ETV Bharat / state

ಜಮೀನು ವ್ಯಾಜ್ಯ: ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

author img

By

Published : Jun 29, 2022, 2:01 PM IST

Updated : Jun 29, 2022, 2:28 PM IST

ಜಮೀನು ವಿವಾದದ ಹಿನ್ನೆಲೆ ಮನೆಗೆ ಬೆಂಕಿ ಹಚ್ಚಿದ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಸಮೀಪದ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

miscreants set fire to the house in Hassan
ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹಾಸನ: ಜಮೀನು ವ್ಯಾಜದ ಹಿನ್ನೆಲೆ ಎರಡು ಸಮುದಾಯಗಳ ನಡುವೆ ಗಲಾಟೆ ಉಂಟಾಗಿ ಮನೆಗೆ ಬೆಂಕಿ ಹಚ್ಚಿದ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಸಮೀಪದ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..

ರಂಗಸ್ವಾಮಿ ಮತ್ತು ರಮೇಶ್ ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಜಮೀನಿನ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ಇವರ ಮಧ್ಯೆ ವ್ಯಾಜ್ಯ ನಡೆಯುತ್ತಿತ್ತು. ಈ ಹಿನ್ನೆಲೆ ಮಂಗಳವಾರ ರಾತ್ರಿ ರಂಗಸ್ವಾಮಿ ಮತ್ತು ಆತನ ಸಹಚರರು ರಮೇಶ್​​ ಮನೆಗೆ ಪೆಟ್ರೋಲ್ ಸರಿದು ಬೆಂಕಿ ಹಾಕಿದ್ದಾರೆ ಎನ್ನಲಾಗ್ತಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ, ಅಷ್ಟರೊಳಗೆ ಬೆಂಕಿಯ ಕೆನ್ನಾಲಿಗೆಯಿಂದ ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ದವಸ ಧಾನ್ಯಗಳು ಸೇರಿ 50 ಲಕ್ಷಕ್ಕೂ ಅಧಿಕ ಮೌಲ್ಯದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ರಾತ್ರಿ ಘಟನೆ ನಡೆದ ಬಳಿಕ ಸ್ಥಳಕ್ಕೆ ನೂತನ ಎಸ್​ಪಿ ಹರಿರಾಮ್ ಶಂಕರ್, ಡಿವೈಎಸ್​ಪಿ ಮುರಳಿಧರ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ನೊಂದ ರಮೇಶ್ ಹಾಗೂ ಕುಟುಂಬದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳ್ಳಿ ಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಜೈಲು ವಾರ್ಡನ್​ ಮೇಲೆ ಗ್ಯಾಂಗ್​ಸ್ಟಾರ್​ಗಳಿಂದ ಹಲ್ಲೆ

ಹಾಸನ: ಜಮೀನು ವ್ಯಾಜದ ಹಿನ್ನೆಲೆ ಎರಡು ಸಮುದಾಯಗಳ ನಡುವೆ ಗಲಾಟೆ ಉಂಟಾಗಿ ಮನೆಗೆ ಬೆಂಕಿ ಹಚ್ಚಿದ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಸಮೀಪದ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..

ರಂಗಸ್ವಾಮಿ ಮತ್ತು ರಮೇಶ್ ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಜಮೀನಿನ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ಇವರ ಮಧ್ಯೆ ವ್ಯಾಜ್ಯ ನಡೆಯುತ್ತಿತ್ತು. ಈ ಹಿನ್ನೆಲೆ ಮಂಗಳವಾರ ರಾತ್ರಿ ರಂಗಸ್ವಾಮಿ ಮತ್ತು ಆತನ ಸಹಚರರು ರಮೇಶ್​​ ಮನೆಗೆ ಪೆಟ್ರೋಲ್ ಸರಿದು ಬೆಂಕಿ ಹಾಕಿದ್ದಾರೆ ಎನ್ನಲಾಗ್ತಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ, ಅಷ್ಟರೊಳಗೆ ಬೆಂಕಿಯ ಕೆನ್ನಾಲಿಗೆಯಿಂದ ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ದವಸ ಧಾನ್ಯಗಳು ಸೇರಿ 50 ಲಕ್ಷಕ್ಕೂ ಅಧಿಕ ಮೌಲ್ಯದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ರಾತ್ರಿ ಘಟನೆ ನಡೆದ ಬಳಿಕ ಸ್ಥಳಕ್ಕೆ ನೂತನ ಎಸ್​ಪಿ ಹರಿರಾಮ್ ಶಂಕರ್, ಡಿವೈಎಸ್​ಪಿ ಮುರಳಿಧರ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ನೊಂದ ರಮೇಶ್ ಹಾಗೂ ಕುಟುಂಬದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳ್ಳಿ ಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಜೈಲು ವಾರ್ಡನ್​ ಮೇಲೆ ಗ್ಯಾಂಗ್​ಸ್ಟಾರ್​ಗಳಿಂದ ಹಲ್ಲೆ

Last Updated : Jun 29, 2022, 2:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.