ETV Bharat / state

ಲಾರಿಗೆ ಬಸ್​​​ ಡಿಕ್ಕಿ: ಮಗು ಸೇರಿ 10ಕ್ಕೂ ಹೆಚ್ಚು ಮಂದಿಗೆ ಗಾಯ

author img

By

Published : Nov 9, 2019, 11:02 AM IST

ಕೆಎಸ್​ಆರ್​ಟಿಸಿ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಆಲೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಬಸ್​ ಆಕ್ಸಿಡೆಂಟ್​

ಆಲೂರು: ಕೆಎಸ್ಆರ್​ಟಿಸಿ ಬಸ್ಸೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊರವಲಯದ ಬೈಪಾಸ್ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ಆರ್​ಟಿಸಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಗಢ ಸಂಭವಿಸಿದೆ. ಘಟನೆಯಲ್ಲಿ ಬೆಂಗಳೂರಿನಿಂದ ಕಾರ್ಕಳಕ್ಕೆ ಪ್ರಯಾಣ ಮಾಡುತ್ತಿದ್ದ ಸಂದೀಪ್ ಹಾಗೂ ಅವರ ಮಗ ಸನತ್ (6) ಎಂಬುವರ ತಲೆ ಮತ್ತು ಕೈ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ವಾಹನಗಳನ್ನು ವಶಕ್ಕೆ ಪಡೆದು, ಇನ್ನುಳಿದ ಪ್ರಾಮಾಣಿಕರಿಗೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಟ್ಟಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ ಆಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆಲೂರು: ಕೆಎಸ್ಆರ್​ಟಿಸಿ ಬಸ್ಸೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊರವಲಯದ ಬೈಪಾಸ್ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ಆರ್​ಟಿಸಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಗಢ ಸಂಭವಿಸಿದೆ. ಘಟನೆಯಲ್ಲಿ ಬೆಂಗಳೂರಿನಿಂದ ಕಾರ್ಕಳಕ್ಕೆ ಪ್ರಯಾಣ ಮಾಡುತ್ತಿದ್ದ ಸಂದೀಪ್ ಹಾಗೂ ಅವರ ಮಗ ಸನತ್ (6) ಎಂಬುವರ ತಲೆ ಮತ್ತು ಕೈ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ವಾಹನಗಳನ್ನು ವಶಕ್ಕೆ ಪಡೆದು, ಇನ್ನುಳಿದ ಪ್ರಾಮಾಣಿಕರಿಗೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಟ್ಟಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ ಆಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Intro:Body:

live


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.