಕ್ಕಳು ತಂತಿ ಮೇಲೆ ನಡೆಯುವಂತೆ ಇಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಸ್ಥಿತಿ ಬಂದಿದೆ. ನೆರೆ ಪರಿಹಾರ ಕಾರ್ಯ ನಿಭಾಯಿಸಲು ಸೋತ ಸರ್ಕಾರ, ಇದನ್ನು ಮರೆಮಾಚಲು ದೂರವಾಣಿ ಕದ್ದಾಲಿಕೆ ಹಾಗೂ ಇತರೆ ವಿವಾದವನ್ನು ಪ್ರಸ್ತಾಪ ಮಾಡುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ದೂರಿದರು.

ಲೋಕಸಭಾ ಚುನಾವಣೆ ವೇಳೆ ರಾಜ್ಯದ ಮಂಡ್ಯ, ತುಮಕೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಬೇಹುಗಾರಿಕೆ ನಡೆಸಿತ್ತು. ಈ ಮೂಲಕ ಪ್ರಾದೇಶಿಕ ಜೆಡಿಎಸ್ ಪಕ್ಷವನ್ನು ತುಳಿಯಲು ಎರಡು ರಾಷ್ಟ್ರೀಯ ಪಕ್ಷಗಳು ಹುನ್ನಾರ ನಡೆಸಿದವು ಎಂದು ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದರು.

ಯಾವುದೇ ಪಕ್ಷದಿಂದ ಜೆಡಿಎಸ್ ಪಕ್ಷವನ್ನು ತುಳಿಯಲು ಸಾಧ್ಯವಿಲ್ಲ. ದ್ವೇಷದ ರಾಜಕೀಯ ಮಾಡಲ್ಲ ಎಂದು ಯಡಿಯೂರಪ್ಪ ಹೇಳುತ್ತಾರೆ. ಆದರೆ ದಿನ ಬೆಳಗಾದರೆ ದೂರವಾಣಿ ಸೇರಿದಂತೆ ಹಲವು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ. ಸಕಲೇಶಪುರದಲ್ಲಿ 20 ಸೇತುವೆ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ. 20 ಕೋಟಿ ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಬೇಲೂರಿನಲ್ಲಿ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದ ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಉದ್ಯೋಗ ಖಾತ್ರಿ ಯೋಜನೆಯ 63 ಕೋಟಿ ರೂ. ಬಿಡುಗಡೆಯಾಗಿಲ್ಲ. 19 ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:ಹಾಸನ : ಪ್ರವಾಹ ಬಂದು ರಾಜ್ಯದಲ್ಲಿ ಕೋಟ್ಯಾಂತರ ರೂಗಳ ನಷ್ಟವಾಗಿದ್ದು, ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ವಿಪಕ್ಷಗಳ ವಿಶ್ವಾಸ ಪಡೆದು ಕೇಂದ್ರ ನಿಯೋಗ ಕರೆದುಕೊಂಡು ಹೋಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಎಚ್ ಡಿ ರೇವಣ್ಣ ಸಲಹೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ 12 ಜಿಲ್ಲೆಗಳಲ್ಲಿ ಒಟ್ಟು 35 ಸಾವಿರ ಕೋಟಿ ರೂಗಳಷ್ಟು ನಷ್ಟ ವಾಗಿದ್ದರೂ ಇದುವರೆಗೂ ಒಂದು ಬಿಡುಗಾಸು ಬಿಡುಗಡೆಯಾಗಿಲ್ಲ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ವಿಶ್ವಾಸ ಪಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಇವರ ಕೈಗೆ ಸರ್ಕಾರ ಕೊಟ್ಟಾಗಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದ ಕೊಡಗು ಹಾಗೂ ಇತರೆಡೆ ಅತಿವೃಷ್ಟಿ ಯಾದಾಗ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಿದ್ದರು ಹಾಗೂ ಕಲ್ಪಿಸಿದ್ದರು ಎಂದರು.

ಸರ್ಕಸ್ ನಲ್ಲಿ ಹೆಣ್ಣುಮಕ್ಕಳು ತಂತಿ ಮೇಲೆ ನಡೆಯುವಂತೆ ಇಂದು ಬಿಎಸ್ ಯಡಿಯೂರಪ್ಪ ರವರ ಪರಿಸ್ಥಿತಿ ಬಂದಿದೆ. ಈ ಕುರ್ಚಿಯಲ್ಲಿ ನಮ್ಮಂತಹ ಯಾರಾದರೂ ಇದ್ದಿದ್ದರೆ ಇಷ್ಟೊತ್ತಿಗೆ ಸ್ಥಾನಕ್ಕೆ ರಾಜೀನಾಮೆ ನೀಡಿ ಬರುತ್ತಿದ್ದೇ ಎಂದರು.

ನೆರೆ ಪರಿಹಾರ ಕಾರ್ಯ ನಿಭಾಯಿಸಲು ತಯಾರಾಗಿರುವ ಸರ್ಕಾರ ಇದನ್ನು ಮರೆಮಾಚಲು ದೂರವಾಣಿ ಕದ್ದಾಲಿಕೆ ಹಾಗೂ ಇತರೆ ವಿವಾದವನ್ನು ಪ್ರಸ್ತಾಪ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು.

ಲೋಕಸಭಾ ಚುನಾವಣೆ ವೇಳೆ ರಾಜ್ಯದ ಮಂಡ್ಯ, ತುಮಕೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಕೇಂದ್ರಸರ್ಕಾರ ಬೇಹುಗಾರಿಕೆ ನಡೆಸಿತ್ತು. ಈ ಮೂಲಕ ಪ್ರಾದೇಶಿಕ ಜೆಡಿಎಸ್ ಪಕ್ಷವನ್ನು ತುಳಿಯಲು ಎರಡು ರಾಷ್ಟ್ರೀಯ ಪಕ್ಷಗಳು ಹುನ್ನಾರ ನಡೆಸಿದವು ಎಂದು ಎಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದರು.

ಯಾವುದೇ ಪಕ್ಷದಿಂದ ಜೆಡಿಎಸ್ ಪಕ್ಷವನ್ನು ತುಳಿಯಲು ಸಾಧ್ಯವಿಲ್ಲ ಎಂದು ಹೇಳಿದ ರೇವಣ್ಣ ದ್ವೇಶದ ರಾಜಕೀಯ ಮಾಡಲ್ಲ ಎಂದು ಯಡಿಯೂರಪ್ಪ ಹೇಳುತ್ತಾರೆ ಆದರೆ ದಿನಬೆಳಗಾದರೆ ದೂರವಾಣಿ ಸೇರಿದಂತೆ ಹಲವು ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ. ಸಕಲೇಶಪುರದಲ್ಲಿ 20 ಸೇತುವೆ ಕಾಮಗಾರಿಗೆ ಬ್ರೇಕ್ ಹಾಕಿದ್ದಾರೆ, 20 ಕೋಟಿ ಕಾಮಗಾರಿಗೆ ತಡೆಯೊಡ್ಡಿದ್ದಾರೆ ಬೇಲೂರಿನಲ್ಲಿ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದ ಕಾಮಗಾರಿಗೆ ತಡೆಯೊಡ್ಡಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಉದ್ಯೋಗ ಖಾತ್ರಿ ಯೋಜನೆಯ 63 ಕೋಟಿ ರೂ. ಬಿಡುಗಡೆಯಾಗಿಲ್ಲ. 19 ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಹಣ ಬಿಡುಗಡೆ ಮಾಡಿಲ್ಲ ಎಂದ ಅವರು ಹೊಳೆನರಸೀಪುರ ತಾಲೂಕಿನಲ್ಲಿ ಈ ಯೋಜನೆ ಲಕ್ಷಾಂತರ ಹಣ ಬಾಕಿ ಇದೆ ಎಂದು ಆಪಾದಿಸಿದರು.

15 ದಿನ ಅಧಿವೇಶನ :
ಕನಿಷ್ಠ 15 ದಿನ ಅಧಿವೇಶನ ನಡೆಸಲು ಒತ್ತಾಯಿಸಿದ ರೇವಣ್ಣ ಈ ವೇಳೆ 12 ಜಿಲ್ಲೆಯ ನೆರೆಹಾವಳಿ ಕುರಿತು ಪರಿಶೀಲನೆ ಹಾಗೂ ಗಂಭೀರ ಚರ್ಚೆ ನಡೆಸಲಿ ಎಂದರು. ಉಪಚುನಾವಣೆ ಮುಂದೂಡಲಾಗಿದೆ ಅದರಿಂದ ಹೆಚ್ಚು ದಿನ ಅಧಿವೇಶನ ಕರೆಯಲಿ ಎಂದರು.

ದಾಖಲೆ ತಿದ್ದುವ ಅಧಿಕಾರಿ :
ದಾಖಲೆ ತಿದ್ದುವ ಅಧಿಕಾರಿಗಳು ಜಿಲ್ಲೆಗೆ ವರ್ಗವಾಗಿ ಬಂದಿದ್ದು, ಜಿಲ್ಲಾಧಿಕಾರಿ ಜಾಗೃತವಾಗಿರಬೇಕು. ಇಲ್ಲ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೇವಣ್ಣ ಎಚ್ಚರಿಕೆ ನೀಡಿದರು. ಆದರೆ ಯಾವ ದಾಖಲೆಯನ್ನು ಅವರು ತಿದ್ದಲು ಬಂದಿದ್ದಾರೆ ಎಂದು ರೇವಣ್ಣ ಸ್ಪಷ್ಟನೆ ನೀಡಿದೆ ಮುಂದಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸುವುದಾಗಿ ಮಾಹಿತಿ ನೀಡಿದರು.

ಬೈಟ್ 1 : ಎಚ್. ಡಿ. ರೇವಣ್ಣ, ಮಾಜಿ ಸಚಿವ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.