ETV Bharat / state

ಹಾಸನ: ಹೊಸದಾಗಿ 104 ಕೋವಿಡ್‌ ಪ್ರಕರಣ ಪತ್ತೆ, ಒಂದು ಸಾವು

author img

By

Published : Oct 19, 2020, 5:13 PM IST

ಹಾಸನ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಓರ್ವ ಸೋಂಕಿತ ಮೃತಪಟ್ಟಿದ್ದು, ಹೊಸದಾಗಿ 104 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

kovid-19  cases updates from hassan district
ಆರೋಗ್ಯಾಧಿಕಾರಿ ಸತೀಶ್

ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 104 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,321 ಕ್ಕೆ ಏರಿಕೆಯಾಗಿದೆ.

ಆರೋಗ್ಯಾಧಿಕಾರಿ ಸತೀಶ್

ಇವತ್ತು ಓರ್ವ ಸೋಂಕಿತ ಮೃತಪಟ್ಟಿದ್ದು, ಮೃತರ ಸಂಖ್ಯೆ 397 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಗುಣಮುಖರಾಗಿ ಬಿಡುಗಡೆಯಾದ 469 ಜನರು ಸೇರಿ ಈವರೆಗೆ 20,218 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2706 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ರು.

ತಾಲೂಕುವಾರು ಪ್ರಕರಣ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಅರಕಲಗೂಡು-9, ಅರಸೀಕೆರೆ-1, ಬೇಲೂರು-5, ಚನ್ನರಾಯಪಟ್ಟಣ-10, ಹಾಸನ-73, ಹೊಳೆನರಸೀಪುರ-04, ಸಕಲೇಶಪುರ-1, ಇತರೆ- 0 ಒಟ್ಟು 104 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಆರೋಗ್ಯಾಧಿಕಾರಿ ಮನವಿ :

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರು ಸಹಕರಿಸಬೇಕೆಂದು ಎಂದು ಸತೀಶ್​ ಮನವಿ ಮಾಡಿದರು.

ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 104 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,321 ಕ್ಕೆ ಏರಿಕೆಯಾಗಿದೆ.

ಆರೋಗ್ಯಾಧಿಕಾರಿ ಸತೀಶ್

ಇವತ್ತು ಓರ್ವ ಸೋಂಕಿತ ಮೃತಪಟ್ಟಿದ್ದು, ಮೃತರ ಸಂಖ್ಯೆ 397 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಗುಣಮುಖರಾಗಿ ಬಿಡುಗಡೆಯಾದ 469 ಜನರು ಸೇರಿ ಈವರೆಗೆ 20,218 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2706 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ರು.

ತಾಲೂಕುವಾರು ಪ್ರಕರಣ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಅರಕಲಗೂಡು-9, ಅರಸೀಕೆರೆ-1, ಬೇಲೂರು-5, ಚನ್ನರಾಯಪಟ್ಟಣ-10, ಹಾಸನ-73, ಹೊಳೆನರಸೀಪುರ-04, ಸಕಲೇಶಪುರ-1, ಇತರೆ- 0 ಒಟ್ಟು 104 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಆರೋಗ್ಯಾಧಿಕಾರಿ ಮನವಿ :

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರು ಸಹಕರಿಸಬೇಕೆಂದು ಎಂದು ಸತೀಶ್​ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.