ETV Bharat / state

ದೆಹಲಿಯಲ್ಲಿ ನಡೆಯುವ ಬೃಹತ್​ ರ‍್ಯಾಲಿಯಲ್ಲಿ ರಾಜ್ಯದ ರೈತರು ಭಾಗಿ: ಕೋಡಿಹಳ್ಳಿ ಚಂದ್ರಶೇಖರ್​

author img

By

Published : Nov 13, 2020, 4:03 PM IST

ರೈತ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನ. 26 ಮತ್ತು 27 ರಂದು ನಡೆಯುವ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯದ ರೈತರು ಭಾಗವಹಿಸಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಮಾಹಿತಿ ನೀಡಿದ್ರು.

kodihalli chandrashekhar pressmeet in hassan
ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಟಿ

ಹಾಸನ : ರೈತ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ರೈತರು ಭಾಗವಹಿಸಲಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನ. 26 ಮತ್ತು 27ರಂದು ನಡೆಯುವ ಬೃಹತ್ ಪ್ರತಿಭಟನಾ ರ‍್ಯಾಲಿ ವೇಳೆ ರಾಮಲೀಲಾ ರಸ್ತೆ ಮೂಲಕ ಪಾರ್ಲಿಮೆಂಟ್​ವರೆಗೆ ಸಾಗಿ ಪ್ರತಿಭಟನೆ ನಡೆಸಲಾಗುವುದು ಎಂದರು. ರಾಜ್ಯದಿಂದಲೂ ಸಹ ನೂರಾರು ರೈತರು ತೆರಳಲಿದ್ದಾರೆ. ಈ ಬಾರಿ ಹವಾಮಾನ ವೈಪರೀತ್ಯ ಹಾಗೂ ಕೊರೊನಾ ಹಾವಳಿ ಹಿನ್ನೆಲೆ ನ. 20ರ ನಂತರ ಪರಿಸ್ಥಿತಿ ಅವಲೋಕಿಸಿ ಎಷ್ಟು ರೈತರು ದೆಹಲಿಯಲ್ಲಿ ಭಾಗವಹಿಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೆಟ್ರೋಲಿಯಂ, ರೈಲ್ವೆ, ವಿದ್ಯುತ್, ಜೀವ ವಿಮೆ ಸೇರಿದಂತೆ ಹಲವು ವಲಯಗಳನ್ನು ಕೇಂದ್ರ ಸರ್ಕಾರ ಖಾಸಗಿಯವರಿಗೆ ವಹಿಸಿದೆ. ಇದೀಗ ಕೃಷಿ ವಲಯದ ಮೇಲೂ ಕೂಡ ಇದೇ ರೀತಿ ಕ್ರಮ ಮುಂದುವರೆದರೆ ದೇಶದ ರೈತರು ಹಾಗೂ ಸಾರ್ವಜನಿಕ ವಲಯಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಆದ್ದರಿಂದ ಕಾಯ್ದೆ ಹಿಂಪಡೆಯಲು ಆಗ್ರಹಿಸಿದರು. ಪಂಜಾಬ್ ಮುಖ್ಯಮಂತ್ರಿ ರೈತ ವಿರೋಧಿಯಾದ ಯಾವುದೇ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೇರಿದರೆ ಅದನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ರಾಜಸ್ಥಾನ ಸರ್ಕಾರ ಕೂಡ ಆ ರಾಜ್ಯದಲ್ಲಿ ಕಾಯ್ದೆ ಜಾರಿಗೆ ಒಪ್ಪಿರುವುದಿಲ್ಲ. ಆದರೆ ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಹೇಳಿದರು.

ಹಾಸನ : ರೈತ ವಿರೋಧಿ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ರೈತರು ಭಾಗವಹಿಸಲಿದ್ದಾರೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನ. 26 ಮತ್ತು 27ರಂದು ನಡೆಯುವ ಬೃಹತ್ ಪ್ರತಿಭಟನಾ ರ‍್ಯಾಲಿ ವೇಳೆ ರಾಮಲೀಲಾ ರಸ್ತೆ ಮೂಲಕ ಪಾರ್ಲಿಮೆಂಟ್​ವರೆಗೆ ಸಾಗಿ ಪ್ರತಿಭಟನೆ ನಡೆಸಲಾಗುವುದು ಎಂದರು. ರಾಜ್ಯದಿಂದಲೂ ಸಹ ನೂರಾರು ರೈತರು ತೆರಳಲಿದ್ದಾರೆ. ಈ ಬಾರಿ ಹವಾಮಾನ ವೈಪರೀತ್ಯ ಹಾಗೂ ಕೊರೊನಾ ಹಾವಳಿ ಹಿನ್ನೆಲೆ ನ. 20ರ ನಂತರ ಪರಿಸ್ಥಿತಿ ಅವಲೋಕಿಸಿ ಎಷ್ಟು ರೈತರು ದೆಹಲಿಯಲ್ಲಿ ಭಾಗವಹಿಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೆಟ್ರೋಲಿಯಂ, ರೈಲ್ವೆ, ವಿದ್ಯುತ್, ಜೀವ ವಿಮೆ ಸೇರಿದಂತೆ ಹಲವು ವಲಯಗಳನ್ನು ಕೇಂದ್ರ ಸರ್ಕಾರ ಖಾಸಗಿಯವರಿಗೆ ವಹಿಸಿದೆ. ಇದೀಗ ಕೃಷಿ ವಲಯದ ಮೇಲೂ ಕೂಡ ಇದೇ ರೀತಿ ಕ್ರಮ ಮುಂದುವರೆದರೆ ದೇಶದ ರೈತರು ಹಾಗೂ ಸಾರ್ವಜನಿಕ ವಲಯಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಆದ್ದರಿಂದ ಕಾಯ್ದೆ ಹಿಂಪಡೆಯಲು ಆಗ್ರಹಿಸಿದರು. ಪಂಜಾಬ್ ಮುಖ್ಯಮಂತ್ರಿ ರೈತ ವಿರೋಧಿಯಾದ ಯಾವುದೇ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೇರಿದರೆ ಅದನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ರಾಜಸ್ಥಾನ ಸರ್ಕಾರ ಕೂಡ ಆ ರಾಜ್ಯದಲ್ಲಿ ಕಾಯ್ದೆ ಜಾರಿಗೆ ಒಪ್ಪಿರುವುದಿಲ್ಲ. ಆದರೆ ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.