ETV Bharat / state

ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಪ್ರತಿಭಟನೆ: ಕಸಾಪ ಅಧ್ಯಕ್ಷ ಮಂಜೇಗೌಡ ಎಚ್ಚರಿಕೆ

author img

By

Published : Dec 24, 2019, 12:26 PM IST

ತುರ್ತಾಗಿ ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಎಚ್ಚರಿಸಿದರು.

hassan
ಕಸಾಪ ಅಧ್ಯಕ್ಷ ಮಂಜೇಗೌಡ

ಹಾಸನ: ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಎಚ್ಚರಿಸಿದರು.

ಕಸಾಪ ಅಧ್ಯಕ್ಷ ಮಂಜೇಗೌಡ

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನಾಟಕಗಳ ಪ್ರದರ್ಶನ ಕಾರ್ಯಕ್ರಮದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದ್ರು.

ಜನಪ್ರತಿನಿಧಿಗಳು ತಮ್ಮ ಗೌರವ ಹೆಚ್ಚಿಸಿಕೊಳ್ಳಬೇಕಾದರೆ ಕೂಡಲೇ ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಪ್ರಾರಂಭಿಸಬೇಕು. ಇಲ್ಲವಾದರೆ ಡಿ. 25ರೊಳಗೆ ಎಲ್ಲಾ ಕನ್ನಡಪರ ಸಂಘಟನೆಗಳ, ಕಲಾವಿದರ ತುರ್ತು ಸಭೆಯನ್ನು ಜಿಲ್ಲಾ ಕಸಾಪದಲ್ಲಿ ಕರೆಯಲಾಗುವುದು. ನಂತರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ, ಕಲಾಭವನಕ್ಕೆ ಬೀಗ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.ಈ ಮೂಲಕ ಜಿಲ್ಲಾಡಳಿತ ಹಾಗು ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುವುದಾಗಿ ಮಂಜೇಗೌಡ ಎಚ್ಚರಿಸಿದರು.

ಇನ್ನು ಜಿಲ್ಲೆಯಲ್ಲಿ ಉತ್ತಮ ಕಲಾವಿದರಿದ್ದಾರೆ. ಯುವಕರಿಗೆ ಕನ್ನಡ ಸಾಹಿತ್ಯ ಪರಿಷತ್​ ಮೂಲಕ ಹಿರಿಯ ಕಲಾವಿದರಿಂದ ಉಚಿತ ತರಬೇತಿ ಕೊಡಿಸುವ ಕಾರ್ಯಾಗಾರ ಮಾಡುವ ಉದ್ದೇಶವಿದೆ. ಕಸಾಪ ಆವರಣದಲ್ಲಿ ಕಲಾವಿದರಿಗಾಗಿ ಒಂದು ಕೊಠಡಿ ನಿರ್ಮಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಹಾಸನ: ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಎಚ್ಚರಿಸಿದರು.

ಕಸಾಪ ಅಧ್ಯಕ್ಷ ಮಂಜೇಗೌಡ

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನಾಟಕಗಳ ಪ್ರದರ್ಶನ ಕಾರ್ಯಕ್ರಮದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದ್ರು.

ಜನಪ್ರತಿನಿಧಿಗಳು ತಮ್ಮ ಗೌರವ ಹೆಚ್ಚಿಸಿಕೊಳ್ಳಬೇಕಾದರೆ ಕೂಡಲೇ ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಪ್ರಾರಂಭಿಸಬೇಕು. ಇಲ್ಲವಾದರೆ ಡಿ. 25ರೊಳಗೆ ಎಲ್ಲಾ ಕನ್ನಡಪರ ಸಂಘಟನೆಗಳ, ಕಲಾವಿದರ ತುರ್ತು ಸಭೆಯನ್ನು ಜಿಲ್ಲಾ ಕಸಾಪದಲ್ಲಿ ಕರೆಯಲಾಗುವುದು. ನಂತರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ, ಕಲಾಭವನಕ್ಕೆ ಬೀಗ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.ಈ ಮೂಲಕ ಜಿಲ್ಲಾಡಳಿತ ಹಾಗು ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುವುದಾಗಿ ಮಂಜೇಗೌಡ ಎಚ್ಚರಿಸಿದರು.

ಇನ್ನು ಜಿಲ್ಲೆಯಲ್ಲಿ ಉತ್ತಮ ಕಲಾವಿದರಿದ್ದಾರೆ. ಯುವಕರಿಗೆ ಕನ್ನಡ ಸಾಹಿತ್ಯ ಪರಿಷತ್​ ಮೂಲಕ ಹಿರಿಯ ಕಲಾವಿದರಿಂದ ಉಚಿತ ತರಬೇತಿ ಕೊಡಿಸುವ ಕಾರ್ಯಾಗಾರ ಮಾಡುವ ಉದ್ದೇಶವಿದೆ. ಕಸಾಪ ಆವರಣದಲ್ಲಿ ಕಲಾವಿದರಿಗಾಗಿ ಒಂದು ಕೊಠಡಿ ನಿರ್ಮಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

Intro:ಹಾಸನ: ತುರ್ತಾಗಿ ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೇ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಎಚ್ಚರಿಸಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ಸಂಯುಕ್ತಾಶ್ರಯದಲಿ ಏರ್ಪಡಿಸಲಾಗಿದ್ದ ನಾಟಕಗಳ ಪ್ರದರ್ಶನ ಕಾರ್ಯಕ್ರಮದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಈ ಕಲಾಭವನ ನಿರ್ಮಿಸಲು ಯಾವ ರಾಜಕಾರಣಿ ದುಡ್ಡನ್ನು ಬಳಸಿಲ್ಲ. ಪ್ರತಿ ನಾಗರೀಕನ ಹಣವು ಕಲಾಭವನ ನಿರ್ಮಾಣಕ್ಕೆ ಸೇರಿದೆ. ಜನಪ್ರತಿನಿಧಿಗಳು ತಮ್ಮ ಗೌರವ ಹೆಚ್ಚಿಸಿಕೊಳ್ಳಬೇಕಾದರೇ ಕೂಡಲೇ ಹಾಸನಾಂಬ ಕಲಾಕ್ಷೇತ್ರದ ದುರಸ್ತಿಯನ್ನು ಪ್ರಾರಂಭ ಮಾಡಬೇಕು ಎಂದರಲ್ಲದೇ, ಇಲ್ಲವಾದರೇ ಡಿ. ೨೫ರ ಒಳಗೆ ಎಲ್ಲಾ ಕನ್ನಡಪರ ಸಂಘಟನೆಯ, ಕಲಾವಿಧರ ತುರ್ತು ಸಭೆಯನ್ನು ಜಿಲ್ಲಾ ಕಸಾಪ ದಲ್ಲಿ ಕರೆಯಲಾಗುವುದು. ನಂತರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ, ಕಲಾಭವನಕ್ಕೆ ಬೀಗ ಹಾಕುವ ಕಾರ್ಯಕ್ರಮವನ್ನು ಮುಂದಿನ ವಾರದಲ್ಲಿ ಮಾಡುವ ಮೂಲಕ ಜಿಲ್ಲಾಡಳಿತಕ್ಕೆ ಮತ್ತು ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುವುದಾಗಿ ಎಚ್ಚರಿಸಿದರು.

ಕಲಾಭವನವನ್ನು ಶೀಘ್ರ ದುರಸ್ತಿ ಮಾಡಿ ಕಲಾವಿಧರಿಗೆ ಪ್ರೋತ್ಸಹ ಕೊಡುವ ನಿಟ್ಟಿನಲ್ಲಿ ಕೈಜೋಡಿಸಲು ಮನವಿ ಮಾಡಿದರು. ಪ್ರಜೆಗಳು ಸುಖವಾಗಿದ್ದರೇ ಜನಪ್ರತಿನಿಧಿಗಳು ಸಂತೋಷವಾಗಿರುತ್ತಾರೆ. ಈ ನಿಟ್ಟಿನಲ್ಲಿ ಎಚ್ಚರಿಸುವ ಕೆಲಸವನ್ನು ನಾವು ಮಾಡಲಾಗುವುದು ಎಂದರು.

ಹಾಸನ ಜಿಲ್ಲೆಯಲ್ಲಿ ಉತ್ತಮವಾದ ಕಲಾವಿದರು ಇದ್ದಾರೆ. ಯುವಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮೂಲಕ ಹಿರಿಯ ಕಲಾವಿದರಿಂದ ಉಚಿತ ತರಬೇತಿ ಕೊಡಿಸುವ ಕಾರ್ಯಗಾರ ಮಾಡುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ. ಕಸಾಪ ಆವರಣದಲ್ಲಿ ಕಲಾವಿದರಿಗಾಗಿ ಒಂದು ಕೊಠಡಿ ನಿರ್ಮಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಬೈಟ್ : ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.